ಕೋವಿಡ್‌ ನಿಂದ ಮೃತಪಟ್ಟಆರು ಜನ ಪತ್ರಕರ್ತರ ಕುಟುಂಬಕ್ಕೆ ತಲಾ ಐದು ಲಕ್ಷ ರು.ಗಳ ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮಂಜೂರು ಮಾಡಿದ್ದಾರೆ. 

 ಬೆಂಗಳೂರು (ಆ.22) : ಕೋವಿಡ್‌ ಸಂದರ್ಭದಲ್ಲಿ ಮೃತಪಟ್ಟಆರು ಜನ ಪತ್ರಕರ್ತರ ಕುಟುಂಬಕ್ಕೆ ತಲಾ ಐದು ಲಕ್ಷ ರು.ಗಳ ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮಂಜೂರು ಮಾಡಿದ್ದಾರೆ. 

Add Asianetnews Kannada as a Preferred SourcegooglePreferred

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ನೇತೃತ್ವದಲ್ಲಿ ಭೇಟಿ ಮಾಡಿದ ಪತ್ರಕರ್ತರ ನಿಯೋಗದ ಮನವಿಗೆ ಮುಖ್ಯಮಂತ್ರಿಗಳು ತಕ್ಷಣ ಸ್ಪಂದಿಸಿ ಪರಿಹಾರ ಮಂಜೂರು ಮಾಡಿದ್ದಾರೆ. 

ಬೆಂಗಳೂರು: ಲಕ್ಷದ ಅಂಚಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ.

ಪತ್ರಕರ್ತರಾದ ಸೋಮಶೇಖರ್‌ ಯಡವಟ್ಟಿ, ವಿ.ಸಿ.ಹಿರೇಮಠ, ಕೆ.ಎಂ.ಹಾಲಪ್ಪ, ಪರ್ವತಯ್ಯಸ್ವಾಮಿ, ಎಸ್‌.ಎಚ್‌.ಜಯಣ್ಣ, ಬಿ.ಎಂ.ತ್ರಿಮೂರ್ತಿ ಅವರ ಕುಟುಂಬಕ್ಕೆ ಈ ಸೌಲಭ್ಯ ಲಭ್ಯವಾಗಲಿದೆ.