ಕೇಂದ್ರ ಸರ್ಕಾರದ 'ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್' ಯೋಜನೆಯ 23ನೇ ಕಂತಿನ ಹಣವು ರಾಜ್ಯದ 6 ಲಕ್ಷಕ್ಕೂ ಅಧಿಕ ರೈತರಿಗೆ ತಲುಪಿಲ್ಲ. ಇ-ಕೆವೈಸಿ  ಮತ್ತು ಬ್ಯಾಂಕ್ ಖಾತೆಗಳಿಗೆ ಆಧಾರ್ ಲಿಂಕ್ ಮಾಡದಿರುವುದು ಈ ತಾಂತ್ರಿಕ ಸಮಸ್ಯೆಗೆ ಮುಖ್ಯ ಕಾರಣವಾಗಿದೆ. ಹಣ ಬರದಿದ್ದರೆ ತಡಮಾಡದೆ ಈ ಕೆಲಸ ಮಾಡಿ.

ಸಿದ್ದು ಚಿಕ್ಕಬಳ್ಳೇಕೆರೆ

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬೆಂಗಳೂರು (ಜೂ.28): ತಾಂತ್ರಿಕ ಕಾರಣಗಳಿಂದಾಗಿ ರಾಜ್ಯದ 6 ಲಕ್ಷಕ್ಕೂ ಅಧಿಕ ರೈತರು ಕೇಂದ್ರ ಸರ್ಕಾರದ ‘ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ’ಯ 23ನೇ ಕಂತಿನಿಂದ ವಂಚಿತರಾಗಿದ್ದಾರೆ.

ಭೂಮಿ ಹೊಂದಿರುವ ಎಲ್ಲ ರೈತರಿಗೂ 4 ತಿಂಗಳಿಗೊಮ್ಮೆ 2 ಸಾವಿರ ರುಪಾಯಿಯಂತೆ ವರ್ಷಕ್ಕೆ ₹6 ಸಾವಿರ ನೀಡುವ ಕೇಂದ್ರ ಸರ್ಕಾರದ ಕಿಸಾನ್‌ ಸಮ್ಮಾನ್‌ ಯೋಜನೆಯಡಿ ಈಗಾಗಲೇ 22 ಕಂತುಗಳು ಬಿಡುಗಡೆಯಾಗಿದ್ದು, ಜೂ.20 ರಂದು 23ನೇ ಕಂತಿನ ಹಣ ಸಹ ರೈತರ ಖಾತೆಗಳಿಗೆ ನೇರ ನಗದು ವರ್ಗಾವಣೆ(ಡಿಬಿಟಿ) ಮೂಲಕ ಜಮೆಯಾಗಿದೆ.

ರಾಜ್ಯದಲ್ಲಿ ಕಿಸಾನ್‌ ಸಮ್ಮಾನ್‌ ಯೋಜನೆಗೆ 46,69,841 ರೈತರು ಅರ್ಹರಾಗಿದ್ದು, ಇದರಲ್ಲಿ ಬರೋಬ್ಬರಿ 3,80,428 ರೈತರು ಇ-ಕೆವೈಸಿ ಮಾಡಿಸದೇ ಇರುವುದರಿಂದ ಆರ್ಥಿಕ ನೆರವಿನಿಂದ ವಂಚಿತರಾಗಿದ್ದಾರೆ. ಅಷ್ಟೇ ಅಲ್ಲ, 2,27,384 ರೈತರು ತಮ್ಮ ಬ್ಯಾಂಕ್‌ ಖಾತೆಗಳಿಗೆ ಆಧಾರ್‌ ಲಿಂಕ್‌ ಮಾಡದೇ ಇರುವುದರಿಂದ ಯೋಜನೆಯಿಂದ ಹೊರಗೆ ಉಳಿಯುವಂತಾಗಿದೆ.

ಕೃಷಿ ಇಲಾಖೆ ಕಾರ್ಯೋನ್ಮುಖವಾಗಲಿ:

ರಾಜ್ಯದಲ್ಲಿ ಕೃಷಿ ಇಲಾಖೆಯು ಕಿಸಾನ್‌ ಸಮ್ಮಾನ್‌ ಯೋಜನೆಯ ನೋಡೆಲ್‌ ಏಜೆನ್ಸಿಯಾಗಿದ್ದು, ಅಧಿಕಾರಿಗಳ ಮೂಲಕ ರೈತರಿಗೆ ಮಾಹಿತಿ ನೀಡಿ ಹಣ ಬರುವಂತೆ ಮಾಡಬೇಕಾದ ಗುರುತರ ಜವಾಬ್ದಾರಿ ಹೊಂದಿದೆ. ರಾಜ್ಯದಲ್ಲಿ ಅತಿ ಹೆಚ್ಚು ಎಂದರೆ ಬೆಳಗಾವಿ ಜಿಲ್ಲೆಯಲ್ಲಿ 41,459 ರೈತರಿಗೆ ಹಣ ಪಾವತಿಯಾಗಿಲ್ಲ. ತುಮಕೂರು ಜಿಲ್ಲೆ ಎರಡನೇ ಸ್ಥಾನದಲ್ಲಿದ್ದು 41,082 ರೈತರು ಹಣದಿಂದ ವಂಚಿತರಾಗಿದ್ದಾರೆ. ಬೀದರ್‌ ಜಿಲ್ಲೆಯಲ್ಲಿ 29,910 ಅನ್ನದಾತರಿಗೆ ಹಣ ಸಂದಾಯವಾಗಿಲ್ಲ.

ಇ-ಕೆವೈಸಿ ಮಾಡಿಸುವುದು ಹೇಗೆ? (ಇಂಗ್ಲಿಷ್‌ ಇದೆ ಗಮನಿಸಿ)

ಮೂರು ವಿಧಾನಗಳ ಮೂಲಕ ಇ-ಕೆವೈಸಿ ಮಾಡಿಸಬಹುದು. ಪಿಎಂ ಕಿಸಾನ್‌ ಪೋರ್ಟಲ್‌(https://pmkisan.gov.in/) ಮತ್ತು ಮೊಬೈಲ್‌ ಅಪ್ಲಿಕೇಷನ್‌ನಲ್ಲಿ ಆಧಾರ್‌ ಲಿಂಕ್‌ ಮಾಡಿದ ಸಕ್ರಿಯ ಮೊಬೈಲ್‌ ಸಂಖ್ಯೆ ನಮೂದಿಸಿ ಒಟಿಪಿ ಆಧಾರಿತವಾಗಿ ಇ-ಕೆವೈಸಿ ಪೂರ್ಣಗೊಳಿಸಬಹುದು. ನಾಗರಿಕ ಸೇವಾ ಕೇಂದ್ರಗಳು ಮತ್ತು ರಾಜ್ಯ ಸೇವಾ ಕೇಂದ್ರ(ಎಸ್‌ಎಸ್‌ಕೆ)ಕ್ಕೆ ಆಧಾರ್‌ ಕಾರ್ಡ್‌ ಮತ್ತು ಆಧಾರ್‌ಗೆ ಲಿಂಕ್‌ ಆಗಿರುವ ಮೊಬೈಲ್‌ ತೆಗೆದುಕೊಂಡು ಹೋಗಿ ಬಯೋಮೆಟ್ರಿಕ್‌ ನೀಡಿ ಸಹ ಇ-ಕೆವೈಸಿ ಮಾಡಿಸಬಹುದು. ಇದಲ್ಲದೆ, ಪಿಎಂ ಕಿಸಾನ್‌ ಮೊಬೈಲ್‌ ಅಪ್ಲಿಕೇಷನ್‌ನಲ್ಲಿ ಮುಖಚರ್ಯೆ ಆಧಾರಿತ(ಫೇಸ್‌ ರೆಕಗ್ನೇಷನ್‌) ಇ-ಕೆವೈಸಿ ಪೂರ್ಣಗೊಳಿಸಬಹುದು. 24 ಗಂಟೆ ಬಳಿಕ ಇ-ಕೆವೈಸಿಯು ವೆಬ್‌ಸೈಟ್‌ನಲ್ಲಿ ಅಪ್‌ಡೇಟ್‌ ಆಗಲಿದ್ದು, ನಂತರ ಪರಿಶೀಲಿಸಬಹುದು.

ಪ್ರಮುಖ 10 ಜಿಲ್ಲೆಯ ಪಿಎಂ ಕಿಸಾನ್‌ ಫಲಾನುಭವಿಗಳ ಮಾಹಿತಿ