Asianet Suvarna News Asianet Suvarna News

Corona Crisis: ಕರ್ನಾಟಕದಲ್ಲಿ 749 ಕೊರೋನಾ ಪ್ರಕರಣ: ಸತತ 3ನೇ ದಿನ ಸೋಂಕು ಇಳಿಕೆ

ರಾಜ್ಯದಲ್ಲಿ ಸತತ ಮೂರನೇ ದಿನ ಕೊರೋನಾ ಸೋಂಕು ಪ್ರಕರಣಗಳು ಇಳಿಕೆಯಾಗಿವೆ. ಸೋಮವಾರ 749 ಜನರಲ್ಲಿ ಕೊರೋನಾ ದೃಢಪಟ್ಟಿದ್ದು, 940 ಮಂದಿ ಗುಣಮುಖರಾಗಿದ್ದಾರೆ. ಮೈಸೂರಿನಲ್ಲಿ 72 ವರ್ಷದ ವೃದ್ಧೆ ಸಾವಿಗೀಡಾಗಿದ್ದಾರೆ.

749 new coronavirus cases on july 4th in karnataka gvd
Author
Bangalore, First Published Jul 5, 2022, 5:00 AM IST

ಬೆಂಗಳೂರು (ಜು.05): ರಾಜ್ಯದಲ್ಲಿ ಸತತ ಮೂರನೇ ದಿನ ಕೊರೋನಾ ಸೋಂಕು ಪ್ರಕರಣಗಳು ಇಳಿಕೆಯಾಗಿವೆ. ಸೋಮವಾರ 749 ಜನರಲ್ಲಿ ಕೊರೋನಾ ದೃಢಪಟ್ಟಿದ್ದು, 940 ಮಂದಿ ಗುಣಮುಖರಾಗಿದ್ದಾರೆ. ಮೈಸೂರಿನಲ್ಲಿ 72 ವರ್ಷದ ವೃದ್ಧೆ ಸಾವಿಗೀಡಾಗಿದ್ದಾರೆ. ಸದ್ಯ 6474 ಸೋಂಕಿತರು ಆಸ್ಪತ್ರೆ/ಮನೆಯಲ್ಲಿ ಚಿಕಿತ್ಸೆ/ಆರೈಕೆಯಲ್ಲಿದ್ದಾರೆ. 18 ಸಾವಿರ ಸೋಂಕು ಪರೀಕ್ಷೆಗಳು ನಡೆದಿದ್ದು, ಪಾಸಿಟಿವಿಟಿ ದರ ಶೇ 4.1 ರಷ್ಟು ದಾಖಲಾಗಿದೆ. ಭಾನುವಾರಕ್ಕೆ ಹೋಲಿಸಿದರೆ ಸೋಂಕು ಪರೀಕ್ಷೆಗಳು ಏಳು ಸಾವಿರ ಕಡಿಮೆಯಾಗಿದೆ. 

ಹೀಗಾಗಿ ಹೊಸ ಪ್ರಕರಣಗಳು 75 ಇಳಿಕೆಯಾಗಿವೆ. (ಭಾನುವಾರ 826, ಸಾವು ಶೂನ್ಯ) ಕಳೆದ ವಾರ ಒಂದು ಸಾವಿರ ಗಡಿ ದಾಟಿದ್ದ ಹೊಸ ಪ್ರಕರಣಗಳು ಈಗ ಇಳಿಕೆಯಾಗುತ್ತಿವೆ. ಸಕ್ರಿಯ ಸೋಂಕಿತರ ಪೈಕಿ 74 ಮಂದಿ ಮಾತ್ರ ಆಸ್ಪತ್ರೆಯಲ್ಲಿದ್ದು, 6400 ಮಂದಿ ಮನೆಯಲ್ಲಿಯೇ ಆರೈಕೆಯಲ್ಲಿದ್ದಾರೆ. ರಾಜ್ಯದಲ್ಲಿ ಈವರೆಗೆ 39.7 ಲಕ್ಷ ಸೋಂಕು ಪ್ರಕರಣಗಳು ವರದಿಯಾಗಿದ್ದು, 39.2 ಲಕ್ಷ ಮಂದಿ ಗುಣಮುಖರಾಗಿದ್ದಾರೆ. 40,078 ಮಂದಿ ಸಾವಿಗೀಡಾಗಿದ್ದಾರೆ.

ದ.ಕ.ದಲ್ಲಿ 20 ಮಂದಿಗೆ ಕೊರೋನಾ: ದ.ಕ. ಜಿಲ್ಲೆಯಲ್ಲಿ ಸೋಮವಾರ 20 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 18 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 63ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇದುವರೆಗೆ 1,35,869 ಮಂದಿ ಸೋಂಕಿತರಾಗಿದ್ದು, ಅವರಲ್ಲಿ 1,33,954 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 1852 ಮಂದಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯ ಬುಲೆಟಿನ್‌ ತಿಳಿಸಿದೆ.

Covid Crisis: ಮಾಸ್ಕ್‌ ಧರಿಸದವರಿಗೆ ದಂಡ ಹಾಕಿ: ತಜ್ಞರು

ಕೋವಿಡ್‌ ಸೋಂಕು ಪತ್ತೆಯಾದರೆ ಸೀಲ್‌ಡೌನ್‌ ಇಲ್ಲ: ನಗರದಲ್ಲಿ ದಿನದಿಂದ ದಿನಕ್ಕೆ ಕೋವಿಡ್‌ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್‌ ಲಕ್ಷಣಗಳಿರುವವರನ್ನು ಶಾಲೆ, ಕಾಲೇಜು ಮತ್ತು ಕಚೇರಿಗೆ ಹಾಜರಾಗದಂತೆ ಸೂಚಿಸಬೇಕು ಎಂಬುದು ಸೇರಿದಂತೆ ಹಲವು ಮಾರ್ಗಸೂಚಿಗಳನ್ನು ಒಳಗೊಂಡ ಮಾರ್ಗಸೂಚಿಯನ್ನು ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಹೊರಡಿಸಿದೆ. ನಗರ ವ್ಯಾಪ್ತಿಗೆ ಅನ್ವಯಿಸಿ ಶಿಕ್ಷಣ ಸಂಸ್ಥೆ, ಕಾಲೇಜು ಹಾಗೂ ಅಪಾರ್ಟ್‌ಮೆಂಟ್‌ಗಳಲ್ಲಿ ಕೋವಿಡ್‌ ಪರೀಕ್ಷೆ, ಚಿಕಿತ್ಸೆ, ಕ್ವಾರಂಟೈನ್‌, ಪ್ರವೇಶ ಕುರಿತ ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. 

ಸೋಂಕು ಕಂಡು ಬಂದರೆ ಶಾಲೆಗಳನ್ನು ಮುಚ್ಚುವ ಅಥವಾ ಅಪಾರ್ಟ್‌ಮೆಂಟ್‌ಗಳನ್ನು ಸೀಲ್‌ಡೌನ್‌ ಮಾಡುವ ಅಗತ್ಯವಿಲ್ಲ ಎಂದು ಹೇಳಲಾಗಿದೆ. ಶಾಲೆಗಳಲ್ಲಿ (12 ತರಗತಿವರೆಗೆ) ಸೋಂಕು ಲಕ್ಷಣ ಹೊಂದಿರುವ ಮಕ್ಕಳನ್ನು ಶಾಲೆಗೆ ಹಾಜರಾಗದಂತೆ ಸೂಚಿಸಬೇಕು. ಸೋಂಕು ಲಕ್ಷಣ ಹೊಂದಿರುವವರನ್ನು ರಾರ‍ಯಪಿಡ್‌ ಆ್ಯಂಟಿಜೆನ್‌ ಪರೀಕ್ಷೆಗೆ ಒಳಪಡಿಸಿ ಸೋಂಕು ದೃಢಪಟ್ಟಲ್ಲಿ ಅವರ ಆರೋಗ್ಯ ಸ್ಥಿತಿಗೆ ಅನುಗುಣವಾಗಿ ಹೋಂ ಐಸೋಲೇಷನ್‌, ಕೋವಿಡ್‌ ಆರೈಕೆ ಕೇಂದ್ರ ಅಥವಾ ಆಸ್ಪತ್ರೆಗೆ ದಾಖಲಿಸಬೇಕು. ವರದಿ ನೆಗೆಟಿವ್‌ ಬಂದಲ್ಲಿ ಆರ್‌ಟಿಪಿಸಿಆರ್‌ ಮಾದರಿ ಪರೀಕ್ಷೆ ವರದಿ ಬರುವವರೆಗೂ ನಿಗಾದಲ್ಲಿ ಇರಿಸಿ ನಂತರ ಕ್ರಮ ವಹಿಸಬೇಕು.

4 ತಿಂಗಳ ಬಳಿಕ ಕರ್ನಾಟಕದಲ್ಲಿ 1000ಕ್ಕೂ ಹೆಚ್ಚು ಕೊರೋನಾ ಸೋಂಕು ಕೇಸ್!

ಆರ್‌ಟಿಪಿಸಿಆರ್‌ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟು, ಸಿ.ಟಿ.ವ್ಯಾಲ್ಯೂ 25 ಇದ್ದಲ್ಲಿ ಮಾದರಿಯನ್ನು ಜಿನೋಮಿಕ್‌ ಸೀಕ್ವೆನ್ಸಿಂಗ್‌ ಪರೀಕ್ಷೆಗೆ ಕಳುಹಿಸಬೇಕು ಎಂದು ಸೂಚಿಸಲಾಗಿದೆ. ಕಾಲೇಜು ಮತ್ತು ಕಚೇರಿಗಳಲ್ಲಿ ಸೋಂಕಿತರ ಪ್ರಾಥಮಿಕ ಸಂಪರ್ಕಿತರಲ್ಲಿ ಸೋಂಕು ಲಕ್ಷಣಗಳು ಕಂಡು ಬಂದಲ್ಲಿ ರಾರ‍ಯಪಿಡ್‌ ಆ್ಯಂಟಿಜೆನ್‌ ಪರೀಕ್ಷೆಗೆ ಒಳಪಡಿಸಿ, ಸೋಂಕು ದೃಢಪಟ್ಟರೆ ಕೋವಿಡ್‌ ನಿಯಮ ಪಾಲಿಸಬೇಕು. ಶಾಲಾ ಕಾಲೇಜುಗಳಲ್ಲಿ ಪ್ರಕರಣ ವರದಿಯಾದ ಕೊಠಡಿಗಳನ್ನು ಶೇ. ಸೋಡಿಯಂ ಹೈಪೋಕ್ಲೋರೈಟ್‌ ದ್ರಾವಣದಿಂದ ಸ್ಚಚ್ಛಗೊಳಿಸಬೇಕು ಮತ್ತು ಮರುದಿನ ಕೊಠಡಿ ಬಳಕೆ ಮಾಡಬೇಕು.

Follow Us:
Download App:
  • android
  • ios