Asianet Suvarna News Asianet Suvarna News

ಕರ್ನಾಟಕದಲ್ಲಿ ಕಡಿಮೆಯಾದ ಕೊರೊನಾ ಸೋಂಕಿನ ಪ್ರಕರಣ

* ಕರ್ನಾಟಕದಲ್ಲಿ ಕೊರೋನಾ ಏರಿಳಿತ
* ರಾಜ್ಯದಲ್ಲಿ ಕಡಿಮೆಯಾದ ಕೊರೊನಾ ಸೋಂಕು ಪ್ರಕರಣ 
* 889 ಜನರಿಗೆ ಹೊಸದಾಗಿ ಸೋಂಕು, 14 ಮಂದಿ ಬಲಿ
* ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ

889 New Coronavirus Cases and 14 deaths In Karnataka On Sept 18th rbj
Author
Bengaluru, First Published Sep 18, 2021, 8:21 PM IST

ಬೆಂಗಳೂರು, (ಸೆ.18): ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣ ಕಡಿಮೆಯಾಗಿದ್ದು, ಇಂದು (ಸೆ.18) 889 ಜನರಿಗೆ ಹೊಸದಾಗಿ ಸೋಂಕು ತಗುಲಿರುವುದು ದೃಢಪಟ್ಟಿದೆ.

ಶನಿವಾರ ಸೋಂಕಿನಿಂದ  14 ಮಂದಿ ಮೃತಪಟ್ಟಿದ್ದು,889 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಇದುವರೆಗೆ 29,13,713 ಜನ ಗುಣಮುಖರಾಗಿದ್ದಾರೆ.

ಕರ್ನಾಟಕದಲ್ಲಿ ಒಂದೇ ದಿನ ದಾಖಲೆಯ 28 ಲಕ್ಷ ಮಂದಿಗೆ ಕೋವಿಡ್‌ ಲಸಿಕೆ

ಒಟ್ಟು ಸೋಂಕಿತರ ಸಂಖ್ಯೆ 2,91,3713ಕ್ಕೆ ಏರಿಕೆಯಾಗಿದ್ರೆ, ಇದುವರೆಗೆ 37,587 ಜನ ಸಾವನ್ನಪ್ಪಿದ್ದಾರೆ.  ಸದ್ಯ 15, 755 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದಲ್ಲಿ ಸೋಂಕಿನ ಶೇಕಡಾವಾರು ಪ್ರಮಾಣ ಶೇ. 0.63 ರಷ್ಟಿದ್ದು, ಮರಣ ಪ್ರಮಾಣ ಶೇ. 1.57 ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜಧಾನಿ ಬೆಂಗಳೂರಿನಲ್ಲಿ ಸೆ.18 263 ಜನರಿಗೆ ಸೋಂಕು ತಗುಲಿದ್ದು, 6 ಮಂದಿ ಸಾವನ್ನಪ್ಪಿದ್ದಾರೆ. 222 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 7491 ಸಕ್ರಿಯ ಪ್ರಕರಣಗಳಿವೆ.

ಜಿಲ್ಲಾವಾರು ಸೋಂಕಿತರ ಸಂಖ್ಯೆ
ಬೆಂಗಳೂರಿನಲ್ಲಿ 263 ಹೊಸ ಪ್ರಕರಣಗಳು ಪತ್ತೆಯಾಗಿದ್ದು,222 ಸೋಂಕಿತರು ಗುಣಮುಖರಾಗಿದ್ದಾರೆ. 6 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಚಿಕ್ಕಬಳ್ಳಾಪುರ, ಹಾವೇರಿ, ಕೊಪ್ಪಳ, ವಿಜಯಪುರ ಮತ್ತು ಯಾದಗಿರಿಯಲ್ಲಿ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ.

ಬಾಗಲಕೋಟೆ 3, ಬೀದರ್ 2, ಚಿಕ್ಕಬಳ್ಳಾಪುರ 0, ಗದಗ 1, ಹಾವೇರಿ 0, ಕಲಬುರ್ಗಿ 4, ಕೊಪ್ಪಳ 0, ರಾಯಚೂರು 1, ರಾಮನಗರ 3, ವಿಜಯಪುರ 0, ಯಾದಗಿರಿ 0, ಬೆಂಗಳೂರು ನಗರ 263, ದಕ್ಷಿಣಕನ್ನಡ 133, ಹಾಸನ 40, ಕೊಡಗು 45, ಮೈಸೂರು 74, ಉಡುಪಿ 86, ಉತ್ತರಕನ್ನಡ 44 ಹೊಸ ಪ್ರಕರಣ ವರದಿಯಾಗಿವೆ.

Follow Us:
Download App:
  • android
  • ios