*  ರಾಜ್ಯದಲ್ಲಿ ಶನಿವಾರ 975 ಜನರಲ್ಲಿ ಕೊರೋನಾ ಸೋಂಕು*  ಶಿವಮೊಗ್ಗದಲ್ಲಿ ಒಬ್ಬ ವ್ಯಕ್ತಿ ಬಲಿ*  ಪಾಸಿಟಿವಿಟಿ ದರ ಶೇ. 3.74ಕ್ಕೆ ಇಳಿಕೆ  

ಬೆಂಗಳೂರು(ಜು.03): ರಾಜ್ಯದಲ್ಲಿ ಶನಿವಾರ 975 ಜನರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಶಿವಮೊಗ್ಗದಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. 668 ಮಂದಿ ಗುಣಮುಖರಾಗಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಳೆದ ಮೂರು ದಿನಗಳ ಬಳಿಕ ದೈನಂದಿನ ಸೋಂಕಿತರ ಸಂಖ್ಯೆ ಸಾವಿರಕ್ಕಿಂತ ಕಡಿಮೆ ಆಗಿದೆ. ಹಾಗೆಯೇ ಶೇ. 4 ಮೀರಿದ್ದ ಪಾಸಿಟಿವಿಟಿ ದರ ಶೇ. 3.74ಕ್ಕೆ ಇಳಿಕೆಯಾಗಿದೆ. ಸದ್ಯ 6,440 ಸಕ್ರಿಯ ಪ್ರಕರಣಗಳಿವೆ.

Corona Crisis: ಕೋವಿಡ್‌ ಸೋಂಕು ಪತ್ತೆಯಾದರೆ ಸೀಲ್‌ಡೌನ್‌ ಇಲ್ಲ

ಬೆಂಗಳೂರು ನಗರದಲ್ಲಿ 871, ಮೈಸೂರು 22, ದಕ್ಷಿಣ ಕನ್ನಡ 14, ಕೋಲಾರ ಮತ್ತು ಧಾರವಾಡ ತಲಾ 9, ಉಡುಪಿ, ಉತ್ತರ ಕನ್ನಡ ಮತ್ತು ಶಿವಮೊಗ್ಗ ತಲಾ 6 ಹೊಸ ಪ್ರಕರಣಗಳು ಪತ್ತೆಯಾಗಿದೆ. ರಾಜ್ಯದಲ್ಲಿ ಈವರೆಗೆ 39.71 ಲಕ್ಷ ಮಂದಿಯಲ್ಲಿ ಕೋವಿಡ್‌ ದೃಢಪಟ್ಟಿದ್ದು, 39.24 ಲಕ್ಷ ಮಂದಿ ಚೇತರಿಸಿಕೊಂಡಿದ್ದಾರೆ. 40,077 ಮಂದಿ ಮರಣವನ್ನಪ್ಪಿದ್ದಾರೆ.

ಲಸಿಕೆ ಅಭಿಯಾನ:

ಶನಿವಾರ 41,887 ಮಂದಿ ಕೋವಿಡ್‌ ಲಸಿಕೆ ಪಡೆದಿದ್ದಾರೆ. 4,506 ಮಂದಿ ಮೊದಲ ಡೋಸ್‌, 16,090 ಮಂದಿ ಎರಡನೇ ಡೋಸ್‌ ಮತ್ತು 30,445 ಮಂದಿ ಮುನ್ನೆಚ್ಚರಿಕೆ ಡೋಸ್‌ ಪಡೆದಿದ್ದಾರೆ. ಈವರೆಗೆ ಒಟ್ಟು 11.22 ಕೋಟಿ ಡೋಸ್‌ ಲಸಿಕೆ ನೀಡಲಾಗಿದೆ.