ತೀವ್ರ ಹೃದಯಾಘಾದಿಂದ ವಿಚಾರಣಾಧೀನ ಕೈದಿಯೊಬ್ಬ ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆ ಉಪ ಕಾರಗೃಹದಲ್ಲಿ ನಡೆದಿದೆ. ಕೇರಳ ಮೂಲದ ಜಯಪ್ರಕಾಶ್ ಅಲಿಯಾಸ್ ಪ್ರಕಾಶ್(32) ಮೃತ ಕೈದಿ.

ಚಾಮರಾಜನಗರ (ಅ.28): ತೀವ್ರ ಹೃದಯಾಘಾದಿಂದ ವಿಚಾರಣಾಧೀನ ಕೈದಿಯೊಬ್ಬ ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆ ಉಪ ಕಾರಗೃಹದಲ್ಲಿ ನಡೆದಿದೆ.

Add Asianetnews Kannada as a Preferred SourcegooglePreferred

ಕೇರಳ ಮೂಲದ ಜಯಪ್ರಕಾಶ್ ಅಲಿಯಾಸ್ ಪ್ರಕಾಶ್(32) ಮೃತ ಕೈದಿ. ಉಪ ಕಾರಗೃಹದಲ್ಲಿ ನಡೆದ ವಾಲ್ಮೀಕಿ ಜಯಂತಿ ಪ್ರಾರ್ಥನೆ ವೇಳೆ ಕುಸಿದುಬಿದ್ದ ಕೈದಿ. ಬಳಿಕ ಸಿಮ್ಸ್ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ಕೊನೆಯುಸಿರೆಳೆದ ಕೈದಿ.

ಮೃತ ವ್ಯಕ್ತಿ ಇತ್ತೀಚೆಗೆ ಬೇಗೂರು ಠಾ ಣಾ ವ್ಯಾಪ್ತಿಯಲ್ಲಿ ನಡೆದಿದ್ದ ರೋಡ್ ರಾಬರಿ ಪ್ರಕರಣವೊಂದರಲ್ಲಿ ಬಂಧಿತನಾಗಿದ್ದ. ಕಾರು ಅಡ್ಡಗಟ್ಟಿ 45 ಲಕ್ಷ ದರೋಡೆ ಮಾಡಿದ್ದ ಕೇಸಿನಲ್ಲಿ ಬಂಧಿಸಲಾಗಿತ್ತು. 

ದಾರೀಲಿ ಸಿಕ್ಕ ಐಫೋನ್ ಮಾಲೀಕನಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ಪೊಲೀಸ್ ಪೇದೆ