Annamalai Kollur temple visit: ದಸರಾ ಹಬ್ಬದ ಪ್ರಯುಕ್ತ ಬಿಜೆಪಿ ಮುಖಂಡ ಮತ್ತು ಮಾಜಿ ಪೊಲೀಸ್ ಅಧಿಕಾರಿ ಅಣ್ಣಾಮಲೈ ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಹಿಂದೆ ಉಡುಪಿಯಲ್ಲಿ ಎಸ್ಪಿಯಾಗಿದ್ದರು. ದೇವಾಲಯದಲ್ಲಿ ಭಕ್ತರೊಂದಿಗೆ ಸರಳತೆಯಿಮದ ಬೆರೆತರು..

ಉಡುಪಿ (ಅ.2): ದಸರಾ ಹಬ್ಬದ ಸಂಭ್ರಮದ ನಡುವೆ ಬಿಜೆಪಿ ಮುಖಂಡ ಮತ್ತು ಮಾಜಿ ಪೊಲೀಸ್ ಅಧಿಕಾರಿ ಅಣ್ಣಾಮಲೈ ಅವರು ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಪಡೆದರು. 

Add Asianetnews Kannada as a Preferred SourcegooglePreferred

ವಿಜಯದಶಮಿಯ ಪವಿತ್ರ ಸಂದರ್ಭದಲ್ಲಿ ಅವರು ಮುಂಜಾನೆಯೇ ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯದ ಆಡಳಿತ ಮಂಡಳಿಯು ಅಣ್ಣಾಮಲೈ ಅವರನ್ನು ಆತ್ಮೀಯವಾಗಿ ಸ್ವಾಗತಿಸಿ, ವಿಶೇಷ ಗೌರವ ಸಮರ್ಪಿಸಿತು.

ಇದನ್ನೂ ಓದಿ: ಸರ್ವರಿಗೂ ವಿಜಯದಶಮಿಯ ಹಾರ್ದಿಕ ಶುಭಾಶಯಗಳು

ಈ ಹಿಂದೆ ಉಡುಪಿಯಲ್ಲಿ ಎಸ್ಪಿಯಾಗಿ ಕಾರ್ಯನಿರ್ವಹಿಸಿದ್ದ ಅಣ್ಣಾಮಲೈ ಅವರ ಆಗಮನದಿಂದ ಸ್ಥಳೀಯರು ಖುಷಿಗೊಂಡರು. ದೇವಾಲಯದಲ್ಲಿ ಸರದಿಯ ಸಾಲಿನಲ್ಲಿ ನಿಂತಿದ್ದ ಭಕ್ತರೊಂದಿಗೆ ಅವರು ಕೆಲಕಾಲ ಮಾತುಕತೆ ನಡೆಸಿದರು. 

ಇದನ್ನೂ ಓದಿ:Davanagere: ವಿಜಯದಶಮಿ ಶೋಭಾಯಾತ್ರೆಗೆ ಬೆಣ್ಣೆನಗರಿ ಸಜ್ಜು, ಎಲ್ಲೆಲ್ಲೂ ಕೇಸರಿಮಯ, ಪೊಲೀಸ್ ಸರ್ಪಗಾವಲು

ಭಕ್ತರು ಅಣ್ಣಾಮಲೈ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡರು. ಅಣ್ಣಾಮಲೈ ಅವರ ಸರಳತೆ ಮತ್ತು ಆತ್ಮೀಯತೆ ಕಂಡು ಸ್ಥಳೀಯರು ಸಂತಸಗೊಂಡರು . ದೇವಿಯ ಆಶೀರ್ವಾದ ಪಡೆದು ತೆರಳಿದ ಅಣ್ಣಾಮಲೈ, ದೇವಾಲಯದ ಸಂಪ್ರದಾಯಕ್ಕೆ ಗೌರವ ಸೂಚಿಸಿದರು.