10:01 AM (IST) Feb 21

arnataka News Live 21 February 2026 ವಾಡಿಕೆಗಿಂತ ಶೇ. 32 ಹೆಚ್ಚು ಮಳೆ, ಆದರೂ ಜಲಕ್ಷಾಮದ ಭೀತಿ; ಬರಿದಾಗುತ್ತಿರುವ ಗಂಗಾವಳಿ

ಈ ಬಾರಿ ಮುಂಗಾರಿನಲ್ಲಿ ವಾಡಿಕೆಗಿಂತ ಶೇ. 32ರಷ್ಟು ಅಧಿಕ ಮಳೆಯಾದರೂ, ಅಂಕೋಲಾ ತಾಲೂಕಿನಲ್ಲಿ ಬೇಸಿಗೆ ಆರಂಭದಲ್ಲೇ ಜಲಕ್ಷಾಮದ ಆತಂಕ ಎದುರಾಗಿದೆ. ಹೆಚ್ಚುತ್ತಿರುವ ಉಷ್ಣಾಂಶದಿಂದಾಗಿ ಜೀವನದಿ ಗಂಗಾವಳಿಯ ನೀರಿನ ಮಟ್ಟ ಗಣನೀಯವಾಗಿ ಕುಸಿದಿದ್ದು, ಕೃಷಿ ಹಾಗೂ ವನ್ಯಜೀವಿಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.
Read Full Story
09:55 AM (IST) Feb 21

arnataka News Live 21 February 2026 ಮೋದಿ ವಿರೋಧಿಸುವ ಭರದಲ್ಲಿ ಕಾಂಗ್ರೆಸ್ ದೇಶ ವಿರೋಧಿ ನಡೆ - ಪ್ರಲ್ಹಾದ್ ಜೋಶಿ ಕಿಡಿ

ರಾಯಚೂರಿನಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಪ್ರಧಾನಿ ಮೋದಿಯವರನ್ನು ಟೀಕಿಸುವ ಭರದಲ್ಲಿ ಕಾಂಗ್ರೆಸ್ ದೇಶದ ಹಿತಾಸಕ್ತಿಯನ್ನೇ ಬಲಿಕೊಡುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಎಐ ತಂತ್ರಜ್ಞಾನದಿಂದ ಉದ್ಯೋಗ ನಷ್ಟ ಎಂಬುದು ಅಪಪ್ರಚಾರ ಎಂದ ಅವರು, ರಾಹುಲ್ ಗಾಂಧಿ 'ಅಪ್ರಬುದ್ಧ ರಾಜಕಾರಣಿ' ಎಂದು ಟೀಕಿಸಿದರು.

Read Full Story
09:45 AM (IST) Feb 21

arnataka News Live 21 February 2026 Bengaluru - ಇಸ್ರೋ ಮಾಜಿ ನೌಕರನಿಂದ ಪತ್ನಿಯ ಹ*ತ್ಯೆ, ತಾಯಿ ಚಿತೆಗೆ ಬೆಂಕಿಯಿಡಲೂ ಅಮೆರಿಕದಿಂದ ಬರದ ಒಬ್ಬಳೇ ಮಗಳು!

ಬೆಂಗಳೂರಿನಲ್ಲಿ ಇಸ್ರೋ ನಿವೃತ್ತ ಉದ್ಯೋಗಿಯೊಬ್ಬರು ತಮ್ಮ ಪತ್ನಿಯ ಭವಿಷ್ಯದ ಚಿಂತೆಯಿಂದ ಆಕೆಯನ್ನು ಹತ್ಯೆ ಮಾಡಿದ್ದಾರೆ. ಈ ದುರಂತದ ಬಳಿಕ, ಅಮೆರಿಕದಲ್ಲಿರುವ ಅವರ ಏಕೈಕ ಪುತ್ರಿ ತಾಯಿಯ ಅಂತ್ಯಕ್ರಿಯೆಗೆ ಬರಲು ನಿರಾಕರಿಸಿದ್ದಾರೆ.

Read Full Story
09:30 AM (IST) Feb 21

arnataka News Live 21 February 2026 Bengaluru - ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಪ್ತ ಕಾರ್ಯದರ್ಶಿ ಚಂದ್ರು ಮಗ ಆತ್ಮ*ಹತ್ಯೆ

ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ ಅವರ ಆಪ್ತ ಕಾರ್ಯದರ್ಶಿ ಚಂದ್ರು ಅವರ ಪುತ್ರ ನೇಣು ಬಿಗದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿದ್ದಾನೆ. 20 ವರ್ಷದ ಹೇಮಂತ್ ಆತ್ಮ*ಹತ್ಯೆಗೆ ಶರಣಾದ ಯುವಕ.

Read Full Story
09:15 AM (IST) Feb 21

arnataka News Live 21 February 2026 ಗೋಲ್‌ಗುಂಬಜ್ ಎಕ್ಸಪ್ರೆಸ್ ರೈಲಿಗೆ ತಲೆಕೊಟ್ಟು ಪ್ರಾಣ ಕಳೆದುಕೊಂಡ ಮನ್‌ಮುಲ್‌ ಉಪವ್ಯವಸ್ಥಾಪಕ

ಮದ್ದೂರು ತಾಲೂಕಿನ ಗೆಜ್ಜಲಗೆರೆ ಮನ್‌ಮುಲ್‌ನ ಉಪ ವ್ಯವಸ್ಥಾಪಕ ಭರತರಾಜ್, ಮಂಡ್ಯದಲ್ಲಿ ರೈಲಿಗೆ ತಲೆ ಕೊಟ್ಟು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಆನ್‌ಲೈನ್‌ ಅಥವಾ ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದೇ ಈ ದುರಂತಕ್ಕೆ ಕಾರಣ ಎಂದು ಶಂಕಿಸಲಾಗಿದೆ.

Read Full Story
08:46 AM (IST) Feb 21

arnataka News Live 21 February 2026 ಜಮಖಂಡಿ ಬಳಿ ಭೀಕರ ದುರಂತ - ಟ್ರ್ಯಾಕ್ಟರ್ ಪಲ್ಟಿಯಾಗಿ 2 ವರ್ಷದ ಮಗು ಸೇರಿದಂತೆ ನಾಲ್ವರ ಸಾವು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ಬಳಿ ಇಳಿಜಾರಿನಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ, ಎರಡು ವರ್ಷದ ಮಗು ಸೇರಿದಂತೆ ನಾಲ್ವರು ಮಹಾರಾಷ್ಟ್ರ ಮೂಲದ ಕಬ್ಬು ಕಟಾವು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 

Read Full Story
08:34 AM (IST) Feb 21

arnataka News Live 21 February 2026 ಸರ್ಕಾರಿ ಜಿಲ್ಲಾಸ್ಪತ್ರೆಗಳಲ್ಲಿ ಸಿ.ಟಿ.ಸ್ಕ್ಯಾನಿಂಗ್‌ ಸ್ಥಗಿತ

‘ಕೃಷ್ಣ ಡಯಾಗ್ನೋಸ್ಟಿಕ್ ಲಿಮಿಟೆಡ್‌’ಗೆ ಸರ್ಕಾರ ₹140 ಕೋಟಿ ಬಾಕಿ ಉಳಿಸಿಕೊಂಡ ಕಾರಣ ಯಾದಗಿರಿ, ಚಿತ್ರದುರ್ಗ, ಯಾದಗಿರಿ, ಕೋಲಾರ, ಕಾರವಾರ, ಹಾವೇರಿ ಸೇರಿ ರಾಜ್ಯದ 12 ಜಿಲ್ಲಾಸ್ಪತ್ರೆಗಳಲ್ಲಿ ಉಚಿತ ಸಿಟಿ ಮತ್ತು ಎಂಆರ್‌ಐ ಸ್ಕ್ಯಾನಿಂಗ್ ಸೇವೆಗಳು ಸ್ಥಗಿತಗೊಂಡಿದ್ದು, ರೋಗಿಗಳು ಪರದಾಡುವಂತಾಗಿದೆ.

Read Full Story
08:21 AM (IST) Feb 21

arnataka News Live 21 February 2026 ಹೈಕಮಾಂಡ್‌ ಸಿಕ್ಕರೆ ಮಾತುಕತೆ - ಸತೀಶ್‌ ದಿಢೀರ್‌ ಆಗಿ ದೆಹಲಿಗೆ ಭೇಟಿ

ಕರ್ನಾಟಕ ಕಾಂಗ್ರೆಸ್‌ನಲ್ಲಿನ ನಾಯಕತ್ವದ ಗೊಂದಲ ಮತ್ತು ಅಧಿಕಾರ ಹಂಚಿಕೆ ಕುರಿತ ಗೊಂದಲದ ನಡುವೆಯೇ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರು ದಿಢೀರ್‌ ಆಗಿ ದೆಹಲಿಗೆ ಭೇಟಿ ನೀಡಿದ್ದಾರೆ.

Read Full Story
08:08 AM (IST) Feb 21

arnataka News Live 21 February 2026 Bengaluru - ಗಂಡನ ಗೆಳೆಯನಿಂದಲೇ ಮೂರು ಮಕ್ಕಳ ತಾಯಿ ಮೇಲೆ ಅತ್ಯಾ*ಚಾರ; 5 ಲಕ್ಷ ಹಣಕ್ಕೆ ಡಿಮ್ಯಾಂಡ್

ಗಂಡನ ಸ್ನೇಹಿತನೇ ಮಹಿಳೆಯ ಮೇಲೆ ಅತ್ಯಾ*ಚಾರ ಎಸಗಿದ್ದಾನೆ. ಆರೋಪಿ ಮೊಹಮ್ಮದ್ ಜಹಾಂಗೀರ್, ಕೃತ್ಯದ ವಿಡಿಯೋ ಮಾಡಿ, ಅದನ್ನು ವೈರಲ್ ಮಾಡುವುದಾಗಿ ಬೆದರಿಸಿ ಮತ್ತೆ ಲೈಂಗಿಕ ಕ್ರಿಯೆಗೆ ಮತ್ತು 5 ಲಕ್ಷ ರೂಪಾಯಿಗೆ ಬೇಡಿಕೆಯಿಟ್ಟಿದ್ದಾನೆ. ಸಂತ್ರಸ್ತೆ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Read Full Story
08:01 AM (IST) Feb 21

arnataka News Live 21 February 2026 Snehamayi Krishna - ನಟೇಶ್ ಆಡಿಯೋ ಸಾಕ್ಷಿ ಕೋರ್ಟ್ ಕೈಗೆ ತಲುಪದಂತೆ ತಡೆಯಲು ನಡೆಯಿತಾ ಸ್ನೇಹಮಯಿ ಕೃಷ್ಣ ಬಂಧನ?

ಮುಡಾ ಮಾಜಿ ಆಯುಕ್ತ ಡಿಬಿ ನಟೇಶ್ ವಿರುದ್ಧ ಅಪಪ್ರಚಾರ ನಡೆಸಿದ ಆರೋಪದ ಮೇಲೆ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಮಹತ್ವದ ಆಡಿಯೋ ಸಾಕ್ಷ್ಯವನ್ನು ಸಲ್ಲಿಸುವ ಮುನ್ನವೇ ಈ ಬಂಧನವಾಗಿರುವುದು ಅನುಮಾನಕ್ಕೆ ಕಾರಣವಾಗಿದೆ.

Read Full Story
07:42 AM (IST) Feb 21

arnataka News Live 21 February 2026 ಈಜೀಪುರ ಮೇಲ್ಸೇತುವೆ ಕಾಮಗಾರಿಗೆ ಜುಲೈ ಗಡುವು

ಹಲವು ವರ್ಷಗಳಿಂದ ನಡೆಯುತ್ತಿರುವ ಈಜೀಪುರ ಮೇಲ್ಸೇತುವೆ ಕಾಮಗಾರಿಯನ್ನು ಜುಲೈ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್‌ ರಾವ್‌ ಅವರು ಗುತ್ತಿಗೆದಾರರಿಗೆ ಸೂಚಿಸಿದ್ದಾರೆ.

Read Full Story
07:29 AM (IST) Feb 21

arnataka News Live 21 February 2026 ಸಿಎಂ ನೇತೃತ್ವದ ಸಮಿತಿಗೆ ಚಿಕ್ಕಬಳ್ಳಾಪುರ ಸಂಸದ ಸುಧಾಕರ್‌ ಸೇರ್ಪಡೆ

ಮುಖ್ಯಮಂತ್ರಿಯವರ ನೇತೃತ್ವದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ)ದ ಸಮಿತಿಯನ್ನು ಪುನರ್‌ ರಚನೆ ಮಾಡಿ ಸರ್ಕಾರ ರಾಜ್ಯಪತ್ರವನ್ನು ಹೊರಡಿಸಿದ್ದು 84 ಮಂದಿ ಪದನಿಮಿತ್ತ ಸದಸ್ಯರು ಇರಲಿದ್ದಾರೆ. ಇದರಲ್ಲಿ ಇದಕ್ಕೂ ಮುನ್ನ ಒಟ್ಟು 75 ಮಂದಿ ಸದಸ್ಯರಿದ್ದರು.

Read Full Story
07:23 AM (IST) Feb 21

arnataka News Live 21 February 2026 ದಾವಣಗೆರೆ, ಬಾಗಲಕೋಟೆ ಕ್ಷೇತ್ರದ 'ಕೈ; ಟಿಕೆಟ್ ಕದನ - ಕುಟುಂಬದೊಳಗೆ ಪೈಪೋಟಿ, ಹೊರಗೆ ಸಮರ

ಮಾಜಿ ಸಚಿವರಾದ ಎಚ್‌.ವೈ. ಮೇಟಿ ಮತ್ತು ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿರುವ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಬಾಗಲಕೋಟೆಯಲ್ಲಿ ಮೇಟಿ ಕುಟುಂಬದೊಳಗೆ ಟಿಕೆಟ್‌ಗಾಗಿ ಪೈಪೋಟಿ ನಡೆಯುತ್ತಿದೆ.

Read Full Story
07:13 AM (IST) Feb 21

arnataka News Live 21 February 2026 ಮುಡಾ ಹಗರಣದ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್ ಬೆನ್ನಲ್ಲೇ, ಮನೆ, ಕಚೇರಿ ಮೇಲೆ ಸತತ 4 ಗಂಟೆ ದಾಳಿ, ಸಿಸಿಬಿ ಪೊಲೀಸರಿಗೆ ಸಿಕ್ಕಿದ್ದೇನು?

ಮುಡಾ ಮಾಜಿ ಆಯುಕ್ತ ಡಿಬಿ ನಟೇಶ್ ಅವರ ಫೋಟೋ ಮತ್ತು ಆಡಿಯೋ ಎಡಿಟ್ ಮಾಡಿ ಅಪಪ್ರಚಾರ ನಡೆಸಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತೆ ಸ್ನೇಹಮಯಿ ಕೃಷ್ಣ ಸಿಸಿಬಿ ಸೈಬರ್ ಕ್ರೈಂ ಪೊಲೀಸರು ವಶಕ್ಕೆ. ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿ, ಮಹತ್ವದ ಡಿಜಿಟಲ್ ಪುರಾವೆಗಳನ್ನು ಜಪ್ತಿ ಮಾಡೀದ್ದಾರೆ.

Read Full Story