Asianet Suvarna News Asianet Suvarna News

ಕೋವಿಡ್‌-19 ಕಾರ್ಯಪಡೆ ಪುನಾರಚನೆ: ಡಿಸಿಎಂ ಡಾ.ಅಶ್ವತ್ಥನಾರಾಯಣ ನೇತೃತ್ವ

ಕೋವಿಡ್ ನಿಯಂತ್ರಣದಲ್ಲಿ ರಾಜ್ಯದಲ್ಲಿ ಅತ್ಯುನ್ನತ ಮಟ್ಟದ ಸಮಿತಿಯಾದ ಕೋವಿಡ್‌ ಕಾರ್ಯಪಡೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಪುನಾರಚಿಸಿ ಆದೇಶ ಹೊರಡಿಸಿದ್ದಾರೆ.

ashwath narayana to lead Karnataka covid working-team rbj
Author
Bengaluru, First Published May 3, 2021, 5:16 PM IST

ಬೆಂಗಳೂರು, (ಮೇ.03): ಕೋವಿಡ್ ನಿಯಂತ್ರಣದಲ್ಲಿ ರಾಜ್ಯದಲ್ಲಿ ಅತ್ಯುನ್ನತ ಮಟ್ಟದ ಸಮಿತಿಯಾದ ಕೋವಿಡ್‌ ಕಾರ್ಯಪಡೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಪುನಾರಚಿಸಿದ್ದು, ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರನ್ನು ಕಾರ್ಯಪಡೆ ಅಧ್ಯಕ್ಷರನ್ನಾಗಿ ನೇಮಿಸಿದ್ದಾರೆ.

ಲೋಕೋಪಯೋಗಿ ಸಚಿವರೂ ಆದ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಈವರೆಗೂ ಈ ಕಾರ್ಯಪಡೆ ಅಧ್ಯಕ್ಷರಾಗಿದ್ದರು. ಇದೀಗ ಗೋವಿಂದ ಕಾರಜೋಳ ಅವರನ್ನ ಬದಲಾಯಿಸಿ ಅಶ್ವತ್ಥ್ ನಾರಾಯಣ ಅವರಿಗೆ ವಹಿಸಲಾಗಿದೆ.

ಚಾಮರಾಜನಗರಕ್ಕೆ ಆಕ್ಸಿಜನ್ ಕೊಟ್ಟಿಲ್ಲ ಎನ್ನುವ ಆರೋಪಕ್ಕೆ ಮೈಸೂರು ಜಿಲ್ಲಾಡಳಿತದಿಂದ ಸ್ಪಷ್ಟನೆ

ಪುನಾರಚನೆಗೊಂಡ ಈ ಕಾರ್ಯಪಡೆಯ ಅಧ್ಯಕ್ಷರಾಗಿ ಡಾ.ಅಶ್ವತ್ಥನಾರಾಯಣ ಜತೆಯಲ್ಲಿ ಸದಸ್ಯರಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎಸ್.‌ಸುರೇಶ್‌ ಕುಮಾರ್‌, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಖಾತೆ ಸಚಿವ ಸಿ.ಸಿ.ಪಾಟೀಲ್‌ ಹಾಗೂ ಆರೋಗ್ಯ & ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಕೆ.ಸುಧಾಕರ್‌ ಇದ್ದಾರೆ.

ಇಡೀ ರಾಜ್ಯದ ಕೋವಿಡ್ ಪರಿಸ್ಥಿತಿಯ ಉಸ್ತುವಾರಿ ಜತೆಗೆ‌, ಉನ್ನತ ಮಟ್ಟದ ನಿರ್ಧಾರಗಳನ್ನು ಕೈಗೊಳ್ಳುವ ಅಧಿಕಾರ ಈ ಕಾರ್ಯಪಡೆಗೆ ಇದೆ.

Follow Us:
Download App:
  • android
  • ios