ಯಶವಂತಪುರ-ಅರಸಿಕೆರೆ ನಡುವೆ ಸ್ವಯಂಚಾಲಿತ ಸಿಗ್ನಲಿಂಗ್ ಶೀಘ್ರ
ರೈಲಿನ ಸಂಚಾರಕ್ಕೆ ಯಾವುದೇ ತಡೆ ಇಲ್ಲದಂತೆ ಸರಾಗವಾಗಿಸಲು ಸ್ವಯಂಚಾಲಿತ ಸಿಗ್ನಲಿಂಗ್ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ಬೆಂಗಳೂರು(ಡಿ.22): ಯಶವಂತಪುರ ಮತ್ತು ಅರಸೀಕೆರೆ ನಡುವೆ (165.86 ಕಿ.ಮೀ.) ಸ್ವಯಂಚಾಲಿತ ಸಿಗ್ನಲಿಂಗ್ ವ್ಯವಸ್ಥೆಯನ್ನು ಜಾರಿಗೊಳಿಸಲು ರೈಲ್ವೆ ಮಂಡಳಿಯು ಅನುಮೋದನೆ ನೀಡಿದೆ. ಇದರಿಂದ ಪ್ರಯಾಣಿಕ ಹಾಗೂ ಸರಕು ಸಾಗಣೆ ರೈಲುಗಳ ಸಂಚಾರಕ್ಕೆ ಹೆಚ್ಚಿನ ಅನುಕೂಲವಾಗಲಿದೆ.
ಬೆಂಗಳೂರು ಮತ್ತು ಮೈಸೂರು ವಿಭಾಗಗಳು ಅದರಲ್ಲೂ ವಿಶೇಷವಾಗಿ ಯಶವಂತಪುರ-ಅರಸೀಕೆರೆ ವಿಭಾಗದಲ್ಲಿ ಹೆಚ್ಚಿನ ಪ್ರಯಾಣಿಕ ರೈಲುಗಳಿಗೆ ಬೇಡಿಕೆಯಿದೆ. ಅಲ್ಲದೆ ಇಲ್ಲಿಂದ ಆಹಾರ ಧಾನ್ಯ, ರಸಗೊಬ್ಬರ, ಪಿಒಎಲ್, ಸಿಮೆಂಟ್, ಉಕ್ಕು ಮತ್ತು ವಾಹನಗಳು ಸೇರಿದಂತೆ ಸರಕು ಸಾಗಣೆ ಕೂಡ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ರೈಲಿನ ಸಂಚಾರಕ್ಕೆ ಯಾವುದೇ ತಡೆ ಇಲ್ಲದಂತೆ ಸರಾಗವಾಗಿಸಲು ಸ್ವಯಂಚಾಲಿತ ಸಿಗ್ನಲಿಂಗ್ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ಒಂಟಿಯಾಗಿ ರೈಲಲ್ಲಿ ಪ್ರಯಾಣಿಸೋ ಮಹಿಳೆಯರಿಗೆ ಸಿಗುತ್ತೆ ಈ ಸೌಲಭ್ಯ
ಈ ಯೋಜನೆಗೆ ₹218.75 ಕೋಟಿ ತಗುಲುವ ನೀರಿಕ್ಷೆಯಿದ್ದು, ಮೂರು ವರ್ಷಗಳ ಅವಧಿಯಲ್ಲಿ ಯೋಜನೆಯು ಪೂರ್ಣಗೊಳಿಸುವ ಗುರಿಯಿದೆ. ಸ್ವಯಂಚಾಲಿತ ಸಿಗ್ನಲಿಂಗ್ನ ಅನುಷ್ಠಾನವು ರೈಲ್ವೆ ಮೂಲಸೌಕರ್ಯವನ್ನು ಆಧುನೀಕರಣಗೊಳಿಸವ ಹೆಜ್ಜೆಯಾಗಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.