ಬಾಗಲಕೋಟೆಯ ಈದ್ ಮಿಲಾದ್ ಮೆರವಣಿಗೆಯಲ್ಲಿ ಹಮಾಸ್ ನಾಯಕರ ಭಾವಚಿತ್ರ ಪ್ರದರ್ಶನ ವಿವಾದಕ್ಕೆ ಕಾರಣವಾಗಿದೆ. ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿ, ಕಠಿಣ ಕ್ರಮಕ್ಕೆ ಆಗ್ರಹಿಸಿವೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಬಾಗಲಕೋಟೆ (ಸೆ.11): ಬಾಗಲಕೋಟೆ ನಗರದಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆ ವೇಳೆ ಪಂಕಾ ಮಸೀದಿ ಬಳಿಯ ಕಟೌಟ್‌ನಲ್ಲಿ ಹಮಾಸ್ ಲೀಡರ್‌ಗಳ ಭಾವಚಿತ್ರಗಳು ಕಂಡುಬಂದಿದ್ದು, ಭಾರೀ ವಿವಾದಕ್ಕೆ ಕಾರಣವಾಗಿದೆ. ಭಾವಚಿತ್ರದಲ್ಲಿ ಪ್ಯಾಲಿಸ್ತೀನ್ ಧ್ವಜವನ್ನು ಹಿಂದೂಪರ ಸಂಘಟನೆಗಳು ಗಮನಿಸಿದ ಬಳಿಕ, ಕಿಡಿಗೇಡಿಗಳು ಧ್ವಜವನ್ನು ಮರೆಮಾಚಲು ಹಸಿರು ಬಟ್ಟೆಯನ್ನು ಅಂಟಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಘಟನೆಯ ಕುರಿತು ಕೆಲವು ವ್ಯಕ್ತಿಗಳು ಸಾಮಾಜಿಕ ಜಾ ಲತಾಣಗಳಲ್ಲಿ ಸ್ಟೇಟಸ್‌ಗಳನ್ನು ಹಂಚಿಕೊಂಡಿದ್ದಾರೆ, ಇದು ಜನರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.ಹಿಂದೂಪರ ಸಂಘಟನೆಗಳು ಈ ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದು, ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿವೆ.

ಇದನ್ನೂ ಓದಿ: ಪಾಕಿಸ್ತಾನ ಪರ ಘೋಷಣೆ ಕೂಗಿದ್ರೂ ಅರೆಸ್ಟ್ ಇಲ್ಲ, 500 ಜನ ದೇಶಭಕ್ತರ ಮೇಲೆ ಕೇಸು, ಸಿಎಂ ಸಿದ್ದರಾಮಯ್ಯ ನೀವು ದೇಶದ್ರೋಹಿಗಳ ಪರ ಇದ್ದೀರಾ?: ಕೆಎಸ್ ಈಶ್ವರಪ್ಪ ಗರಂ

ಬಾಗಲಕೋಟೆ ಪೊಲೀಸ್ ಠಾಣೆ ಎದುರು ಹಿಂದೂ ಕಾರ್ಯಕರ್ತರು ಜಮಾಯಿಸಿ, ಘೋಷಣೆಗಳ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಈ ಘಟನೆಯಿಂದ ನಗರದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದ್ದು, ಸ್ಥಳೀಯ ಆಡಳಿತವು ಶಾಂತಿ ಕಾಪಾಡಲು ಕ್ರಮ ಕೈಗೊಂಡಿದೆ. ಪೊಲೀಸರು ತನಿಖೆ ಆರಂಭಿಸಿದ್ದು, ತಪ್ಪಿತಸ್ಥರನ್ನು ಶೀಘ್ರದಲ್ಲಿ ಪತ್ತೆಹಚ್ಚುವುದಾಗಿ ಭರವಸೆ ನೀಡಿದ್ದಾರೆ. ಈ ಘಟನೆಯಿಂದ ಸಾಮಾಜಿಕ ಸೌಹಾರ್ದತೆಗೆ ಧಕ್ಕೆಯಾಗದಂತೆ ಎಲ್ಲರೂ ಸಂಯಮ ವಹಿಸುವಂತೆ ಸ್ಥಳೀಯ ನಾಯಕರು ಮನವಿ ಮಾಡಿದ್ದಾರೆ.