Asianet Suvarna News Asianet Suvarna News

ಬ್ಯಾಂಕ್ ಸಾಲ ಪಡೆದು ವಂಚನೆ; ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಐಪಿಸಿ 420 ಕೇಸ್ !

ಬ್ಯಾಂಕ್ ನಿಂದ ಪಡೆದ ಸಾಲ ಮರುಪಾವತಿ ಮಾಡದ ವಂಚನೆ ಮಾಡಿರುವ ಆರೋಪ ಹಿನ್ನೆಲೆ ಮಾಜಿ ಸಚಿವ, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಸೇರಿ ಮೂವರ ವಿರುದ್ಧ ಬ್ಯಾಂಕ್ ಮ್ಯಾನೇಜರ್ ರಾಜಣ್ಣ ವಿವಿಪುರಂ ಠಾಣೆಗೆ ದೂರು ನೀಡಿದ್ದಾರೆ.

Bank loan fraud case FIR against MLA Ramesh Jarakiholi and three others at VV puram bengaluru rav
Author
First Published Jan 7, 2024, 11:44 AM IST

ಬೆಂಗಳೂರು (ಜ.7) ಬ್ಯಾಂಕ್ ನಿಂದ ಪಡೆದ ಸಾಲ ಮರುಪಾವತಿ ಮಾಡದ ವಂಚನೆ ಮಾಡಿರುವ ಆರೋಪ ಹಿನ್ನೆಲೆ ಮಾಜಿ ಸಚಿವ, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಸೇರಿ ಮೂವರ ವಿರುದ್ಧ ಬ್ಯಾಂಕ್ ಮ್ಯಾನೇಜರ್ ರಾಜಣ್ಣ ವಿವಿಪುರಂ ಠಾಣೆಗೆ ದೂರು ನೀಡಿದ್ದಾರೆ.

ಶಾಸಕ ರಮೇಶ್ ಜಾರಕಿಹೊಳಿ. ಸೌಭಾಗ್ಯಲಕ್ಷ್ಮಿ ಶುಗರ್ಸ್ ಲಿಮಿಟೆಡ್ ನ ಇಬ್ಬರು ಪದಾಧಿಕಾರಿಗಳಾದ ವಸಂತ್ ವಿ ಪಾಟೀಲ್, ಶಂಕರ್ ಪವಾಡೆ ವಿರುದ್ಧ ದೂರು. ಈ ಪ್ರಕರಣದಲ್ಲಿ A1 ಆರೋಪಿಯಾರುವ ರಮೇಶ್ ಜಾರಕಿಹೊಳಿ ಮೇಲೆ ಐಪಿಸಿ 420 ಪ್ರಕರಣ ದಾಖಲಿಸಿರುವ ಮ್ಯಾನೇಜರ್. 

ಸಚಿವಗಿರಿ ಎಂದರೆ ಚಮಚಾಗಿರಿಯಲ್ಲ, ಸತ್ಯದ ಪರ ನಿಲ್ಲುವ ಗಂಡಸ್ತನ ನಿಮಗಿಲ್ಲ: ಪರಮೇಶ್ವರ, ರಾಜಣ್ಣ ವಿರುದ್ಧ ಎಚ್ಡಿಕೆ ಗರಂ!

ಪ್ರಕರಣದ ಹಿನ್ನೆಲೆ:

ಬೆಳಗಾವಿಯ ಗೋಕಾಕ್‌ನಲ್ಲಿರುವ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಲಿಮಿಟೆಡ್ ಕಂಪನಿ ಸ್ಥಾಪನೆ, ವಿಸ್ತರಣೆ ನಿರ್ವಹಣೆಗಾಗಿ ಚಾಮರಾಜಪೇಟೆಯ ಕರ್ನಾಟಕ ರಾಜ್ಯ ಸಹಕಾರಿ ಅಪೇಕ್ಸ್ ಬ್ಯಾಂಕ್ ನಿಂದ ಕಂಪನಿ ಹೆಸರಲ್ಲಿ ಸಾಲ ಪಡೆಯಲಾಗಿತ್ತು.  2013 ರಿಂದ 2017 ರವರೆಗೆ ಒಟ್ಟು 232 ಕೋಟಿ 88 ಲಕ್ಷ ಸಾಲ ಮಂಜೂರು ಮಾಡಲಾಗಿದೆ. ಆದರೆ ಸಾಲದ ಹಣ ಪಾವತಿ ಮಾಡದಿರುವುದರಿಂದ 2023 ರ ವೇಳೆಗೆ 439 ಕೋಟಿ 7 ಲಕ್ಷ ಸಾಲದ ಮೊತ್ತ ಬಾಕಿ ಉಳಿದಿದೆ. ಬ್ಯಾಂಕ್ ಗೆ ಸಾಲ ಮರುಪಾವತಿ ಮಾಡದೆ,  ಮೋಸ ಮಾಡುವ ಉದ್ದೇಶದಿಂದ ಯಾವುದೇ ಮಾಹಿತಿ ನೀಡದೇ ಆಡಳಿತ ಮಂಡಳಿ ಹುದ್ದೆಗಳಿಂದ ಹೊರಬರುವ ಮೂಲಕ ಬ್ಯಾಂಕ್‌ಗೆ ನಂಬಿಕೆದ್ರೋಹ ಮಾಡಿದ್ದಾರೆಂದು ಆರೋಪಿಸಿರುವ ಬ್ಯಾಂಕ್ ಮ್ಯಾನೇಜರ್ ರಾಜಣ್ಣ. ಹೀಗಾಗಿ ಶಾಸಕ ರಮೇಶ್ ಜಾರಕಿಹೊಳಿ, ಮೂವರು ಪದಾಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕ್ಕಾಗಿ ದೂರು ನೀಡಲಾಗಿದೆ. 

ಲಕ್ಷ್ಮೀ ಹೆಬ್ಬಾಳ್ಕರ್ ಬೆಳೆದು ಬಂದಿರುವುದು ಯಾವ ರೀತಿ‌ ಎಂಬುದು ಗೊತ್ತು?: ರಮೇಶ್‌ ಜಾರಕಿಹೊಳಿ

Follow Us:
Download App:
  • android
  • ios