Tejasvi Surya on Siddaramaiah government: ಸಂಸದ ತೇಜಸ್ವಿ ಸೂರ್ಯ ಅವರು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ  ರಾಜ್ಯದ ಅಭಿವೃದ್ಧಿಯನ್ನು ಮರೆತು ಬಿಹಾರ ಚುನಾವಣೆಗೆ ಹಣ ನೀಡಲು ಸರ್ಕಾರ ನಿರತವಾಗಿದೆ ಎಂದು ಆರೋಪಿಸಿದ್ದಾರೆ. ಬೆಂಗಳೂರಿಗೆ ಒಂದು ಪ್ರಾಜೆಕ್ಟ್ ತೋರಿಸಲು ಸವಾಲು.

ಬೆಂಗಳೂರು (ಅ.23): ರಾಜ್ಯದ ಅಭಿವೃದ್ಧಿಯನ್ನೇ ಈ ಸರ್ಕಾರ ಮರೆತಿದೆ. ಬಿಹಾರ ಚುನಾವಣಗೆ ಫಂಡಿಂಗ್ ಮಾಡಲು ಬ್ಯುಸಿ ಆಗಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರೇ ಬೆಂಗಳೂರಿನ ಅಭಿವೃದ್ಧಿಗೆ ಮಾಡಿರುವ ಒಂದೇ ಒಂದು ಪ್ರಾಜೆಕ್ಟ್ ತೋರಿಸಿ ಎಂದು ಸಂಸದ ತೇಜಸ್ವಿ ಸೂರ್ಯ ಸವಾಲು ಹಾಕಿದರು.

Add Asianetnews Kannada as a Preferred SourcegooglePreferred

ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದರು, ರಾಜ್ಯದಲ್ಲಿ 2300 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾರಿಗೆ ನೌಕರರು ಸಂಬಳ ಇಲ್ಲದೆ ಪ್ರತಿಭಟನೆ ಮಾಡ್ತಿದ್ದಾರೆ. ಹಿಂದಿನ ಸರ್ಕಾರದ ಫ್ಲೈಓವರ್ ಪ್ರಾಜೆಕ್ಟ್ ಇಂದಿಗೂ ಮುಗಿದಿಲ್ಲ. ಶಿಕ್ಷಕರ ನೇಮಕಾತಿ ಅಂತೂ ಆಗ್ತಿಲ್ಲ. ವರ್ಗಾವಣೆ ದಂಧೆ ಮಾತ್ರ ಎಗ್ಗಿಲ್ಲದೆ ನಡೆತಿದೆ. ಬೆಂಗಳೂರಿನಲ್ಲಿ ಸೈಟ್‌ಗೆ ರೇಟ್ ಚಾರ್ಟ್ ಆಗ್ತಿದೆ. ರಾಜ್ಯದ ಅಭಿವೃದ್ಧಿಯನ್ನೇ ಈ ಸರ್ಕಾರ ಮರೆತುಬಿಟ್ಟಿದೆ. ಬಿಹಾರ ಚುನಾವಣೆಗೆ ಫಂಡಿಂಗ್ ಮಾಡಲು ಬ್ಯುಸಿ ಆಗಿದ್ದೀರಿ ನೀವು ಎಂದು ವಾಗ್ದಾಳಿ ನಡೆಸಿದರು.

ಸಿಎಂ ಸಿದ್ದರಾಮಯ್ಯ ಅವರೇ ಬೆಂಗಳೂರಿಗೆ ಒಂದೇ ಒಂದು ಪ್ರಾಜೆಕ್ಟ್ ತೋರಿಸಿ

ಸಿಎಂ ಸಿದ್ದರಾಮಯ್ಯ ಅವರೇ ಬೆಂಗಳೂರಿಗೆ ಒಂದೇ ಒಂದು ಪ್ರಾಜೆಕ್ಟ್‌ ತೋರಿಸಿ. ರೆವೆನ್ಯು ಸರ್‌ಪ್ಲಸ್ ಬಜೆಟ್ ಕೊಟ್ಟಿದ್ದು ಬಿಜೆಪಿ. ಈಗ ನೀವು ಗುತ್ತಿಗೆದಾರರಿಗೆ ಹಣವನ್ನೇ ಕೊಡ್ತಿಲ್ಲ. ಹಣ ಕೇಳಿದರೆ ಗುತ್ತಿಗೆದಾರರಿಗೆ ಬೆದರಿಕೆ ಹಾಕ್ತಿದೆ ನಿಮ್ಮ ಸರ್ಕಾರ. ನಿಮ್ಮ ಶಾಸಕರೇ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದಾರೆ. ಬೆಂಗಳೂರಿಗೆ ಮಾಡಿದ ಒಂದೇ ಒಂದು ಪ್ರಾಜೆಕ್ಟ್ ತೋರಿಸಿ ಎಂದು ಸಂಸದ ತೇಜಸ್ವಿ ಸೂರ್ಯ ಸವಾಲು ಹಾಕಿದರು.

ಇಲಾಖೆಗೆ ಮೀಸಲಿಟ್ಟ ಹಣ ಗ್ಯಾರಂಟಿಗೆ ಹೋಗ್ತಿದೆ:

100 ರೂ. ಆದಾಯದಲ್ಲಿ 18 ರೂ. ಬಡ್ಡಿಗೆ ಹೋಗ್ತಿದೆ. ವಿವಿದ ಇಲಾಖೆಗೆ ಮೀಸಲಿಟ್ಟ ಹಣಕ್ಕಿಂತ ಹೆಚ್ಚು ಗ್ಯಾರಂಟಿಗೆ ಹೋಗ್ತಿದೆ. ಬಡವರು ಸರ್ಕಾರದ ಮೇಲೆ ಅವಲಂಬಿತರಾಗುವಂತೆ ಮಾಡಿದ್ದೀರಿ. ಅಮಾವಾಸ್ಯೆ ಹುಣ್ಣಿಮೆಯಲ್ಲಿದ್ದೀರಿ. ಇನ್ನೆರಡು ವರ್ಷದಲ್ಲಿ ರಾಜ್ಯ ಹಿಡಿದ ಗ್ರಹಣ ಬಿಡಲಿದೆ. ರಾಜಕೀಯ ನಿವೃತ್ತಿ ಬಳಿಕ ನಿಮ್ಮ ಕೊಡುಗೆ ಏನು? ಸಾಲದಲ್ಲಿ ಮುಳುಗುಸಿದ್ದು, ಅತಿಯಾದ ಅತ್ಯಾ೧ಚಾರ, ಕೈಗಾರಿಕೋದ್ಯಮಿಗಳು ಬಿಟ್ಟು ಹೋಗಿದ್ದು. ಇದೇ ನಿಮ್ಮ ಆಡಳಿತಾವಧಿ ಎಂದು ಆಗಬಾರದು. ಅಮವಾಸ್ಯೆ, ಹುಣ್ಣಿಮೆ, ಗ್ರಹಣ, ಸೂರ್ಯ ಎಲ್ಲ ಜ್ಯೋತಿಷಿಗಳಿಗೆ ಬಿಡಿ

ಐಟಿ ಸಚಿವರಿಗೆ ಬಂಡವಾಳ ತರಲು ಹೇಳಿ. ಗೃಹ ಸಚಿವರು ಕಾನೂನು ಸುವ್ಯವಸ್ಥೆ ನೋಡಲು ಹೇಳಿ. ಸರ್ಕಾರಿ ನೌಕರರಿಗೆ ಸಂಬಳ ಕೊಡಿ, ಕೊನೆದಾಗಿ ಮೋದಿಗೆ ಪ್ರಶ್ನೆ ಕೇಳೋದು ಬಿಡಿ ಎಂದು ತಿವಿದರು.