Asianet Suvarna News Asianet Suvarna News

ಬೆಂಗಳೂರು ಮಾಂಸ ದಂಧೆ: ಬಂಧಿತ ಪುನೀತ್ ಕೆರೆಹಳ್ಳಿ ಮಧ್ಯರಾತ್ರಿ ಠಾಣೆಯಲ್ಲಿ ತೀವ್ರ ಅಸ್ವಸ್ಥ, ಆಸ್ಪತ್ರೆಗೆ ರವಾನೆ

ರಾಜಸ್ಥಾನದಿಂದ ಬೆಂಗಳೂರಿಗೆ ಕುರಿ ಮಾಂಸದ ಬದಲು ನಾಯಿ ಮಾಂಸ ಸರಬರಾಜಾಗುತ್ತಿದೆ ಎಂದು ಅನುಮಾನ ವ್ಯಕ್ತಪಡಿಸಿದ ಪುನೀತ್ ಕೆರೆಹಳ್ಳಿ ಬಂಧನ, ಪೊಲೀಸ್‌ ಠಾಣೆಯಲ್ಲಿ ತೀವ್ರ ಅಸ್ವಸ್ಥ ಆಸ್ಪತ್ರೆಗೆ ದಾಖಲು.

bengaluru meat scandal case, activist Puneeth Kerehalli detained gow
Author
First Published Jul 27, 2024, 9:39 AM IST | Last Updated Jul 27, 2024, 12:44 PM IST

ರಾಜಸ್ಥಾನದಿಂದ ಬೆಂಗಳೂರಿಗೆ ಕುರಿ ಮಾಂಸದ ಬದಲು ನಾಯಿ ಮಾಂಸ ಸರಬರಾಜಾಗುತ್ತಿದೆ ಎಂದು ಮಾಂಸದ ವ್ಯಾಪಾರಿಗಳು ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ರೈಲಿನ ಮೂಲಕ ರಾಜಸ್ಥಾನದಿಂದ ನಗರಕ್ಕೆ ತರಲಾಗಿದ್ದ ಮಾಂಸವನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಶುಕ್ರವಾರ ಸಂಜೆ ನಡೆದಿತ್ತು.  ಇನ್ನು ಆಹಾರ ಇಲಾಖೆಯ ಅಧಿಕಾರಿಗಳು ಈ ಮಾಂಸವು ನಾಯಿಯದ್ದೋ ಅಥವಾ ಕುರಿಯದ್ದೋ ಎಂದು ಪತ್ತೆ ಮಾಡಲು, ಮಾಂಸದ ಮಾದರಿಯನ್ನು ಪರೀಕ್ಷಿಸಲು ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದ್ದಾರೆ.

ಶುಕ್ರವಾರ ರಾಜಸ್ಥಾನದಿಂದ ಸುಮಾರು 90 ಬಾಕ್ಸ್‌ಗಳಲ್ಲಿ ಬೆಂಗಳೂರಿನ ರೈಲ್ವೆ ನಿಲ್ದಾಣಕ್ಕೆ ಮಾಂಸವು ಸರಬರಾಜಾಗಿತ್ತು. ಈ ಬಗ್ಗೆ ಅನುಮಾನಗೊಂಡ ಹಿಂದೂಪರ ಸಂಘಟನೆಗಳು ದಾಳಿ ನಡೆಸಿ, ಸರಬರಾಜಾಗಿರುವ ಮಾಂಸವು ಕುರಿಯದ್ದಲ್ಲ. ನಾಯಿ ಮಾಂಸ ಎಂದು ಅನುಮಾನ ವ್ಯಕ್ತಪಡಿಸಿದರು.

ಬೆಂಗಳೂರಲ್ಲಿ ಪ್ರತಿ ಕೆ.ಜಿ ಮಟನ್‌ಗೆ 750 ರೂ., ಆದರೆ ರಾಜಸ್ಥಾನದಿಂದ ತರಿಸಿಕೊಳ್ಳೋ 450 ರೂ. ಮಾಂಸ ಯಾವುದು?

ಇದೆಲ್ಲದರ ನಡುವೆ ಹಿಂದೂ ಮುಖಂಡ ಪುನೀತ್ ಕೆರೆ  ಹಳ್ಳಿಯನ್ನು ಕಾಟನ್ ಪೇಟೆ ಪೊಲೀಸರು ಮಧ್ಯರಾತ್ರಿ 12 ಗಂಟೆಗೆ ಬಂಧಿಸಿದ್ದರು. ಬಿಎನ್ಎಸ್ 132 ಆ್ಯಕ್ಟ್ ( ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿ, 351 (2) ಅಡಿಯಲ್ಲಿ ಪೊಲೀಸರು ಬಂಧನ ಮಾಡಿದ್ದರು. ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಬಾಕ್ಸ್ ಸಾಗಾಟಕ್ಕೆ ತಡೆ ನೀಡಿ, ಈ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ ಬಂಧನವಾಗಿತ್ತು.

ಆದರೆ ಪೊಲೀಸ್ ಠಾಣೆಯಲ್ಲಿ ಪುನೀತ್ ಕೆರೆಹಳ್ಳಿ ಅಸ್ವಸ್ಥಗೊಂಡು, ಪ್ರಜ್ಙಾಹೀನ ಸ್ಥಿತಿಯಲ್ಲಿದ್ದರು. ಆದರೆ ಬೆಳಗ್ಗಿನ ಜಾವ 4.45 ಕ್ಕೆ ತೀವ್ರವಾಗಿ ಅಸ್ವಸ್ಥಗೊಂಡ ಹಿನ್ನೆಲೆ ಆತುರಾತುರದಲ್ಲಿ ಕೆ.ಸಿ.ಜನರಲ್ ಆಸ್ಪತ್ರೆಗೆ ಅವರನ್ನು ಕರೆತಂದು ಹೆಚ್ಚಿನ ಚಿಕಿತ್ಸೆಗೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರಿಗೆ ಸರಬರಾಜು ಆಗುತ್ತಿದೆಯೇ ನಾಯಿ ಮಾಂಸ? ರಾಜಸ್ಥಾನದಿಂದ ಬಂದ 4000 ಕೆಜಿ ಉದ್ದಬಾಲದ ಮಾಂಸ ಯಾವುದು?

ಮಧ್ಯರಾತ್ರಿಯಿಂದ ತೀವ್ರವಾದ ಹೊಟ್ಟೆನೋವು ಬಾಧಿಸಿದ ಹಿನ್ನೆಲೆ ಎಂಆರ್ ಐ ಅಥವಾ ಸಿಟಿ ಸ್ಕ್ಯಾನ್ ಮಾಡುವ ಉದ್ದೇಶದಿಂದ ಪುನೀತ್ ಕೆರೆಹಳ್ಳಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಿಪಿ, ಶುಗರ್ ಎಲ್ಲವೂ ನಾರ್ಮಲ್ ಇದೆ ಎಂದು ಕೆಸಿ ಜನರಲ್ ಹಿರಿಯ ವೈದ್ಯರು ಮಾಹಿತಿ ನೀಡಿದ್ದಾರೆ.

ಕೆರೆಹಳ್ಳಿ ಬಂಧನ ಇತರರು: ನಾಯಿ ಮಾಂಸ ಸಾಗಾಟ ಆರೋಪ ಮಾಡಿದ ಹಿನ್ನೆಲೆ ಬಂಧಿತವಾಗಿದ್ದ ಪುನೀತ್ ಕೆರೆಹಳ್ಳಿ ಆಸ್ಪತ್ರೆಯಲ್ಲಿದ್ದು, ಇತರ ಸಂಗಡಿಗರನ್ನು ಬಿಡುಗಡೆ ಮಾಡಲಾಗಿದೆ. ಸ್ಟೇಷನ್ ಬೆಲ್ ಕೊಟ್ಟು  ಪುನೀತ್ ಕೆರೆಹಳ್ಳಿ ಸಂಗಡಿಗರನ್ನು ಬಿಡುಗಡೆ ಮಾಡಲಾಗಿದೆ. ಪೊಲೀಸರು ಠಾಣೆಗೆ ಕರೆದುಕೊಂಡು ಬಂದಾಗ ಹೊಟ್ಟೆ ನೋವು ಕಾಣಿಸಿಕೊಂಡ ಕಾರಣ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಪುನೀತ್ ಕೆರೆಹಳ್ಳಿ ಹಾಗೂ ಸಂಗಡಿಗರ ವಿರುದ್ದ ಕಾಟನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲು

  • ಬಿಎನ್ ಎಸ್ ಕಾಯ್ದೆ, 131,351,186 ಅಡಿಯಲ್ಲಿ ಎಫ್ ಐ ಆರ್ ದಾಖಲು
  • ಬಿಎನ್ ಎಸ್ 131 ಅಪರಾಧವನ್ನ ಕಾಂಪ್ರಮೈಸ್ ಮಾಡಿಕೊಳ್ಳಲು ಯತ್ನಿಸುವುದು
  • ಬಿಎನ್ ಎಸ್ 351 ಯಾವುದೇ ವ್ಯಕ್ತಿಗೆ ಬೆದರಿಕೆ ಹಾಕುವುದು
  • ಬಿಎನ್ ಎಸ್ 186 ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸುವುದು
Latest Videos
Follow Us:
Download App:
  • android
  • ios