Asianet Suvarna News Asianet Suvarna News

ಕರವೇ ಕಾರ್ಯಕರ್ತರನ್ನು ಬಂಧಿಸಿದ ಪೊಲೀಸರ ಕ್ರಮವೇ ಸರಿಯಾಗಿದೆ: ಗೃಹ ಸಚಿವ ಪರಮೇಶ್ವರ

ನಮ್ಮ ಸರ್ಕಾರವು ಕನ್ನಡದ ಪರವಾಗಿ ಎಲ್ಲ ರೀತಿಯ ತೀರ್ಮಾನಗಳನ್ನು ತೆಗೆದುಕೊಳ್ಳುವ ಕೆಲಸವನ್ನು ಹಿಂದೆಯೂ ಮಾಡಿದೆ. ಪ್ರತಿಭಟನೆ ಹೆಸರಲ್ಲಿ ಕಾನೂನು ಕೈಗೆತ್ತಿಕೊಳ್ಳುವುದನ್ನು ಸಹಿಸುವುದಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು‌.

Bengaluru Police arresting Karave activists action was correct Home Minister Parameshwar sat
Author
First Published Dec 28, 2023, 3:56 PM IST

ಬೆಂಗಳೂರು (ಡಿ.28): ನಮ್ಮ ಸರ್ಕಾರವು ಕನ್ನಡದ ಪರವಾಗಿ ಎಲ್ಲ ರೀತಿಯ ತೀರ್ಮಾನಗಳನ್ನು ತೆಗೆದುಕೊಳ್ಳುವ ಕೆಲಸವನ್ನು ಹಿಂದೆಯೂ ಮಾಡಿದೆ,‌ ಅದಕ್ಕೆ‌ ಈಗಲೂ ಬದ್ಧವಾಗಿದೆ. ಪ್ರತಿಭಟನೆ ಹೆಸರಲ್ಲಿ ಕಾನೂನು ಕೈಗೆತ್ತಿಕೊಳ್ಳುವುದನ್ನು ಸಹಿಸುವುದಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು‌.

ಗುರುವಾರ ಬೆಳಗ್ಗೆ ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮದವರ ಜತೆ ಮಾತನಾಡಿದ ಅವರು, ಯಾವುದೇ ರೀತಿಯ ಸಮಸ್ಯೆಗಳಿದ್ದರೆ ಸರ್ಕಾರಕ್ಕೆ ಒತ್ತಾಯಿಸಲಿ. ಇದಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವಕಾಶವಿದೆ. ಪ್ರತಿಭಟನೆ ಹೆಸರಲ್ಲಿ ಅಂಗಡಿ, ಶಾಪಿಂಗ್‌ಗಳ ಮೇಲೆ ದಾಳಿ‌ ಮಾಡಿ, ಸಾರ್ವಜನಿಕರ ಆಸ್ತಿ ಹಾನಿ ಮಾಡುವುದು ಸರಿಯಲ್ಲ ಎಂದರು.

ಚುನಾವಣೆಯಲ್ಲಿ ನಿಮಗೆ ಶಕ್ತಿ ತುಂಬಿದ್ದೆವು, ಈಗ ಕ್ರಮ ಕೈಗೊಳ್ಳಿ ಅಂತೀರಿ: ಸಿಎಂ ವಿರುದ್ಧ ಕರವೇ ನಾರಾಯಣ ಗೌಡ ಆಕ್ರೋಶ!

ಬರುಗೂರ ರಾಮಚಂದ್ರಪ್ಪ ಅವರು ಸಹ ಕನ್ನಡ ಕಡ್ಡಾಯಕ್ಕೆ ಆಗ್ರಹಿಸಿದ್ದಾರೆ. ನಾವು ಸಹ ಕೆಲವು ಸಮಯದಲ್ಲಿ ಬಿಬಿಎಂಪಿ ಮೂಲಕ ಸೂಚನೆ ನೀಡಿದೆ. ಕರವೇ ಅನ್ನು ಪೊಲೀಸರು ಸರಿಯಾಗಿ ನಡೆಸಿಕೊಂಡಿಲ್ಲ ಎಂದಿದ್ದಾರೆ. ಹೇಗೆ ನಡೆಸಿಕೊಳ್ಳಬೇಕು.? ಪ್ರತಿಭಟನೆ ಮಾಡುತ್ತಿದ್ದರೆ, ಅರ್ಧಗಂಟೆ ಸಮಯ ಕೊಡುತ್ತಾರೆ. ಅದಾದ ನಂತರ ಏನು ಮಾಡಬೇಕು. ಅದನ್ನು ಪೊಲೀಸರು ಮಾಡಿದ್ದಾರೆ. ನಾಮಫಲಕ ವಿಚಾರಕ್ಕೆ ಒತ್ತಾಯ ಪೂರ್ವಕವಾಗಿ ಅಂಗಡಿ, ಶಾಪಿಂಗ್ ಮಾಲ್‌ಗಳ ಮೇಲೆ ದಾಳಿ ಮಾಡುವ ಅವಶ್ಯಕತೆ ಇರಲಿಲ್ಲ. ಈ ಬಗ್ಗೆ ಸರ್ಕಾರ ಅಥವಾ ಬಿಬಿಎಂಪಿಯವರಿಗೆ ಒತ್ತಾಯಿಸಬೇಕಿತ್ತು. ಕಾನೂನು ಕೈಗೆತ್ತಿಕೊಳ್ಳಬೇಕಿರಲಿಲ್ಲ ಎಂದು ಹೇಳಿದರು.

ಪ್ರತಿಭಟನೆಯ ಸಂದರ್ಭದಲ್ಲಿ ವ್ಯಾಪರಸ್ಥರು ಪೊಲೀಸರ ರಕ್ಷಣೆ ಕೋರಿದ್ದಾರೆ. ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದನ್ನು ಪೊಲೀಸರು ಕಣ್ಣಾರೆ ನೋಡಿಕೊಂಡು, ಸುಮ್ಮನಿರಬೇಕು ಎಂದು ಬಯಸುವುದು ತಪ್ಪು. ಕಾನೂನು ಸುವಸ್ಥೆಯನ್ನು ಕಾಪಾಡುವ ಕೆಲಸವನ್ನು ಪೊಲೀಸರು ಮಾಡಿದ್ದಾರೆ. ಇಂತಹ ಘಟನೆಗಳು‌ ಮರುಕಳಿಸಬಾರದು ಎಂದರು.

Narayana Gowda: ಕರವೇ ನಾರಾಯಣ ಗೌಡರ ಮೊದಲ ಪ್ರತಿಭಟನೆ ಪ್ರಾರಂಭವಾಗಿದ್ದು ಹೇಗೆ? ಹಿಂದಿ ಭಾಷಿಕರನ್ನು ಕಂಡ್ರೆ ಆಗುವುದಿಲ್ವಾ ?

ಬೆಂಗಳೂರು ಮಹಾನಗರ ವಿಶ್ವದಲ್ಲೇ ಉತ್ತಮ‌ ನಗರ ಎಂದು ಖ್ಯಾತಿಯಾಗಿದೆ. ಈ ಬಗ್ಗೆ ನಮಗೆ ಹೆಮ್ಮೆ ಇರಬೇಕು. ದಾಂಧಲೆ ನಡೆಸಿದರೆ ಹೇಗೆ? ಹೊರರಾಜ್ಯ, ಹೊರದೇಶದಿಂದ ನಗರಕ್ಕೆ ಬರುವ ಜನರಿಗೆ ಯಾವ ಸಂದೇಶ ನೀಡಬೇಕು. ಇದಕ್ಕಾಗಿ ಪೊಲೀಸರು ಕಾನೂನು ಕ್ರಮ ಜರುಗಿಸಿದ್ದಾರೆ ಎಂದು ಹೇಳಿದರು.

Latest Videos
Follow Us:
Download App:
  • android
  • ios