ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಇಂದು ಭಾರೀ ಮಳೆಯಾಗುತ್ತಿದೆ. ಧಾರಾಕಾರ ಸುರಿದ ಮಳೆಗೆ ಸೇತುವೆ ಕುಸಿದು ಬಿದ್ದ ಘಟನೆ ನೆಲಮಂಗಲ ರಸ್ತೆಯ ಚಿಕ್ಕಿಬಿದರಕಲ್ಲು ಗ್ರಾಮದ ಬಳಿ ನಡೆದಿದೆ.

ನೆಲಮಂಗಲ (ಅ.22): ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಇಂದು ಭಾರೀ ಮಳೆಯಾಗುತ್ತಿದೆ. ಧಾರಾಕಾರ ಸುರಿದ ಮಳೆಗೆ ಸೇತುವೆ ಕುಸಿದು ಬಿದ್ದ ಘಟನೆ ನೆಲಮಂಗಲ ರಸ್ತೆಯ ಚಿಕ್ಕಿಬಿದರಕಲ್ಲು ಗ್ರಾಮದ ಬಳಿ ನಡೆದಿದೆ.

Add Asianetnews Kannada as a Preferred SourcegooglePreferred

ಗ್ರಾಮದ ರಾಮನ ದೇವಾಲಯಕ್ಕೆ ನಿರ್ಮಾಣ ಮಾಡಿದ್ದ ಸೇತುವೆ. ಇದು ನೆಲಮಂಗಲ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿದ್ದ ಸೇತುವೆಯಾಗಿತ್ತು. ಕುಸಿದು ಬಿದ್ದ ಪರಿಣಾಮ ರಾಷ್ಟ್ರೀಯ ಹೆದ್ದಾರಿ ಸರ್ವಿಸ್ ರಸ್ತೆಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿ ನೆಲಮಂಗಲ ಸಂಚಾರಿ ಪೊಲೀಸರಿಂದ ಟ್ರಾಫಿಕ್ ನಿಯಂತ್ರಣಕ್ಕೆ ಹರಸಾಹಸ ಪಡಬೇಕಾಯಿತು.

Viral Video: ಬ್ರ್ಯಾಂಡ್‌ ಬೆಂಗಳೂರು ಅಂತಾ ಎದೆ ಬಡಿದುಕೊಳ್ಳೋ ಡಿಸಿಎಂ ಡಿಕೆಶಿ ನೋಡ್ಲೇಬೇಕಾದ ರಿಪೋರ್ಟ್‌!

ಕಳೆದ ನಾಲ್ಕೈದು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅವಘಡ ಸಂಭವಿಸಿದೆ. ಮಳೆ ಬರುವಾಗ ವಾಹನ ಸವಾರರು ದೇವಾಲಯದ ಬಳಿ ಆಸರೆ ಪಡೆದಿದ್ರು. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ಮಾದನಾಯಕಹಳ್ಳಿ ನಗರಸಭೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ದುರಸ್ತಿ ಕಾರ್ಯಕ್ಕೆ ಮುಂದಾದರು