ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರು ನಗರದ ಟಿ ದಾಸರಹಳ್ಳಿಯ ಚೊಕ್ಕಸಂದ್ರದಲ್ಲಿ ನಡೆದಿದೆ

ಬೆಂಗಳೂರು (ಜ.13): ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರು ನಗರದ ಟಿ ದಾಸರಹಳ್ಳಿಯ ಚೊಕ್ಕಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವ ಮಹಿಳೆಗೆ ಗಂಭೀರ ಗಾಯವಾಗಿದೆ. 1 ಮಗು ಹಾಗೂ ಇಬ್ಬರು ಪುರುಷರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Add Asianetnews Kannada as a Preferred SourcegooglePreferred

ಸಿಲಿಂಡರ್ ಸ್ಫೋಟಕ್ಕೆ ಕಾರಣಗಳು ತಿಳಿದುಬಂದಿಲ್ಲ. ಅನಿಲ ಸೋರಿಕೆಯಿಂದ ಸ್ಫೋಟಿಸಿರುವ ಸಾಧ್ಯತೆ ಇದೆ. ಸ್ಫೋಟದ ರಭಸಕ್ಕೆ ಅಡುಗೆಯಲ್ಲಿದ್ದ ವಸ್ತುಗಳು ಛಿದ್ರಗೊಂಡಿಗೆ ಕಿಟಕಿಗಳು ಒಡೆದು ಅಕ್ಕಪಕ್ಕದ ಮನೆಗಳಿಗೂ ಹಾನಿಯಾಗಿದೆ. 

ಆನೇಕಲ್‌ನಲ್ಲಿ ಸಿಲಿಂಡರ್ ಸ್ಫೋಟಕ್ಕೆ ಇಬ್ಬರ ಸ್ಥಿತಿ ಗಂಭೀರ; ಮನೆ ಕೆಡವಲು ಆದೇಶ ಕೊಟ್ಟ ಸರ್ಕಾರ!

ಸಿಲಿಕಾನ್ ಸಿಟಿಯಲ್ಲಿ ಸಿಲಿಂಡರ್ ಸ್ಫೋಟ ಹೆಚ್ಚಳ:

ದಿನೇದಿನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣಗಳು ಹೆಚ್ಚುತ್ತಲೇ ಇವೆ. ಮೊನ್ನೆಯಷ್ಟೇ ಅನೇಕಲ್ ತಾಲೂಕಿನ ಕಿತ್ತಾಗನಹಳ್ಳಿಯಲ್ಲಿ ಸಿಲಿಂಡರ್ ಸೋರಿಕೆಯಿಂದ ಸಂಭವಿಸಿದ ಸ್ಫೋಟದಲ್ಲಿ ಹಲವರು ಗಂಭೀರ ಗಾಯಗೊಂಡಿದ್ದರು. ಗಾಯಗೊಂಡವರ ಪೈಕಿ ಗಂಭೀರವಾಗಿ ಗಾಯಗೊಂಡಿದ್ದ ವಿಷ್ಣು ಜಯರಾಜ್ ಎಂಬುವವರು ಓರ್ವ ಮೃತಪಟ್ಟಿದ್ದರು. ಆನೇಕಲ್ ಸಿಲಿಂಡರ್ ಸ್ಫೋಟದ ಬೆನ್ನಲ್ಲೇ ಇದೀಗ ಟಿ ದಾಸರಹಳ್ಳಿಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಮಗು ಸೇರಿ ಹಲವರು ಗಾಯಗೊಂಡಿದ್ದಾರೆ. ಇದರಿಂದಾಗಿ ಅಡುಗೆ ಮನೆಯಲ್ಲಿ ಸಿಲಿಂಡರ್ ಬಳಸಲು ಹೆದರುವಂತಾಗಿದೆ.