Asianet Suvarna News Asianet Suvarna News

ರಾಜ್ಯವನ್ನು ಉತ್ಪಾದನಾ ತಾಣ ಮಾಡಲು ಮಸೂದೆ: ಸಿಎಂ ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿ ಕೈಗಾರಿಕಾ ವಲಯವನ್ನು ಉದ್ಯಮಿ ಸ್ನೇಹಿಯನ್ನಾಗಿಸುವ, ರಾಜ್ಯವನ್ನು ಜಾಗತಿಕ ಉತ್ಪಾದನಾ ಪ್ರಮುಖ ತಾಣವನ್ನಾಗಿ ಮಾಡುವ ‘ಕರ್ನಾಟಕ ವಿಶೇಷ ಹೂಡಿಕೆ ಪ್ರದೇಶ ವಿಧೇಯಕ 2022’ಕ್ಕೆ ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಯಿತು.

Bill to make state manufacturing hub says CM bommai rav
Author
First Published Dec 28, 2022, 1:18 AM IST

ವಿಧಾನಸಭೆ (ಡಿ.28) : ರಾಜ್ಯದಲ್ಲಿ ಕೈಗಾರಿಕಾ ವಲಯವನ್ನು ಉದ್ಯಮಿ ಸ್ನೇಹಿಯನ್ನಾಗಿಸುವ, ರಾಜ್ಯವನ್ನು ಜಾಗತಿಕ ಉತ್ಪಾದನಾ ಪ್ರಮುಖ ತಾಣವನ್ನಾಗಿ ಮಾಡುವ ‘ಕರ್ನಾಟಕ ವಿಶೇಷ ಹೂಡಿಕೆ ಪ್ರದೇಶ ವಿಧೇಯಕ 2022’ಕ್ಕೆ ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಯಿತು. ಹೂಡಿಕೆದಾರರ ಆಕರ್ಷಿಸಲು ಈ ಕಾಯ್ದೆ ಅನುಕೂಲವಾಗಲಿದೆ. ಜತೆಗೆ ಕೈಗಾರಿಕಾ ಪ್ರದೇಶಗಳ ನಿರ್ವಹಣೆ, ಅಭಿವೃದ್ಧಿಗೆ ಈ ಅಧಿನಿಯಮ ಸಹಕಾರಿಯಾಗಲಿದೆ. ಇನ್ನು ಪರಿಷತ್‌ನಲ್ಲಿ ಈ ವಿಧೇಯಕ ಅಂಗೀಕಾರವಾಗುವುದು ಬಾಕಿಯಿದೆ.

ಗುಜರಾತ್‌((Gujarat), ರಾಜಸ್ಥಾನ(Rajastan)ದಲ್ಲಿ ಈ ಮಾದರಿಯ ಅಧಿನಿಯಮ ಜಾರಿಗೊಳಿಸಲಾಗಿದೆ. ರಾಜ್ಯದಲ್ಲಿ ದೊಡ್ಡ ಅಥವಾ ಅತಿದೊಡ್ಡ ಅಥವಾ ಬೃಹತ್‌ ಗಾತ್ರದ ಹೂಡಿಕೆ ಪ್ರದೇಶಗಳು ಮತ್ತು ಕೈಗಾರಿಕಾ ಪ್ರದೇಶ(Industrial area), ಕ್ಲಸ್ಟರ್‌ ಸ್ಥಾಪಿಸಲು, ನಡೆಸಲು ನಿಯಂತ್ರಿಸಲು ಮತ್ತು ನಿರ್ವಹಿಸಲು, ರಾಜ್ಯವನ್ನು ಜಾಗತಿಕ ಉತ್ಪಾದನಾ ಪ್ರಮುಖ ತಾಣವಾಗಿ(manufacturing hub) ಉಳಿಸಿಕೊಳ್ಳಲು, ವಿಶ್ವ ದರ್ಜೆಯ ಮೂಲಸೌಕರ್ಯ ಕಲ್ಪಿಸಲು, ಪೂರ್ವಭಾವಿ ನೀತಿ ಚೌಕಟ್ಟಿನಲ್ಲೇ ವಿಶೇಷ ಹೂಡಿಕಾ ವಿಧೇಯಕ(Special investment Bill)ದ ಉದ್ದೇಶವಾಗಿದೆ.

ಶೀಘ್ರ ವರದಿ ಸಲ್ಲಿಕೆಗೆ ಹಿಂದುಳಿದ ವರ್ಗಗಳ ಆಯೋಗಕ್ಕೆ ಸೂಚನೆ: ಸಿಎಂ ಬೊಮ್ಮಾಯಿ

ವಿಧಾನಸಭೆಯಲ್ಲಿ ವಿಶೇಷ ಹೂಡಿಕೆ ಪ್ರದೇಶದ ವಿಧೇಯಕವನ್ನು ಮಂಡಿಸಿದ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ, ಈಗಾಗಲೇ ರಾಜ್ಯದಲ್ಲಿರುವ 1250 ಎಕರೆ ಜಮೀನುವುಳ್ಳ ಕೈಗಾರಿಕಾ ಪ್ರದೇಶ ಹಾಗೂ ಹೊಸದಾಗಿ 2,500 ಎಕರೆ ಪ್ರದೇಶವುಳ್ಳ ಕೈಗಾರಿಕಾಪ್ರದೇಶಗಳನ್ನು ಈ ಅಧಿನಿಯಮದಡಿ ಬರುತ್ತವೆ. ವಿಶೇಷ ಹೂಡಿಕೆ ಪ್ರದೇಶವೆಂದು ಘೋಷಿಸಲಾಗುವುದು. ಇವುಗಳ ನಿರ್ವಹಣೆಗೆ ಅಧಿನಿಯಮದಡಿ ವಿಶೇಷ ಹೂಡಿಕೆ ಅಗ್ರ ಪ್ರಾಧಿಕಾರ ರಚಿಸುವುದು, ಪ್ರಾಧಿಕಾರದ ಮೂಲಕ ಆ ಪ್ರದೇಶಗಳನ್ನು ನಿರ್ವಹಣೆ ಹಾಗೂ ಅಭಿವೃದ್ಧಿ ಪಡಿಸುವುದಾಗಿದೆ. ಇಲ್ಲಿ ಹೂಡಿಕೆದಾರರಿಗೆ ಮಾಲಿನ್ಯ ನಿಯಂತ್ರಣ ಮಂಡಳಿಯ ಅನುಮತಿ ಹೊರತುಪಡಿಸಿ ಉಳಿದ ಎಲ್ಲ ಅನುಮತಿಗಳನ್ನು ಈ ಪ್ರಾಧಿಕಾರವೇ ನೀಡಲಿವೆ. ಈ ಪ್ರಾಧಿಕಾರಕ್ಕೆ ಕೆಐಡಿಎಬಿ, ಆರ್‌ಡಿಪಿಆರ್‌ ಇಲಾಖೆಗಳಿಂದ ಒಪ್ಪಿಗೆ ಪಡೆಯಲಾಗಿದೆ. ಈ ಪ್ರದೇಶಗಳಿಂದ ಸಂಗ್ರಹವಾಗುವ ತೆರಿಗೆಯನ್ನು ಇದೇ ಪ್ರಾಧಿಕಾರ ಸಂಗ್ರಹಿಸುತ್ತದೆ. ಅದರಲ್ಲಿ ಶೇ.30ರಷ್ಟುಸ್ಥಳೀಯ ಸಂಸ್ಥೆಗೆ ನೀಡಿದರೆ, ಉಳಿದ ಶೇ.70ರಷ್ಟುತೆರಿಗೆಯಲ್ಲಿ ಆ ಪ್ರದೇಶದ ಅಭಿವೃದ್ಧಿಗೆ ಬಳಸಿಕೊಳ್ಳುತ್ತದೆ ಎಂದು ವಿವರಿಸಿದರು.

ಆಗ ಮಧ್ಯಪ್ರವೇಶಿಸಿದ ಕಾಂಗ್ರೆಸ್‌ ಸದಸ್ಯ ಆರ್‌.ವಿ.ದೇಶಪಾಂಡೆ, ಇದು ಒಳ್ಳೆಯ ಮಸೂದೆ. ಆದರೆ, ಇದರ ಅನುಷ್ಠಾನ ಕಷ್ಟವಾಗಲಿದೆ. ಉಳಿದ ಇಲಾಖೆಗಳು ಇದಕ್ಕೆ ಅನುಮತಿಸುತ್ತವೆ ಎಂಬ ನಂಬಿಕೆಯಿಲ್ಲ ಎಂದು ತಿಳಿಸಿದರು.

ಅದಕ್ಕೆ ಸ್ಪಷ್ಟಪಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, 2013ರಲ್ಲಿ ಎಲೆಕ್ಟ್ರಾನಿಕ್‌ ಸಿಟಿಯ ಟೌನ್‌ಶಿಪ್‌ಗೆ ಸಂಬಂಧಪಟ್ಟಂತೆ ನೀವೇ ಒಂದು ಬಿಲ್‌ ತಂದಿದ್ದೀರಿ. ಅದು ಅದರನ್ವಯವೇ ಎಲೆಕ್ಟ್ರಾನಿಕ್‌ ಸಿಟಿ ಅಭಿವೃದ್ಧಿ ಪಡಿಸಲಾಗಿದೆ. ಅದೇ ಮಾದರಿಯಲ್ಲಿ ಈ ಮಸೂದೆಯನ್ನು ತರಲಾಗಿದೆ. ಇದು ಬಂಡವಾಳ ಹೂಡಿಕೆದಾರರನ್ನು ಹೆಚ್ಚೆಚ್ಚು ಆಕರ್ಷಿಸುತ್ತದೆ. ಜತೆಗೆ ವಿಶೇಷ ಹೂಡಿಕೆ ಪ್ರದೇಶದ ಅಭಿವೃದ್ಧಿ ಹಾಗೂ ನಿರ್ವಹಣೆಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಸ್ಪಷ್ಟಪಡಿಸಿದರು.

ಗಡಿ ವಿಚಾರದಲ್ಲಿ ಕರ್ನಾಟಕದ ಹಿತರಕ್ಷಣೆಗೆ ಹಿಂದೇಟು ಇಲ್ಲ: ಸಿಎಂ ಬೊಮ್ಮಾಯಿ

ಅಂಗೀಕಾರ:

ಬಳಿಕ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ(Vishweshwar Hegade Kageri) ಅವರು ಈ ಮಸೂದೆಯನ್ನು ಧ್ವನಿಮತಕ್ಕೆ ಹಾಕಿದರು. ಅದಕ್ಕೆ ಸದನದಲ್ಲಿ ಸರ್ವಾನುಮತದಿಂದ ಅಂಗೀಕಾರವಾಯಿತು.

Follow Us:
Download App:
  • android
  • ios