ವಿವಾದಾತ್ಮಕ ಹೇಳಿಕೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ ನಾಯಕರು ಕಿಡಿಕಾರಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ, ಮಾಜಿ ಸಿಎಂ ಬೊಮ್ಮಾಯಿ, ವಿಪಕ್ಷ ನಾಯಕ ಆರ್‌.ಅಶೋಕ್‌ ಅವರು ಹರಿಹಾಯ್ದಿದ್ದಾರೆ.

ಬೆಂಗಳೂರು(ಜ.09): ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿಯು ಮಹಾರಾಷ್ಟ್ರಕ್ಕೆ ಸೇರಿತ್ತು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ ನಾಯಕರು ಕಿಡಿಕಾರಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ, ಮಾಜಿ ಸಿಎಂ ಬೊಮ್ಮಾಯಿ, ವಿಪಕ್ಷ ನಾಯಕ ಆರ್‌.ಅಶೋಕ್‌ ಅವರು ಪ್ರತ್ಯೇಕವಾಗಿ ಮಾತನಾಡಿ ಸಚಿವೆ ಹೆಬ್ಬಾಳ್ಕರ್ ವಿರುದ್ಧ ಹರಿಹಾಯ್ದಿದ್ದಾರೆ.

Add Asianetnews Kannada as a Preferred SourcegooglePreferred

ಕುಮಾರಸ್ವಾಮಿ ಮಾತನಾಡಿ, ಮುಗಿದು ಹೋಗಿರುವ ವಿಷಯವನ್ನು ಪದೇ ಪದೇ ಕೆಣಕುವ ಅಗತ್ಯ ಏನಿದೆ? ಮುಖ್ಯಮಂತ್ರಿಗಳಿಗೆ ಸಚಿವರ ಮೇಲೆ ಹಿಡಿತ ಇದ್ದರೆ ಅವರನ್ನು ಕರೆದು ಸರಿಯಾಗಿ ಬುದ್ಧಿ ಹೇಳಬೇಕು ಎಂದು ಒತ್ತಾಯಿಸಿದರು.
ಬೊಮ್ಮಾಯಿ ಮಾತನಾಡಿ, ಹೆಬ್ಬಾಳ್ಕರ್ ಹೇಳಿಕೆಯು ಅಪ್ರಬುದ್ಧವಾಗಿದೆ. ಪ್ರಕರಣ ಸುಪ್ರೀಂಕೋರ್ಟ್‌ನಲ್ಲಿ ಇದೆ ಎನ್ನುವುದು ಗೊತ್ತಿರಬೇಕು. ಅವರು ಸಚಿವರಾಗಿರಲು ಅರ್ಹರಲ್ಲ ಎಂದರು.

ಬೆಳಗಾವಿ ಮುಂಚೆ ಮಹಾರಾಷ್ಟ್ರಕ್ಕೆ ಸೇರಿತ್ತೆಂಬ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ ಬೆಂಬಲಿಸಿದ ಸಚಿವ ಎಂ.ಬಿ. ಪಾಟೀಲ್!

ಅಶೋಕ್‌ ಮಾತನಾಡಿ, ಸಚಿವೆ ಲಕ್ಷ್ಮೀ ಮರಾಠಾ ಮತಗಳ ಕಾರಣಕ್ಕಾಗಿ ಹೇಳಿಕೆ ನೀಡಿದ್ದಾರೆ. ಅವರು ರಾಜ್ಯದಲ್ಲಿ ಸಾಂವಿಧಾನಿಕವಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆಯೇ ಹೊರತು ಮಹಾರಾಷ್ಟ್ರದಲ್ಲಿ ಅಲ್ಲ. ರಾಜ್ಯದ ಏಳೂವರೆ ಕೋಟಿ ಜನರ ಸಚಿವರಾಗಿರುವ ಅವರು ಇಂತಹ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಟೀಕಿಸಿದರು.

ಕುಮಾರಸ್ವಾಮಿ ಮಾತನಾಡಿ, ಮುಗಿದು ಹೋಗಿರುವ ವಿಷಯವನ್ನು ಪದೇ ಪದೇ ಕೆಣಕುವ ಅಗತ್ಯ ಏನಿದೆ? ಅವರಿಗೆ ಮಹಾರಾಷ್ಟ್ರದ ವ್ಯಾಮೋಹದಿಂದ ಹೊರಬರಲು ಸಾಧ್ಯವಿಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿ ಇರುವ ಸಚಿವರೇ ಇಂತಹ ಅನಗತ್ಯ, ವಿವಾದಾಸ್ಪದ ಹೇಳಿಕೆ ನೀಡಿರುವುದು ಸರಿನಾ? ಮುಖ್ಯಮಂತ್ರಿಗಳಿಗೆ ಸಚಿವರ ಮೇಲೆ ಹಿಡಿತ ಇದ್ದರೆ ಅವರನ್ನು ಕರೆದು ಸರಿಯಾಗಿ ಬುದ್ಧಿ ಹೇಳಬೇಕು ಎಂದು ಒತ್ತಾಯಿಸಿದರು.

ಬಸವರಾಜ ಬೊಮ್ಮಾಯಿ ಮಾತನಾಡಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿ ಬಗ್ಗೆ ನೀಡಿರುವ ಹೇಳಿಕೆಯು ಅಪ್ರಬುದ್ಧವಾಗಿದೆ. ಪ್ರಕರಣ ಸುಪ್ರೀಂಕೋರ್ಟ್‌ನಲ್ಲಿ ಇದೆ ಎನ್ನುವುದು ಗೊತ್ತಿರಬೇಕು. ಅವರು ಸಚಿವರಾಗಿರಲು ಅರ್ಹರಲ್ಲ ಎಂದು ತಿಳಿಸಿದರು.

ಅಶೋಕ್‌ ಮಾತನಾಡಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಮರಾಠಾ ಮತಗಳ ಕಾರಣಕ್ಕಾಗಿ ಹೇಳಿಕೆ ನೀಡಿದ್ದಾರೆ. ಅವರು ರಾಜ್ಯದಲ್ಲಿ ಸಾಂವಿಧಾನಿಕವಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆಯೇ ಹೊರತು ಮಹಾರಾಷ್ಟ್ರದಲ್ಲಿ ಅಲ್ಲ. ರಾಜ್ಯದ ಏಳೂವರೆ ಕೋಟಿ ಜನರ ಸಚಿವರಾಗಿರುವ ಅವರು ಇಂತಹ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಟೀಕಿಸಿದರು.

ಬೆಂಗಳೂರು: ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿಯು ಮಹಾರಾಷ್ಟ್ರಕ್ಕೆ ಸೇರಿತ್ತು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ ಮಹಿಳೆ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ ನಾಯಕರು ಕಿಡಿಕಾರಿದ್ದಾರೆ.

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಅವರು ಪ್ರತ್ಯೇಕವಾಗಿ ಮಾತನಾಡಿ ಸಚಿವೆ ಹೆಬ್ಬಾಳ್ಕರ್ ವಿರುದ್ಧ ಹರಿಹಾಯ್ದಿದ್ದಾರೆ.

ಕುಮಾರಸ್ವಾಮಿ ಮಾತನಾಡಿ, ಮುಗಿದು ಹೋಗಿರುವ ವಿಷಯವನ್ನು ಪದೇ ಪದೇ ಕೆಣಕುವ ಅಗತ್ಯ ಏನಿದೆ? ಅವರಿಗೆ ಮಹಾರಾಷ್ಟ್ರದ ವ್ಯಾಮೋಹದಿಂದ ಹೊರಬರಲು ಸಾಧ್ಯವಿಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿ ಇರುವ ಸಚಿವರೇ ಇಂತಹ ಅನಗತ್ಯ, ವಿವಾದಾಸ್ಪದ ಹೇಳಿಕೆ ನೀಡಿರುವುದು ಸರಿನಾ? ಮುಖ್ಯಮಂತ್ರಿಗಳಿಗೆ ಸಚಿವರ ಮೇಲೆ ಹಿಡಿತ ಇದ್ದರೆ ಅವರನ್ನು ಕರೆದು ಸರಿಯಾಗಿ ಬುದ್ಧಿ ಹೇಳಬೇಕು ಎಂದು ಒತ್ತಾಯಿಸಿದರು.

ಬಸವರಾಜ ಬೊಮ್ಮಾಯಿ ಮಾತನಾಡಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿ ಬಗ್ಗೆ ನೀಡಿರುವ ಹೇಳಿಕೆಯು ಅಪ್ರಬುದ್ಧವಾಗಿದೆ. ಪ್ರಕರಣ ಸುಪ್ರೀಂಕೋರ್ಟ್‌ನಲ್ಲಿ ಇದೆ ಎನ್ನುವುದು ಗೊತ್ತಿರಬೇಕು. ಅವರು ಸಚಿವರಾಗಿರಲು ಅರ್ಹರಲ್ಲ ಎಂದು ತಿಳಿಸಿದರು.

ಅಶೋಕ್‌ ಮಾತನಾಡಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಮರಾಠಾ ಮತಗಳ ಕಾರಣಕ್ಕಾಗಿ ಹೇಳಿಕೆ ನೀಡಿದ್ದಾರೆ. ಅವರು ರಾಜ್ಯದಲ್ಲಿ ಸಾಂವಿಧಾನಿಕವಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆಯೇ ಹೊರತು ಮಹಾರಾಷ್ಟ್ರದಲ್ಲಿ ಅಲ್ಲ. ರಾಜ್ಯದ ಏಳೂವರೆ ಕೋಟಿ ಜನರ ಸಚಿವರಾಗಿರುವ ಅವರು ಇಂತಹ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಟೀಕಿಸಿದರು.

ಭವ್ಯ ಭಾರತ ವಿಶ್ವ ಗುರು ಆಗಲು ಯುವಜನರೇ ಕಾರಣ: ಸಚಿವೆ ಲಕ್ಷ್ಮೀ ಹೆಬ್ಬಾಳಕರ

ಕುಮಾರಸ್ವಾಮಿ ಮಾತನಾಡಿ, ಮುಗಿದು ಹೋಗಿರುವ ವಿಷಯವನ್ನು ಪದೇ ಪದೇ ಕೆಣಕುವ ಅಗತ್ಯ ಏನಿದೆ? ಅವರಿಗೆ ಮಹಾರಾಷ್ಟ್ರದ ವ್ಯಾಮೋಹದಿಂದ ಹೊರಬರಲು ಸಾಧ್ಯವಿಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿ ಇರುವ ಸಚಿವರೇ ಇಂತಹ ಅನಗತ್ಯ, ವಿವಾದಾಸ್ಪದ ಹೇಳಿಕೆ ನೀಡಿರುವುದು ಸರಿನಾ? ಮುಖ್ಯಮಂತ್ರಿಗಳಿಗೆ ಸಚಿವರ ಮೇಲೆ ಹಿಡಿತ ಇದ್ದರೆ ಅವರನ್ನು ಕರೆದು ಸರಿಯಾಗಿ ಬುದ್ಧಿ ಹೇಳಬೇಕು ಎಂದು ಒತ್ತಾಯಿಸಿದರು.

ಬಸವರಾಜ ಬೊಮ್ಮಾಯಿ ಮಾತನಾಡಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿ ಬಗ್ಗೆ ನೀಡಿರುವ ಹೇಳಿಕೆಯು ಅಪ್ರಬುದ್ಧವಾಗಿದೆ. ಪ್ರಕರಣ ಸುಪ್ರೀಂಕೋರ್ಟ್‌ನಲ್ಲಿ ಇದೆ ಎನ್ನುವುದು ಗೊತ್ತಿರಬೇಕು. ಅವರು ಸಚಿವರಾಗಿರಲು ಅರ್ಹರಲ್ಲ ಎಂದು ತಿಳಿಸಿದರು.

ಅಶೋಕ್‌ ಮಾತನಾಡಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಮರಾಠಾ ಮತಗಳ ಕಾರಣಕ್ಕಾಗಿ ಹೇಳಿಕೆ ನೀಡಿದ್ದಾರೆ. ಅವರು ರಾಜ್ಯದಲ್ಲಿ ಸಾಂವಿಧಾನಿಕವಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆಯೇ ಹೊರತು ಮಹಾರಾಷ್ಟ್ರದಲ್ಲಿ ಅಲ್ಲ. ರಾಜ್ಯದ ಏಳೂವರೆ ಕೋಟಿ ಜನರ ಸಚಿವರಾಗಿರುವ ಅವರು ಇಂತಹ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಟೀಕಿಸಿದರು.