ಆಪರೇಷನ್ ಕಮಲ ವಿಚಾರದಲ್ಲಿ ಮೊದಲ ಬಾರಿಗೆ ಬಿಜೆಪಿ ಶಾಸಕ ಅಶ್ವಥ್ ನಾರಾಯಣ್ ಹೆಸರು ಕೇಳಿ ಬಂದಿದ್ದು, ಈ ಬಗ್ಗೆ ಮೊದಲ ಬಾರಿಗೆ ಅವರು ಪ್ರತಿಕ್ರಿಯಿಸಿದ್ದಾರೆ. 

ಬೆಂಗಳೂರು : ರಾಜ್ಯ ರಾಜ್ಯಕಾರಣದಲ್ಲಿ ಹೆಚ್ಚು ಚರ್ಚೆಗೆ ಕಾರಣವಾದ ಆಪರೇಷನ್ ಕಮಲದಲ್ಲಿ ಮಲ್ಲೇಶ್ವರಂ ಶಾಸಕ ಅಶ್ವಥ್ ನಾರಾಯಣ ಹೆಸರು ಕೇಳಿ ಬಂದಿದ್ದು, ಈ ಆರೋಪಕ್ಕೆ ಮೊದಲ ಬಾರಿಗೆ ಅಶ್ವಥ್ ನಾರಾಯಣ ಪ್ರತಿಕ್ರಿಯೆ ನೀಡಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್ ಅವರನ್ನು ತಾವು ಭೇಟಿ ಮಾಡಿದ್ದು ನಿಜವೆಂದು ಒಪ್ಪಿಕೊಂಡಿದ್ದಾರೆ. ಆದರೆ ಡಾಕ್ಟರ್ ಕಾನ್ಫರೆನ್ಸ್ ನಲ್ಲಿ ನಾವು ಭೇಟಿಯಾದೆವು. 

ಈ ಭೇಟಿಯನ್ನು ಆಪರೇಷನ್ ಕಮಲ ಎಂದು ಬಿಂಬಿಸುವುದು ತಪ್ಪು, ಅವರ ಪಕ್ಷದಲ್ಲಿ ಇರುವ ವೈಮನಸ್ಸು, ವ್ಯತ್ಯಾಸಗಳನ್ನಸರಿ ಪಡಿಸಿಕೊಳ್ಳಲು ಸಾಧ್ಯವಾಗಿಲ್ಲ. ಯಾವ ಆಪರೇಷನ್ ಕೂಡ ಇಲ್ಲ, ಆ ಪಕ್ಷದಲ್ಲಿನ ಅತೃಪ್ತಿ ಬಗ್ಗೆ ಅವರು ಹೇಳಿಕೊಳ್ಳುತ್ತಿದ್ದಾರೆ. ಯಾವ ಶಾಸಕರನ್ನು ಯಾರೇ ಇನ್ ಫ್ಲುಯೆನ್ಸ್ ಮಾಡುತ್ತೇನೆ ಎಂದರೂ ಅದು ಸಾಧ್ಯವಿಲ್ಲ ಎಂದರು.

ಈ ಸರ್ಕಾರದಲ್ಲಿ ಎಲ್ಲಾ ಶಾಸಕರನ್ನ ಒಗ್ಗಟ್ಟಿನಿಂದ ಇರಿಸಿಕೊಳ್ಳಲು ಸಾಧ್ಯವಾಗದಿದ್ದವರು ರಾಜ್ಯದ ಆಡಳಿತ ಹೇಗೆ ಮಾಡುತ್ತಾರೆ ಎಂದು ಸಿಎಂ ಕುಮಾರಸ್ವಾಮಿ ವಿರುದ್ಧ ಅಶ್ವಥ್ ನಾರಾಯಣ್ ಕಿಡಿ ಕಾರಿದ್ದಾರೆ.