ರಾಜ ಕಡಿಮೆ ಮಾತನಾಡಿದಷ್ಟೂ ಒಳ್ಳೆಯದು, ಹೀಗಂತ ಹೇಳಿದ್ಯಾರಿಗೆ?: ಸುರೇಶ್ ಕುಮಾರ್ ಸ್ಪಷ್ಟನೆ ಹೀಗಿದೆ.

ಬೆಂಗಳೂರು, [ಡಿ.11]: ಇಡೀ ದೇಶದ ಕಣ್ಣು ನೆಟ್ಟಿದ್ದ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಇಂದು ಹೊರಬಿದ್ದಿದೆ. ಮೋದಿ ವರ್ಸಸ್ ರಾಹುಲ್ ಗಾಂಧಿ ನಡುವಿನ ನೇರ ಹಣಾಹಣಿ ಎಂಬಂತೆ ಇದ್ದ ಈ ಪಂಚ ಯುದ್ಧದಲ್ಲಿ ಕೈ ಆರ್ಭಟಕ್ಕೆ ಕಮಲ ಪಡೆ ಮುದುರಿ ಕುಳಿತಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮತ್ತೊಂದೆಡೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ತಮ್ಮದೇ ರೀತಿಯಲ್ಲಿ ಪಂಚ ರಾಜ್ಯಗಳ ರಿಸಲ್ಟ್ ಅನ್ನು ವ್ಯಂಗ್ಯ, ವಿಡಂಬನಾತ್ಮಕ, ಟೀಕೆಗಳ ಮೂಲಕ ವಿಮರ್ಶೆ ಮಾಡಿದ್ದಾರೆ.

ಈ ನಡುವೆ ಟ್ರೋಲ್ ಒಂದು ಬಿಜೆಪಿ ಶಾಸಕ ಸುರೇಶ್ ಕುಮಾರ್ ಹೆಗಲೇರಿದೆ. ಕುಮಾರಸ್ವಾಮಿಯವರು "ಬೇರೆಯವರ ಹಂಗಿನಲ್ಲಿದ್ದೇನೆ ಎಂದಿದ್ದಾಗ, ರಾಜ ಕಡಿಮೆ ಮಾತನಾಡಿದಷ್ಟೂ ಒಳ್ಳೆಯದು ಎಂದು ಸುರೇಶ್ ಕುಮಾರ್ ಅವರು ಟ್ವೀಟ್ ಮಾಡಿದ್ದರು. 

ಆ ಟ್ವೀಟ್ ಅನ್ನು ದುರುಪಯೋಗ ಪಡಿಸಿಕೊಂಡಿರುವ ಕಿಡಿಗೇಡಿಗಳು ತಮಗೆ ಬೇಕಾದಂತೆ ಬರೆದುಕೊಂಡಿದ್ದಾರೆ. 'ರಾಜ ಕಡಿಮೆ ಮಾತನಾಡಿದಷ್ಟೂ ಒಳ್ಳೆಯದು' ಈ ಒಂದು ವಾಕ್ಯವನ್ನು ಈಗ ಪಂಚ ರಾಜ್ಯ ಚುನಾವಣೆ ಫಲಿತಾಂಶಕ್ಕೆ ಹೋಲಿಸಿ, ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ಹಾಕಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

ಇದು ಸುರೇಶ್ ಕುಮಾರ್ ಅವರ ಗಮನಕ್ಕೆ ಬಂದಿದ್ದು, ಈ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದು ಹೀಗೆ.

Scroll to load tweet…