ಹತ್ಯೆಗೀಡಾದ ಪಾಂಗಳದ ಸೌಜನ್ಯ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಸೋಮವಾರ ಭೇಟಿ ನೀಡಿ ಸೌಜನ್ಯ ತಾಯಿ ಕುಸುಮಾವತಿ ಅವರೊಂದಿಗೆ ಮಾತುಕತೆ ನಡೆಸಿದರು.

ಬೆಳ್ತಂಗಡಿ : ಹತ್ಯೆಗೀಡಾದ ಪಾಂಗಳದ ಸೌಜನ್ಯ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಸೋಮವಾರ ಭೇಟಿ ನೀಡಿ ಸೌಜನ್ಯ ತಾಯಿ ಕುಸುಮಾವತಿ ಅವರೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ, ಕುಸುಮಾವತಿ ಅವರು ತಮ್ಮ ವಿರುದ್ಧ ನಡೆಯುತ್ತಿರುವ ಅಪಪ್ರಚಾರಗಳ ಬಗ್ಗೆ ವಿಜಯೇಂದ್ರ ಅವರ ಗಮನ ಸೆಳೆದರು.

Add Asianetnews Kannada as a Preferred SourcegooglePreferred

ಧರ್ಮಸ್ಥಳ ವಿರುದ್ಧದ ಅಪಪ್ರಚಾರ ಖಂಡಿಸಿ ಬಿಜೆಪಿ ವತಿಯಿಂದ ಸೋಮವಾರ ‘ಧರ್ಮಸ್ಥಳ ಚಲೋ’ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಸಮಾವೇಶದ ಬಳಿಕ ವಿಜಯೇಂದ್ರ ಹಾಗೂ ಇತರ ನಾಯಕರು ಸೌಜನ್ಯ ನಿವಾಸಕ್ಕೆ ಭೇಟಿ ನೀಡಿದರು. ಸೌಜನ್ಯ ಪರ ಹೋರಾಟದಲ್ಲಿ ಜತೆಗಿರುವುದಾಗಿ ಭರವಸೆ ನೀಡಿದರು. ಈ ವೇಳೆ ವಿಜಯೇಂದ್ರ ಮುಂದೆ, ‘ನನ್ನ ಮಗಳ ಸಾವಿಗೆ ಇನ್ನೂ ನ್ಯಾಯ ಸಿಕ್ಕಿಲ್ಲ’ ಎಂದು ತಾಯಿ ಕುಸುಮಾವತಿ ಕಣ್ಣೀರು ಹಾಕಿದರು.

ಬಳಿಕ ಮಾತನಾಡಿದ ವಿಜಯೇಂದ್ರ, ಸೌಜನ್ಯ ವಿಚಾರದ ಬಗ್ಗೆ ಬೇಸರವಿದೆ. ಈ ಪ್ರಕರಣದ ವಿರುದ್ಧ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದರೆ, ಅದರ ಸಂಪೂರ್ಣ ಖರ್ಚು- ವೆಚ್ಚಗಳ ಜವಾಬ್ದಾರಿಯನ್ನು ಬಿಜೆಪಿ ವಹಿಸಿಕೊಳ್ಳಲಿದೆ. ಜೊತೆಗೆ, ಕಾನೂನು ಹೋರಾಟಕ್ಕೆ ಅಗತ್ಯ ಸಹಕಾರವನ್ನು ನೀಡಲಿದೆ ಎಂದರು. ಸಂಸದ‌ ಬ್ರಿಜೇಶ್ ಚೌಟ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಪಕ್ಷದ ಮುಖಂಡರು ವಿಜಯೇಂದ್ರಗೆ ಸಾಥ್‌ ನೀಡಿದರು.