Asianet Suvarna News Asianet Suvarna News

ಮಂಗಳೂರಲ್ಲಿ ಸಿಎಂ ಸಿದ್ದರಾಮಯ್ಯಗೆ ಪ್ರತಿಭಟನೆ ಬಿಸಿ; ಕಪ್ಪುಟ ಬಾವುಟ ಪ್ರದರ್ಶಸಿ ಬಿಜೆಪಿ ಆಕ್ರೋಶ

ರಾಜ್ಯ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶಿಸಿ, ಘೇರಾವ್ ಗೆ ಯತ್ನಿಸಿದ ಘಟನೆ ಹೊರವಲಯ ಬೋಂದೆಲ್ ಬಳಿ ಇಂದು ನಡೆಯಿತು.

BJP workers Protest against CM Siddaramaiah at mangaluru rav
Author
First Published Feb 17, 2024, 8:05 PM IST

ಮಂಗಳೂರು (ಫೆ.17): ರಾಜ್ಯ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶಿಸಿ, ಘೇರಾವ್ ಗೆ ಯತ್ನಿಸಿದ ಘಟನೆ ಹೊರವಲಯ ಬೋಂದೆಲ್ ಬಳಿ ಇಂದು ನಡೆಯಿತು.

ಅಡ್ಯಾರ್ ನ ಸಹ್ಯಾದಿ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಭಿತ್ತಿಪತ್ರ ಹಿಡಿದು ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರು, ಕಾರನ್ನು ತಡೆದು ಘೇರಾವ್ ಹಾಕಲು ಯತ್ನಿಸಿದರು.

ಬಿಜೆಪಿಯವ್ರು ಬರ್ತಾ ಬರ್ತಾ ಸಂವಿಧಾನ ವಿರೋಧಿಗಳಾಗುತ್ತಿದ್ದಾರೆ: ಸಚಿವ ಎನ್‌ಎಸ್ ಬೋಸರಾಜು ಕಿಡಿ

ಶಾಸಕ ಭರತ್ ಶೆಟ್ಟಿ ಹಾಗೂ ವೇದವ್ಯಾಸ್ ಕಾಮತ್ ಮೇಲೆ ವಿನಾಕಾರಣ ಎಫ್ ಐಆರ್ ದಾಖಲಿಸಲಾಗಿದೆ ಎಂದು ಆರೋಪಿಸಿದರು. ಸ್ಥಳದಲ್ಲಿದ್ದ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.

ಮೈಸೂರು ಕ್ಷೇತ್ರ ಗೆಲ್ಲಲು ಕಾಂಗ್ರೆಸ್ ರಣತಂತ್ರ! ಡಾಲಿ ಧನಂಜಯ್ ರಾಜಕೀಯಕ್ಕೆ ಎಂಟ್ರಿ ಕೊಟ್ರೆ ಪ್ರತಾಪ್ ಸಿಂಹ ವಿರುದ್ಧ ಕಣಕ್ಕೆ? 

Follow Us:
Download App:
  • android
  • ios