ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ರಾಜ್ಯ ಸರ್ಕಾರ ನೂತನ ಅಧ್ಯಕ್ಷರ ನೇಮಕ ಮಾಡಿದೆ. 

ಬೆಂಗಳೂರು, (ನ.24): ಮೊನ್ನೇ ಅಷ್ಟೇ ರಚನೆಯಾಗಿರುವ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ಬಿ.ಎಸ್.ಪರಮಶಿವಯ್ಯ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮರಾಠ ಅಭಿವೃದ್ಧಿ ಪ್ರಾಧಿಕಾರದ ರಚನೆ ಬೆನ್ನಲ್ಲೇ ಸಚಿವರ ಒತ್ತಡಕ್ಕೆ ಮಣಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಅನುಮತಿ ನೀಡಿದ್ದರು. ಅಲ್ಲದೇ ನಿಗಮಕ್ಕೆ 500 ಕೋಟಿ ರೂ. ಅನುದಾನವನ್ನೂ ಸರ್ಕಾರ ಬಿಡುಗಡೆ ಮಾಡಿತ್ತು.

ವೀರಶೈವ ಲಿಂಗಾಯತ ಪ್ರಾಧಿಕಾರ ರಚನೆಗೆ ಸಿದ್ದಗಂಗಾ ಶ್ರೀ ಅಸಮಾಧಾನ..!

ಇದರ ಬೆನ್ನಲ್ಲೇ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ನೇಮಕಾತಿ ಬಗ್ಗೆ ಭಾರೀ ಚರ್ಚೆ ನಡೆದಿತ್ತು. ಇದೀಗ ಬೆಂಗಳೂರಿನ ವಿಜಯನಗರ ನಿವಾಸಿ ಬಿ.ಎಸ್.ಪರಮಶಿವಯ್ಯ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿ ಸಿಎಂ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.