Asianet Suvarna News Asianet Suvarna News

ಲಾಕ್‌ಡೌನ್ ವಿಸ್ತರಣೆ ಬೆನ್ನಲ್ಲೇ ಮತ್ತೊಂದು ಹೆಜ್ಜೆ ಮುಂದಿಟ್ಟ ರಾಜ್ಯ ಸರ್ಕಾರ

ಎರಡನೇ ಹಂತದ ಲಾಕ್​ಡೌನ್ ಜಾರಿಯಾದ ಹಿನ್ನಲೆಯಲ್ಲಿ ಮಾರ್ಗಸೂಚನೆ ಪಾಲನೆ ಕುರಿತು ನಾಲ್ವರು ಹಿರಿಯ ಸಚಿವರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜವಾಬ್ದಾರಿ ಹಂಚಿಕೆ ಮಾಡಿದ್ದಾರೆ.
BSY assigns responsibilities of effective implementation lockdown to 4 ministers
Author
Bengaluru, First Published Apr 15, 2020, 10:23 PM IST
ಬೆಂಗಳೂರು, (ಏ.15): ರಾಜ್ಯದಲ್ಲಿ ಲಾಕ್‌ಡೌನ್‌ ಬಿಗಿಗೊಳಿಸುವ ಬಗ್ಗೆ  ಬುಧವಾರ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಇಂದು (ಬುಧವಾರ) ಸಿಎಂ ಬಿಎಸ್​ವೈ ಹಿರಿಯ ಸಚಿವರ ತುರ್ತು ಸಭೆ ನಡೆಸಿದರು. 

ಈಗಾಗಲೇ ಕೋವಿಡ್-19 ಟಾಸ್ಕ್ ಫೋರ್ಸ್ ರಚನೆ ಮಾಡಿದ್ದರೂ ಹೆಚ್ಚುವರಿಯಾಗಿ ಹೊಣೆಗಾರಿಕೆ ಹಂಚಿಕೆ ಮಾಡಿ ಪರಿಸ್ಥಿತಿ ನಿಯಂತ್ರಣಕ್ಕೆ ಮುಂದಾಗಿದ್ದಾರೆ.

ಕರ್ನಾಟಕದ ರೆಡ್, ಆರೆಂಜ್, ಗ್ರೀನ್‌ ಜಿಲ್ಲೆಗಳಾವುವು: ಪಟ್ಟಿ ರಿಲೀಸ್..!

ವಲಸೆ ಕಾರ್ಮಿಕರ ಸಮಸ್ಯೆ ಹಾಗೂ 19 ದಿನಗಳ ಲಾಕ್​ಡೌನ್ ಪಾಲನೆಗೆ ನೀಡಿರುವ ಮಾರ್ಗಸೂಚಿ ಅನುಷ್ಠಾನ ಕುರಿತು ಸಚಿವರೊಂದಿಗೆ ಸಿಎಂ ಮಹತ್ವದ ಸಮಾಲೋಚನೆ ನಡೆಸಿದರು. ಈ ವೇಳೆ ಮಾರ್ಗಸೂಚಿ ಪಾಲನೆ ಸಂಬಂಧ ನಾಲ್ವರು ಸಚಿವರಿಗೆ ಜವಾಬ್ದಾರಿ ನೀಡಿದರು

ಸುರೇಶ್ ಕುಮಾರ್‌ಗೆ ಕಾರ್ಮಿಕರ ಹೊಣೆ
BSY assigns responsibilities of effective implementation lockdown to 4 ministers

ಮುಂಬೈನಲ್ಲಿ ನಡೆಯುತ್ತಿರುವ ಕಾರ್ಮಿಕರ ವಿದ್ಯಮಾನ ರಾಜ್ಯದಲ್ಲಿ ಆಗದಂತೆ ಮುನ್ನೆಚ್ಚರಿಕಾ ಕ್ರಮದ ಕುರಿತು ನಿರ್ಧಾರ ಕೈಗೊಳ್ಳಲಾಯಿತು.  ಇದರ ಜವಾಬ್ದಾರಿಯನ್ನು ಪ್ರಾಥಮಿಕ ಹಾಗು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ನೀಡಲಾಯಿತು. ರಾಜ್ಯದಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಬರುವವರೆಗೂ ಕಾರ್ಮಿಕರು ವಲಸೆಗೆ ಮುಂದಾಗದ ರೀತಿ ನೋಡಿಕೊಳ್ಳುವ ಹೊಣೆಯನ್ನು ಸುರೇಶ್ ಕುಮಾರ್ ಹೆಗಲಿಗೆ ಹಾಕಿದರು. 

ಬಸವರಾಜ ಬೊಮ್ಮಾಯಿಗೆ ಕಾನೂನು ಸುವ್ಯವಸ್ಥೆ
BSY assigns responsibilities of effective implementation lockdown to 4 ministers

ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಕಾನೂನು ಸುವ್ಯವಸ್ಥೆ ಕುರಿತು ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು ಎನ್ನುವ ಸೂಚನೆಯೊಂದಿಗೆ ಕೋವಿಡ್-19 ಕಾನೂನು ಸುವ್ಯವಸ್ಥೆ ಹೊಣೆಗಾರಿಕೆ ನೀಡಲಾಗಿದೆ.

ಅಶ್ವಥ್ ನಾರಾಯಣ್‌ಗೆ ಕೃಷಿ ವಲಯ
BSY assigns responsibilities of effective implementation lockdown to 4 ministers

ಡಿಸಿಎಂ ಡಾ. ಅಶ್ವಥ್ ನಾರಾಯಣ್ ಅವರಿಗೆ ಕೃಷಿ ವಲಯದ ಜವಾಬ್ದಾರಿ ಹಂಚಿಕೆ ಮಾಡಿದ್ದು, ಕೋವಿಡ್-19 ಲಾಕ್ ಡೌನ್ ಮುಗಿಯುವವರೆಗೂ ಕೃಷಿ ಕ್ಷೇತ್ರದ ಸಮಸ್ಯೆಗಳನ್ನು ನಿಭಾಯಿಸುವ ಹೊಣೆಗಾರಿಕೆ ನೀಡಲಾಗಿದೆ.

ಅಶೋಕ್‌ಗೆ ಬೆಂಗಳೂರು ಉಸ್ತುವಾರಿ
BSY assigns responsibilities of effective implementation lockdown to 4 ministers

ಇನ್ನು ಕಂದಾಯ ಸಚಿವ ಆರ್.ಅಶೋಕ್ ಅವರಿಗೆ ಬೆಂಗಳೂರು ನಗರದ ಉಸ್ತುವಾರಿ ವಹಿಸಿದ್ದು, ಕೋವಿಡ್-19 ಮುಗಿಯುವವರೆಗೆ ನಗರದಲ್ಲಿ ಕೊರೋನಾ ಸಂಬಂಧಿತ ವಿಷಯಗಳ ಬಗ್ಗೆ ನೋಡಿಕೊಳ್ಳಲಿದ್ದಾರೆ.
Follow Us:
Download App:
  • android
  • ios