ಪ್ರಯಾಣಿಕರಿಗೆ ಬಿಗ್ ಶಾಕ್: 4 ತಿಂಗ್ಳು ಬಸ್ ರಸ್ತೆಗಿಳಿಯಲ್ಲ
ಲಾಕ್ಡೌನ್ನಿಂದ ಲಕ್ಷಾಂತರ ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇನ್ನು, ಅನೇಕರು ಬಸ್ ಇಲ್ಲದ ಕಾರಣ ಊರಿಗೆ ತೆರಳಲು ಆಗದೆ ಸಂಕಷ್ಟ ಎದುರಿಸುತ್ತಿದ್ದಾರೆ. ಇಂಥವರಿಗೆ ಇದೀಗ ಮತ್ತೆ ಬಿಗ್ ಶಾಕ್.
ಬೆಂಗಳೂರು, (ಮೇ.17): ಲಾಕ್ ಡೌನ್ ಜಾರಿಯಾದ ಬಳಿಕ ಬಸ್ ಸಂಚಾರ ಸ್ಥಗಿತಗೊಳಿಸಿರುವ ಖಾಸಗಿ ಬಸ್ ಮಾಲೀಕರು ಸದ್ಯಕ್ಕೆ ಬಸ್ ಸೇವೆಯನ್ನು ಆರಂಭಿಸದಿರಲು ತೀರ್ಮಾನ ಕೈಗೊಂಡಿದ್ದಾರೆ.
ಮುಂದಿನ ನಾಲ್ಕು ತಿಂಗಳು ಖಾಸಗಿ ಬಸ್ಗಳನ್ನು ರಸ್ತೆಗೆ ಇಳಿಸದಿರಲು ಖಾಸಗಿ ಬಸ್ಗಳ ಒಕ್ಕೂಟ ನಿರ್ಧರಿಸಿದೆ.
ಮೇ 18 ರಿಂದ ಬಿಎಂಟಿಸಿ ಸಂಚಾರ ಸಾಧ್ಯತೆ; ಮೆಡಿಕಲ್ ಸರ್ಟಿಫಿಕೇಟ್ಗಾಗಿ ಮುಗಿಬಿದ್ದ ಸಿಬ್ಬಂದಿ!
ಲಾಕ್ಡೌನ್ನಿಂದಾಗಿ ಕಳೆದ ಎರಡು ತಿಂಗಳಿಂದ ಬಸ್ಗಳು ರಸ್ತೆಗೆ ಇಳಿದಿಲ್ಲ. ಇದು ಬಸ್ ಮಾಲೀಕರಿಗೆ ಭಾರೀ ಹೊರೆ ಆಗಿದೆ. ಹೀಗಾಗಿ ತೆರಿಗೆ ವಿನಾಯಿತಿ ನೀಡುವಂತೆ ಖಾಸಗಿ ಬಸ್ ಒಕ್ಕೂಟ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ಇದಕ್ಕೆ ಸರ್ಕಾರ ಸ್ಪಂದಿಸದಿದ್ದರೆ ಸೆಪ್ಟೆಂಬರ್ ವರೆಗೆ ಬಸ್ಗಳನ್ನು ರಸ್ತೆಗೆ ಇಳಿಸುವುದಿಲ್ಲ ಎನ್ನುವ ಎಚ್ಚರಿಕೆ ನೀಡಿದೆ.
ಇದರಿಂದ ಪ್ರಯಾಣಿಕರಿಗೆ ಭಾರೀ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಈ ಬಗ್ಗೆ ರಾಜ್ಯ ಸರ್ಕಾರ ಖಾಸಗಿ ಬಸ್ ಒಕ್ಕೂಟದ ಜೊತೆ ಸಂಧಾನ ಮಾತುಕತೆ ನಡೆಸಿ ಅದು ಯಶಸ್ವಿಯಾದರೆ, ಬಸ್ ಸಂಚಾರ ಮತ್ತೆ ಆರಂಭವಾಗುವ ಸಾಧ್ಯತೆ ಇದೆ.