Asianet Suvarna News Asianet Suvarna News

ಪ್ರಯಾಣಿಕರಿಗೆ ಬಿಗ್ ಶಾಕ್: 4 ತಿಂಗ್ಳು ಬಸ್ ರಸ್ತೆಗಿಳಿಯಲ್ಲ

ಲಾಕ್​ಡೌನ್​ನಿಂದ ಲಕ್ಷಾಂತರ ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇನ್ನು, ಅನೇಕರು ಬಸ್​ ಇಲ್ಲದ ಕಾರಣ ಊರಿಗೆ ತೆರಳಲು ಆಗದೆ ಸಂಕಷ್ಟ ಎದುರಿಸುತ್ತಿದ್ದಾರೆ. ಇಂಥವರಿಗೆ ಇದೀಗ ಮತ್ತೆ ಬಿಗ್​ ಶಾಕ್​.

buses Not run until September says Karnataka private bus union
Author
Bengaluru, First Published May 17, 2020, 2:29 PM IST

ಬೆಂಗಳೂರು, (ಮೇ.17): ಲಾಕ್ ಡೌನ್ ಜಾರಿಯಾದ ಬಳಿಕ ಬಸ್ ಸಂಚಾರ ಸ್ಥಗಿತಗೊಳಿಸಿರುವ ಖಾಸಗಿ ಬಸ್ ಮಾಲೀಕರು ಸದ್ಯಕ್ಕೆ ಬಸ್ ಸೇವೆಯನ್ನು ಆರಂಭಿಸದಿರಲು ತೀರ್ಮಾನ ಕೈಗೊಂಡಿದ್ದಾರೆ.

ಮುಂದಿನ ನಾಲ್ಕು ತಿಂಗಳು  ಖಾಸಗಿ ಬಸ್​ಗಳನ್ನು ರಸ್ತೆಗೆ ಇಳಿಸದಿರಲು ಖಾಸಗಿ ಬಸ್​ಗಳ ಒಕ್ಕೂಟ ನಿರ್ಧರಿಸಿದೆ.

ಮೇ 18 ರಿಂದ ಬಿಎಂಟಿಸಿ ಸಂಚಾರ ಸಾಧ್ಯತೆ; ಮೆಡಿಕಲ್ ಸರ್ಟಿಫಿಕೇಟ್‌ಗಾಗಿ ಮುಗಿಬಿದ್ದ ಸಿಬ್ಬಂದಿ!

ಲಾಕ್​ಡೌನ್​ನಿಂದಾಗಿ ಕಳೆದ ಎರಡು ತಿಂಗಳಿಂದ ಬಸ್​ಗಳು ರಸ್ತೆಗೆ ಇಳಿದಿಲ್ಲ. ಇದು ಬಸ್​ ಮಾಲೀಕರಿಗೆ ಭಾರೀ ಹೊರೆ ಆಗಿದೆ. ಹೀಗಾಗಿ ತೆರಿಗೆ ವಿನಾಯಿತಿ ನೀಡುವಂತೆ ಖಾಸಗಿ ಬಸ್​ ಒಕ್ಕೂಟ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ಇದಕ್ಕೆ ಸರ್ಕಾರ ಸ್ಪಂದಿಸದಿದ್ದರೆ ಸೆಪ್ಟೆಂಬರ್​ ವರೆಗೆ ಬಸ್​ಗಳನ್ನು ರಸ್ತೆಗೆ ಇಳಿಸುವುದಿಲ್ಲ ಎನ್ನುವ ಎಚ್ಚರಿಕೆ ನೀಡಿದೆ.

ಇದರಿಂದ ಪ್ರಯಾಣಿಕರಿಗೆ ಭಾರೀ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಈ ಬಗ್ಗೆ ರಾಜ್ಯ ಸರ್ಕಾರ ಖಾಸಗಿ ಬಸ್​ ಒಕ್ಕೂಟದ ಜೊತೆ ಸಂಧಾನ ಮಾತುಕತೆ ನಡೆಸಿ ಅದು ಯಶಸ್ವಿಯಾದರೆ, ಬಸ್​ ಸಂಚಾರ ಮತ್ತೆ ಆರಂಭವಾಗುವ ಸಾಧ್ಯತೆ ಇದೆ.

Follow Us:
Download App:
  • android
  • ios