ರೈತರ ಕರಾಳ ದಿನವಾಗಿ ಆಚರಣೆ ಮಾಡಲು ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಕರೆ ನೀಡಿದ್ದಾರೆ. ಯಾವಾಗ ಎನ್ನುವ ಮಾಹಿತಿ ಈ ಕೆಳಗಿನಂತಿದೆ.

ಬೆಂಗಳೂರು, (ಜ.29): ಒಂದೆಡೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಆಯ್ದೆ ವಿರುದ್ಧ ದೆಹಲಿಯಲ್ಲಿ ರೈತರ ಪ್ರತಿಭಟನೆ ತೀವ್ರ ಸ್ವರೂಪಪಡೆದುಕೊಂಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜನವರಿ 26 ಗಣರಾಜ್ಯೋತ್ಸವದಂದು ರೈತರು ಟ್ರ್ಯಾಕ್ಟರ್ ರ್ಯಾಲಿ ಮಾಡಿದರು. ಇತ್ತ ಇದಕ್ಕೆ ರಾಜ್ಯದಲ್ಲೂ ಸಹ ಟ್ರ್ಯಾಕ್ಟರ್ ಮೆರವಣಿಗೆ ನಡೆಸಲಾಯ್ತು.

ಖತರ್ನಾಕ್ ಖಲಿಸ್ತಾನ್ ರಕ್ತಚರಿತ್ರೆ: ರೈತ ಹೋರಾಟದಲ್ಲಿ ಬೇಳೆ ಬೇಯಿಸಿಕೊಂಡವರ ಕರಾಳ ಕಥೆ

ಇದೀಗ ನಾಳೆ (ಜನವರಿ 30) ಮಹಾತ್ಮ ಗಾಂಧಿಜೀ ಹುತಾತ್ಮರಾದ ದಿನ. ಈ ಹಿನ್ನೆಲೆ ರೈತರ ಮೇಲೆ ನಡೆದಿರುವ ಹಲ್ಲೆ, ದೌರ್ಜನ್ಯವನ್ನು ಖಂಡಿಸಿ ರೈತರ ಕರಾಳ ದಿನವಾಗಿ ಆಚರಣೆ ಮಾಡಲು ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಕರೆ ಕೊಟ್ಟಿದ್ದಾರೆ.

ರಾಷ್ಟ್ರಪಿತ ಮಹಾತ್ಮ ಗಾಂಧಿಗೆ ನಮನ ಸಲ್ಲಿಸಿ ನಾಳೆ (ಶನಿವಾರ) ಬೆಳಗ್ಗೆ 11-30ಕ್ಕೆ ಫ್ರೀಡಂ ಪಾರ್ಕ್​ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ರೈತರ ಕರಾಳ ದಿನವಾಗಿ ಆಚರಣೆ ಮಾಡಲಾಗುತ್ತದೆ. ರಾಜ್ಯದ ಎಲ್ಲಾ ಭಾಗಗಳಲ್ಲೂ ರೈತರು ಎಡಗೈಗೆ ಕಪ್ಪು ಬಟ್ಟೆಯ ಪಟ್ಟಿ ಧರಿಸಿ ಕರಾಳ ದಿನವಾಗಿ ಆಚರಣೆ ಮಾಡಿ ಎಂದು ತಿಳಿಸಿದರು.