ಈ ಬಾರಿಯ ಗಣರಾಜ್ಯೋತ್ಸದ  ಪರೇಡ್​ನಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಕೊನೆಗೂ ಅನುಮತಿ ಸಿಕ್ಕಿದೆ. ಕಳೆದ 13 ವರ್ಷಗಳಿಂದ ಗಣರಾಜ್ಯೋತ್ಸವದ ಪರೇಡ್​ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ ಪ್ರದರ್ಶನವಾಗುತ್ತಿತ್ತು. ಮುಖ್ಯಮಂತ್ರಿ ಬೊಮ್ಮಾಯಿ ಅವರ ಅನುಮತಿ ಮೇರೆಗೆ ಮತ್ತೆ ಅವಕಾಶ ನೀಡಲಾಗಿದೆ.

ಬೆಂಗಳೂರು (ಜ.12): ಈ ಬಾರಿಯ ಗಣರಾಜ್ಯೋತ್ಸದ ಪರೇಡ್​ನಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಕೊನೆಗೂ ಅನುಮತಿ ಸಿಕ್ಕಿದೆ. ಕಳೆದ 13 ವರ್ಷಗಳಿಂದ ಗಣರಾಜ್ಯೋತ್ಸವದ ಪರೇಡ್​ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ ಪ್ರದರ್ಶನವಾಗುತ್ತಿತ್ತು. ಆದರೆ ಈ ಬಾರಿ ಟ್ಯಾಬ್ಲೋ ಗೆ ಅವಕಾಶ ನಿರಾಕರಿಸಲಾಗಿತ್ತು. ಕೇಂದ್ರ ಸರಕಾರದಿಂದ ನಿರಾಕರಣೆಗೊಂಡಿದ್ದು, ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರದ ಬಳಿ ಮನವಿ ಮಾಡೋದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರಾಜ್ಯದ ಜನತೆಗೆ ಭರವಸೆ ನೀಡಿದ್ದರು. ಈ ಬಾರಿಯ ಗಣರಾಜೋತ್ಸವ ಪೕರೆಡ್‌ನಲ್ಲಿ ರಾಜ್ಯದ ಟ್ಯಾಬ್ಲೋಗೆ ಅವಕಾಶ ಸಿಗಲಿದೆ. ಈ ಹಿಂದೆ ರಾಜ್ಯದ ಸ್ತಬ್ಧಚಿತ್ರಕ್ಕೆ ಪ್ರಶಸ್ತಿ ಬಂದಿತ್ತು. ಪ್ರತಿ ವರ್ಷ ಬೇರೆ ಬೇರೆ ರಾಜ್ಯಗಳಿಗೆ ಅವಕಾಶ ಕೊಡಲಾಗುತ್ತದೆ. ಈ ವರ್ಷವೂ ಭಾಗವಹಿಸಲು ಅವಕಾಶ ಕೊಡಿ ಎಂದು ಕೇಳುತ್ತೇವೆ. ಖಂಡಿತ ರಾಜ್ಯ ರಾಜ್ಯದ ಸ್ತಬ್ಧಚಿತ್ರಕ್ಕೆ ಅವಕಾಶ ಸಿಗಲಿದೆ ಎಂದಿದ್ದರು. ಕೊನೆಗೂ ರಾಜ್ಯದ ಮನವಿಗೆ ಸ್ಪಂದಿಸಿ ಅವಕಾಶ ನೀಡಲಾಗಿದ್ದು, ಇದರ ಬೆನ್ನಲ್ಲೇ ಈಗ ಮತ್ತೆ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

2023ರ ಸ್ತಬ್ಥಚಿತ್ರದಲ್ಲಿ ಕರ್ನಾಟಕವು ಮಂಡಿಸಿದ್ದ ನಾರಿಶಕ್ತಿ ಸ್ತಬ್ಥಚಿತ್ರದ ವಿಷಯದ ವಿನ್ಯಾಸದ ಮಾದರಿಯನ್ನು ಕೂಡ ನೀಡಲಾಗಿತ್ತು. ನಾರಿ ಶಕ್ತಿ ಥೀಮ್ ಮೇಲೆಯೇ ಕೇರಳದವರೂ ಕೂಡ ಸ್ತಬ್ಧಚಿತ್ರ ಮಾಡಿದ್ದರು. ಆದರೆ, ಕರ್ನಾಟಕದ್ದು ರಿಜೆಕ್ಟ್ ಆಗಿತ್ತು. ಈಗ ಅಕ್ಸೆಪ್ಟ್ ಆಗಿದೆ.

ಕರ್ನಾಟಕ ಪ್ರತಿನಿಧಿಸಿದ್ದ 2023ರ ಸ್ತಬ್ಥಚಿತ್ರದಲ್ಲಿ ನಾರಿಶಕ್ತಿ ವಿಷಯವಸ್ತುವಾಗಿತ್ತು. ಆರಂಭದ ಕೆಲವು ಸುತ್ತಿನಲ್ಲಿ ಆಯ್ಕೆಯಾಗಿತ್ತು. ಸ್ತಬ್ಧಚಿತ್ರದ ವಿನ್ಯಾಸ ಮತ್ತು ಸಂಗೀತಕ್ಕೆ ತಜ್ಞರ ಸಮಿತಿ ಒಪ್ಪಿಗೆ ಸಹ ನೀಡಿತ್ತು. ಆದರೆ ಕೊನೆ ಸುತ್ತಿನಲ್ಲಿ ಕರ್ನಾಟಕದ ಸ್ಥಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಲಾಗಿ. ಕಳೆದ ಬಾರಿ ‘ಸಾಂಸ್ಕೃತಿಕ ತೊಟ್ಟಿಲು’ ವಿಷಯವನ್ನು ಮುಖ್ಯವಾಗಿಟ್ಟುಕೊಂಡು ಕರ್ನಾಟಕ ಪ್ರದರ್ಶಿಸಿದ್ದ ಟ್ಯಾಬ್ಲೋ(ಸ್ತಬ್ದ ಚಿತ್ರ)ಗೆ ದ್ವಿತೀಯ ಪ್ರಶಸ್ತಿ ಸಿಕ್ಕಿತ್ತು.

ಅಂಕೋಲ ಉತ್ಸವದಲ್ಲಿ 'ಪಂಜುರ್ಲಿ' ಅಬ್ಬರ: 'ಕಾಂತಾರ' ನೋಡಿ ಮೆಚ್ಚಿದ ಸುನಿಲ್ ಶೆಟ್ಟಿ

ಈ ಬಾರಿ ಟ್ಯಾಬ್ಲೋಗಾಗಿ ಸಿರಿಧಾನ್ಯ, ಹೂ ಕೃಷಿ, ರೇಷ್ಮೆ ಹಾಗೂ ಪದ್ಮ ಪ್ರಶಸ್ತಿ ಪುರಸ್ಕೃತರ ನಾರಿಶಕ್ತಿ ಥೀಮ್ ಗಳನ್ನು ರಕ್ಷಣಾ ಇಲಾಖೆ ನಡೆಸುವ ಟ್ಯಾಬ್ಲೋ ಆಯ್ಕೆ ಪ್ರಕ್ರಿಯೆ ಸಭೆಯ ಮುಂದೆ ಕರ್ನಾಟಕ ವಾರ್ತಾ ಇಲಾಖೆ ಅಧಿಕಾರಿಗಳ ಇರಿಸಿದ್ದರು. ಅಂತಿಮವಾಗಿ ಪದ್ಮ ಪುರಸ್ಕೃತ ಸಾಲುಮರದ ತಿಮ್ಮಕ್ಕ, ಸೂಲಗಿತ್ತಿ ನರಸಮ್ಮ ಹಾಗೂ ತುಳಸೀಗೌಡ ಅವರ ನಾರಿ ಶಕ್ತಿ ಟ್ಯಾಬ್ಲೋ ಆಯ್ಕೆ ಸಮಿತಿಯ ಬಹುಮೆಚ್ಚುಗೆಗೂ ಪಾತ್ರವಾಗಿತ್ತು. ಆದರೆ ಆಯ್ಕೆ ಸಮಿತಿಯ ಅಂತಿಮ ಹಂತದಲ್ಲಿ ಕರ್ನಾಟಕ ಟ್ಯಾಬ್ಲೋ ದಿಢೀರ್‌ ತಿರಸ್ಕೃತವಾಗಿತ್ತು.

ಗಣರಾಜ್ಯೋತ್ಸವ ಪರೇಡ್‍ನಲ್ಲಿ ಇರಲ್ಲ ಕರ್ನಾಟಕದ ಸ್ತಬ್ಧಚಿತ್ರ ಪ್ರದರ್ಶನ

16 ರಾಜ್ಯಗಳ ಟ್ಯಾಬ್ಲೋಗೆ ಅವಕಾಶ:  ಕಳೆದ ಬಾರಿ ಟ್ಯಾಬ್ಲೋಗಳ ಆಯ್ಕೆ ಮಾಡಿದ್ದ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಕೇರಳ, ಪಶ್ಚಿಮ ಬಂಗಾಳಕ್ಕೆ ಈ ಬಾರಿ ಅವಕಾಶ ನೀಡಲಾಗಿದೆ. ಮಿಕ್ಕಂತೆ ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಅಸ್ಸಾಂ, ಗುಜರಾತ್‌, ಹರಿಯಾಣ, ಜಾರ್ಖಂಡ್‌, ಮಹಾರಾಷ್ಟ್ರ, ತಮಿಳುನಾಡು, ತ್ರಿಪುರಾ, ಉತ್ತರಾಖಂಡ, ದಾದರ್‌ ಹವೇಲಿ-ದಮನ್‌, ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಕ್‌ ಉಳಿದ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಟ್ಯಾಬ್ಲೋಗಳಿಗೆ ಅವಕಾಶ ನೀಡಲಾಗಿದೆ.