ಚಾಮರಾಜನಗರ ತಾಲೂಕಿನ ಹೊಂಗನೂರು ಗ್ರಾಮದಲ್ಲಿ ವಾಟರ್‌ಮನ್ ಆಗಿದ್ದ ಚಿಕ್ಕೊಸನಾಯಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 27 ತಿಂಗಳ ಸಂಬಳ ನೀಡದೆ ಕಿರುಕುಳ ನೀಡಿದ್ದೇ ಸಾವಿಗೆ ಕಾರಣವೆಂದು ಡೆತ್‌ನೋಟ್‌ನಲ್ಲಿ ಆರೋಪಿಸಿದ್ದು, ಈ ಹಿನ್ನೆಲೆಯಲ್ಲಿ ಕರ್ತವ್ಯಲೋಪದ ಮೇಲೆ ಪಿಡಿಒ ರಾಮೇಗೌಡರನ್ನು ಅಮಾನತು ಮಾಡಲಾಗಿದೆ.

ಚಾಮರಾಜನಗರ (ಅ.17): ಚಾಮರಾಜನಗರ ತಾಲೂಕಿನ ಹೊಂಗನೂರು ಗ್ರಾಮದ ಗ್ರಾಮ ಪಂಚಾಯಿತಿ ಆವರಣದಲ್ಲಿ ವಾಟರ್‌ಮೆನ್ ಆತ್ಮ೧ಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಕರ್ತವ್ಯಲೋಪ ಆರೋಪ ಹಿನ್ನೆಲೆ ಪಿಡಿಒ ರಾಮೇಗೌಡರನ್ನ ಅಮಾನತು ಮಾಡಿ ಸಿಇಒ ಮೋನಾ ರೋತ್ ಆದೇಶ ಹೊರಡಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಚಾಮರಾಜನಗರ ವಾಟರ್‌ಮನ್ ಸೂಸೈಡ್ ಪ್ರಕರಣ:

ವಾಟರ್‌ಮನ್ ಕೆಲಸ ಮಾಡುತ್ತಿದ್ದ ಚಿಕ್ಕೊಸನಾಯಕ ಆತ್ಮ೧ಹತ್ಯೆ ಮಾಡಿಕೊಂಡಿದ್ದರು. ಆತ್ಮ೧ಹತ್ಯೆಗೆ ಮುನ್ನ ಡೆತ್‌ನೋಟ್ ಬರೆದಿದ್ದು, ಕಳೆದ 27 ತಿಂಗಳಿಂದ ಸಂಬಳ ಕೊಡದೇ ಕಿರುಕುಳ ನೀಡಿರುವ ಬಗ್ಗೆ ಉಲ್ಲೇಖಿಸಿದ್ದರು. ಈ ಆರೋಪಗಳ ಹಿನ್ನೆಲೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಆಡಳಿತವು ತ್ವರಿತಗತಿಯಲ್ಲಿ ಕ್ರಮ ಕೈಗೊಂಡಿದ್ದು, ಸಿಇಒ ಮೋನಾ ರೋತ್ ಅವರು ಆತ್ಮ೧ಹತ್ಯೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಪಿಡಿಒ ರಾಮೇಗೌಡರನ್ನು ಸಸ್ಪೆಂಡ್ ಮಾಡಿ, ಅಮಾನತುಪಡಿಸುವ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ರಾಯಚೂರು: ಗಣವೇಷ ಹಾಕಿದ ಪಿಡಿಓಗೆ ಗೇಟ್ ಪಾಸ್! ಪಿಡಿಓ ಪ್ರವೀಣ್ ಕುಮಾರ್ ಅಮಾನತು!

ಪೊಲೀಸ್ ಈಗ ಡೆತ್ ನೋಟ್ ಮತ್ತು ಸಾಕ್ಷ್ಯಗಳನ್ನು ತನಿಖೆಗೆ ಮುಂದಾಗಿದ್ದು, ಕಿರುಕುಳದ ಆರೋಪಗಳು ನಿಜವಾಗಿದ್ದರೆ ಹೆಚ್ಚಿನ ಕ್ರಮಗಳು ಎದುರಾಗಬಹುದು. ಈ ಘಟನೆಯು ಗ್ರಾಮೀಣ ಆಡಳಿತದಲ್ಲಿನ ಅಧಿಕಾರಿಗಳ ಕರ್ತವ್ಯಲೋಪ, ಕೆಳಹಂತದ ಸಿಬ್ಬಂದಿ ಮೇಲಿನ ಕಿರುಕುಳವನ್ನ ಮತ್ತೊಮ್ಮೆ ಬಹಿರಂಗಪಡಿಸಿದೆ.