ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಗೆದ್ದು ನೂತನ ಸಂಸದರಾಗಿ ಆಯ್ಕೆಯಾಗಿರುವ ಡಾ.ಕೆ ಸುಧಾಕರ್‌ ಅವರ ಅಭಿನಂದನಾ ಕಾರ್ಯಕ್ರಮದಲ್ಲಿ ಎಣ್ಣೆ ಬಾಡೂಟಕ್ಕೆ ಜನರು ಮುಗಿಬಿದ್ದ ಘಟನೆ ನಡೆಯಿತು.

ನೆಲಮಂಗಲ(ಜು.7): ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಗೆದ್ದು ನೂತನ ಸಂಸದರಾಗಿ ಆಯ್ಕೆಯಾಗಿರುವ ಡಾ.ಕೆ ಸುಧಾಕರ್‌ ಅವರ ಅಭಿನಂದನಾ ಕಾರ್ಯಕ್ರಮದಲ್ಲಿ ಎಣ್ಣೆ ಬಾಡೂಟಕ್ಕೆ ಜನರು ಮುಗಿಬಿದ್ದ ಘಟನೆ ನಡೆಯಿತು.

Add Asianetnews Kannada as a Preferred SourcegooglePreferred

ನೆಲಮಂಗಲದ ಹೊರವಲಯದಲ್ಲಿ ಆಯೋಜನೆಗೊಂಡಿದ್ದ ಅಭಿನಂದನಾ ಸಮಾವೇಶ. ಸಮಾವೇಶಕ್ಕೆ ಬಂದಿದ್ದ ಕಾರ್ಯಕರ್ತರು, ಬೆಂಬಲಿಗರಿಗೆ ಭರ್ಜರಿ ಬಾಡೂಟ ಮಾಡಿಸಲಾಗಿತ್ತು. ನೆಲಮಂಗಲ ಅಲ್ಲದೇ ಚಿಕ್ಕಬಳ್ಳಾಪುರ ಬೇರೆ ಬೇರೆ ಕಡೆಯಿಂದ ಬೈಕ್‌ಗಳಲ್ಲಿ ಸಮಾವೇಶಕ್ಕೆ ಬಂದಿದ್ದ ಸಾವಿರಾು ಬೆಂಬಲಿಗರು. ಕಾರ್ಯಕ್ರಮ ನಡೆಯುವಾಗಲೇ ಬಾಡೂಟಕ್ಕೆ ಮುಗಿಬಿದ್ದ ಜನರು. ಬಾಡೂಟಕ್ಕೆ ನೂಕುನುಗ್ಗಲು. ಕೆಲವು ಎಣ್ಣೆಗೂ ಮುಗಿಬಿದ್ದರು. ಈ ವೇಳೆ ನೂಕಾಟ ತಳ್ಳಾಟ ನಡೆಯಿತು. ಜನರನ್ನ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. 

ಸರ್ಕಾರದಿಂದ ಹಾಲು ಖರೀದಿ ದರ ಕಡಿತ: ಸಂಸದ ಸುಧಾಕರ್‌ ವಿರೋಧ