ಚಿಕ್ಕಮಗಳೂರಿನಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಧರ್ಮಸ್ಥಳ ಬುರುಡೆ ಪ್ರಕರಣ ಖಂಡಿಸಿ ನಕಲಿ ಬುರುಡೆ ಪ್ರದರ್ಶಿಸಲಾಯಿತು. ಷಡ್ಯಂತ್ರದ ವಿರುದ್ಧ ಘೋಷಣೆ ಕೂಗಿ, ಧರ್ಮಸ್ಥಳದ ಪವಿತ್ರತೆ ಕಾಪಾಡುವ ಸಂದೇಶ ಸಾರಿದರು.

ಚಿಕ್ಕಮಗಳೂರು(ಸೆ.6): ಚಿಕ್ಕಮಗಳೂರು ನಗರದಲ್ಲಿ ಹಿಂದೂ ಮಹಾಸಭಾದ ಗಣಪತಿ ವಿಸರ್ಜನಾ ಮೆರವಣಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಮಹಾದ್ವಾರದಿಂದ ಆರಂಭವಾಗಿ ಭವ್ಯವಾಗಿ ನಡೆಯಿತು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಧರ್ಮಸ್ಥಳ ಬುರುಡೆ ಪ್ರಕರಣದ ರೂವಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಲು ಈ ಮೆರವಣಿಗೆಯಲ್ಲಿ ನಕಲಿ ಬುರುಡೆ-ಅಸ್ಥಿಪಂಜರದ ಮಾದರಿಯ ಗೊಂಬೆಯನ್ನು ಪ್ರದರ್ಶಿಸಲಾಯಿತು. ಈ ಗೊಂಬೆಯ ಮೂಲಕ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ರೂಪಿಸಿದವರಿಗೆ ಹಿಂದೂ ಮಹಾಸಭಾದ ಕಾರ್ಯಕರ್ತರು ಟಾಂಗ್ ನೀಡಿದರು.

ಮೆರವಣಿಗೆಯು ಧರ್ಮಸ್ಥಳದ ಪವಿತ್ರತೆಯನ್ನು ಕಾಪಾಡುವ ಸಂದೇಶವನ್ನು ಸಾರುತ್ತಾ, ಷಡ್ಯಂತ್ರಕಾರರ ವಿರುದ್ಧ ಘೋಷಣೆಗಳೊಂದಿಗೆ ಮುನ್ನಡೆಯಿತು. ಹಿಂದೂ ಮಹಾಸಭಾದ ಕಾರ್ಯಕರ್ತರು ಈ ಸಂದರ್ಭದಲ್ಲಿ ಧರ್ಮಸ್ಥಳದ ಗೌರವವನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ತಮ್ಮ ಬದ್ಧತೆಯನ್ನು ತೋರಿಸಿದರು.

ಬುರುಡೆ ಪ್ರಕರಣವನ್ನು ದುರುದ್ದೇಶದಿಂದ ಎಳೆದುತಂದಿದ್ದಾರೆ. ಈ ಪ್ರಕರಣದ ಹಿಂದಿನ ಸತ್ಯ ಸದ್ಯದಲ್ಲೇ ಬಯಲಾಗಲಿದೆ ಎಂದ ಕಾರ್ಯಕರ್ತರು. ಆ ನಿಟ್ಟಿನಲ್ಲಿ ಜನರಿಗೆ ತಿಳಿಸುವ ಪ್ರಯತ್ನ ನಡೆಯುತ್ತದೆ ಎಂದರು. ಮೆರವಣಿಗೆಯಲ್ಲಿ ನಕಲಿ ಬುರುಡೆ, ಅಸ್ಥಿಪಂಜರ ಗಮನ ಸೆಳೆಯಿತು. ನಗರದ ಪ್ರಮುಖ ಬೀದಿಗಳಲ್ಲಿ ಸಾಗಿದ ಈ ಮೆರವಣಿಗೆಯಲ್ಲಿ ಗಣಪತಿಯ ಭವ್ಯ ವಿಗ್ರಹದ ಜೊತೆಗೆ, ಧರ್ಮಸ್ಥಳದ ವಿರುದ್ಧದ ಷಡ್ಯಂತ್ರವನ್ನು ಖಂಡಿಸುವ ಘೋಷಣೆಗಳು ಮೊಳಗಿದವು. ಈ ಕಾರ್ಯಕ್ರಮವು ಜನರಲ್ಲಿ ತೀವ್ರ ಕುತೂಹಲವನ್ನು ಮೂಡಿಸಿದ್ದು, ಧರ್ಮಸ್ಥಳದ ಗೌರವವನ್ನು ಕಾಪಾಡುವ ನಿಟ್ಟಿನಲ್ಲಿ ಹಿಂದೂ ಮಹಾಸಭಾದ ಕಾರ್ಯಕರ್ತರು ಒಟ್ಟಾಗಿ ಧ್ವನಿ ಎತ್ತಿದ್ದಾರೆ.