ಸ್ಥಳೀಯ ಮಾರುಕಟ್ಟೆಯಲ್ಲಿ ಮೆಣಸಿನಕಾಯಿ ದರದಲ್ಲಿ ದಿಢೀರ್‌ ಕುಸಿತಗೊಂಡಿದೆ ಎಂದು ಆರೋಪಿಸಿ ರೈತರು ಕೆಲಕಾಲ ಪ್ರತಿಭಟನೆ ನಡೆಸಿದ್ದಲ್ಲದೆ, ಎಪಿಎಂಸಿ ಕಚೇರಿಗೆ ನುಗ್ಗಿ ದಾಂದಲೆ ನಡೆಸಿದ 

ಬ್ಯಾಡಗಿ : ಸ್ಥಳೀಯ ಮಾರುಕಟ್ಟೆಯಲ್ಲಿ ಮೆಣಸಿನಕಾಯಿ ದರದಲ್ಲಿ ದಿಢೀರ್‌ ಕುಸಿತಗೊಂಡಿದೆ ಎಂದು ಆರೋಪಿಸಿ ರೈತರು ಕೆಲಕಾಲ ಪ್ರತಿಭಟನೆ ನಡೆಸಿದ್ದಲ್ಲದೆ, ಎಪಿಎಂಸಿ ಕಚೇರಿಗೆ ನುಗ್ಗಿ ದಾಂದಲೆ ನಡೆಸಿದ ಘಟನೆ ಸೋಮವಾರ ರಾತ್ರಿ 8 ಗಂಟೆ ಸುಮಾರಿಗೆ ನಡೆಯಿತು. ಇಲ್ಲಿನ ಎಪಿಎಂಸಿ ಮಾರುಕಟ್ಟೆಗೆ 2.55 ಲಕ್ಷ ಮೂಟೆ ಮೆಣಸಿನ ಕಾಯಿ ಆವಕವಾದ ಹಿನ್ನೆಲೆಯಲ್ಲಿ ದರ ಕುಸಿತವಾಗಿತ್ತು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಳೆದ ಗುರುವಾರವಷ್ಟೇ 8ರಿಂದ 11 ಸಾವಿರದ ವರೆಗೆ ಮಾರಾಟವಾಗಿದ್ದ ಕಡ್ಡಿ ತಳಿ ಮೆಣಸಿನಕಾಯಿ, ಸೋಮವಾರ ಕೇವಲ . 6ರಿಂದ . 9 ಸಾವಿರಕ್ಕೆ ಮಾರಾಟವಾಗಿದ್ದು, ಪ್ರತಿ ಕ್ವಿಂಟಲ್‌ಗೆ ಸುಮಾರು . 2 ಸಾವಿರಗಳಷ್ಟುಕಡಿಮೆಯಾಗಿದೆ ಎಂಬುದು ರೈತರ ಆರೋಪವಾಗಿತ್ತು. ಎಪಿಎಂಸಿ ಕಚೇರಿ ನುಗ್ಗಿದ ಸಾವಿರಾರು ರೈತರು, ವರ್ತಕರು ಸೇರಿ ಎಪಿಎಂಸಿ ಸಿಬ್ಬಂದಿಯ ವಿರುದ್ಧ ಘೋಷಣೆಗಳನ್ನು ಕೂಗಿದರು.

ವ್ಯಾಪಾರಸ್ಥರು ಎಲ್ಲರೂ ಮಾತಾಡಿಕೊಂಡು ಉದ್ದೇಶಪೂರ್ವಕವಾಗಿ ದರ ಕಡಿತಗೊಳಿಸಿದ್ದಾರೆ ಎಂದು ಈ ವೇಳೆ ರೈತರು ಆರೋಪಿಸಿದರು.