ಬಿ.ಎಸ್‌.ಯಡಿಯೂರಪ್ಪ ಅವರ ಅವಧಿಯ 19 ಅಧಿಕಾರಿಗಳಿಗೆ ಗೇಟ್ ಪಾಸ್ ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಗೇಟ್ ಪಾಸ್ ಕಾರ್ಯಮುಕ್ತಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ

ಬೆಂಗಳೂರು (ಆ.02): ಬಿ.ಎಸ್‌.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ನಿಯೋಜನೆ ಮತ್ತು ಗುತ್ತಿಗೆ ಆಧಾರದಲ್ಲಿ ಮುಖ್ಯಮಂತ್ರಿ ಸಚಿವಾಲಯದಲ್ಲಿ ಕರ್ತವ್ಯದಲ್ಲಿದ್ದ 19 ಅಧಿಕಾರಿಗಳನ್ನು ಸೋಮವಾರದಿಂದ ಜಾರಿಗೆ ಬರುವಂತೆ ಕಾರ್ಯಮುಕ್ತಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.

Add Asianetnews Kannada as a Preferred SourcegooglePreferred

ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವುದರಿಂದ ಅವರ ಸಚಿವಾಲಯದ ಹಿಂದಿನ ಅಧಿಕಾರಿಗಳನ್ನು ಸೇವೆಯಿಂದ ಬಿಡುಗಡೆಗೊಳಿಸಲಾಗಿದೆ. 

ಕರ್ನಾಟಕ ಸಂಪುಟ ವಿಸ್ತರಣೆ : 3 ಹಳಬ ಔಟ್, 6 ಹೊಸಬರು ಇನ್

ಸಿಎಂ ಸಚಿವಾಲಯಕ್ಕೆ ಹೊಸದಾಗಿ ಅಧಿಕಾರಿಗಳನ್ನು ಆಯ್ಕೆ ಮಾಡಿಕೊಳ್ಳಲು ಬೊಮ್ಮಾಯಿ ಅವರಿಗೆ ಇದರಿಂದ ಅನುಕೂಲವಾಗಲಿದೆ.

ಇನ್ನು ಇದೇ ವೇಳೆ ರಾಜ್ಯದಲ್ಲಿ ಸಂಪುಟ ವಿಸ್ತರಣೆ ಚರ್ಚೆಯು ಜೋರಾಗಿದೆ. ರಾಷ್ಟ್ರೀಯ ನಾಯಕರನ್ನು ಭೇಟಿಯಾಗಿ ಸಿಎಂ ಈ ಬಗ್ಗೆ ಚರ್ಚೆ ನಡೆಸಿದ್ದಾರೆ. ಶೀಘ್ರದಲ್ಲೇ ರಾಜ್ಯದಲ್ಲಿ ನೂತನ ಸಂಪುಟ ರಚನೆಯಾಗುವ ಸಾಧ್ಯತೆ ಇದ್ದು, ಇದೇ ವೇಳೆ ಕೆಲ ಅಧಿಕಾರಿಗಳಿಗೂ ಗೇಟ್ ಪಾಸ್ ನೀಡಲಾಗಿದೆ.