Asianet Suvarna News Asianet Suvarna News

ಭಾರತ್ ಬಂದ್: ಕರ್ನಾಟಕ ರೈತ ಸಂಘಟನೆಗಳಿಗೆ ಸಿಎಂ ಮಹತ್ವದ ಮನವಿ

* ಸೆ.27ರಂದು ಭಾರತ್​ ಬಂದ್​
* ಕರ್ನಾಟಕದಲ್ಲೂ ಸಹ ರೈತ ಸಂಘಟನೆಗಳು ಬಂದ್‌ಗೆ ಬೆಂಬಲ
* ರೈತ ಸಂಘಟನೆಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಮನವಿ

CM Basavaraj Bommai Reacts on Bharat Bandh In Karnataka On Sept 26th rbj
Author
Bengaluru, First Published Sep 26, 2021, 6:41 PM IST

ಬೆಳಗಾವಿ, (ಸೆ.26): ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳ ವಿರುದ್ಧ  ರೈತಪರ ಸಂಘಟನೆಗಳು(Farmers Associations) ಮತ್ತೆ  ಸಿಡಿದೆದ್ದಿದ್ದು,  ನಾಳೆ ಅಂದರೆ ಸೆ.27ರಂದು ಭಾರತ್​ ಬಂದ್​ಗೆ(Bharat Bandh) ಕರೆ ನೀಡಿವೆ. 

ಹೀಗಾಗಿ ಕೆಲವು ಸೇವೆಗಳಲ್ಲಿ ವ್ಯತ್ಯಯವಾಗುವ ಸಾಧ್ಯೆತೆಗಳಿವೆ. ಸೋಮವಾರ ಭಾರತ್ ಬಂದ್​​ಗೆ ಕರೆ ನೀಡಿರುವ ಹಿನ್ನೆಲೆ, ಕರ್ನಾಟಕದಲ್ಲೂ ಸಹ ರೈತ ಸಂಘಟನೆಗಳು ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ನೀಡಿವೆ. ಆ ಸಂಘಟನೆಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ಸೆ.27ಕ್ಕೆ ಭಾರತ್‌ ಬಂದ್‌ : ಯಾರ್ಯಾರ ಬೆಂಬಲ

ಈ ಬಗ್ಗೆ ಬೆಳಗಾವಿಯಲ್ಲಿ ಇಂದು (ಸೆ.26) ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದಯವಿಟ್ಟು ರೈತ ಸಂಘಟನೆಗಳು ಸಹಕಾರ ಮಾಡಬೇಕು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಮನವಿ ಮಾಡಿಕೊಂಡಿದ್ದಾರೆ.

ನಾನು ಈಗಾಗಲೇ ಹೇಳಿದ್ದೇನೆ. ಈಗ ಕೋವಿಡ್​​ನಿಂದ ಎಲ್ಲರೂ ಹೊರಗೆ ಬಂದಿದ್ದಾರೆ. ಆರ್ಥಿಕ ಚಟುವಟಿಕೆಗಳು ಶುರುವಾಗಿವೆ. ಕೊರೋನಾ ಬಂದಾಗಿನಿಂದಾಗಿ ರೈತರಿಗೆ, ವ್ಯಾಪಾರಸ್ಥರಿಗೆ ತೊಂದರೆ ಆಗುತ್ತದೆ. ಜನ ಸಾಮಾನ್ಯರಿಗೆ ತೊಂದರೆ ಆಗುತ್ತಿದೆ. ಹೀಗಾಗಿ ರೈತ ಸಂಘಟನೆಗಳು ಸಹಕಾರ ಮಾಡಬೇಕು. ಕೋವಿಡ್​​ನಿಂದ ಹೊರಬರಲು, ಆರ್ಥಿಕ ಸಂಕಷ್ಟದಿಂದ ಹೊರ ಬರಲು ಅನುವು ಮಾಡಿ ಕೊಡಬೇಕು ಎಂದು ಮನವಿ ಮಾಡಿಕೊಳ್ಳುತ್ತೇನೆ ಎಂದರು.

Follow Us:
Download App:
  • android
  • ios