ಅಖಿಲ ಭಾರತ ವೀರಶೈವ ಮಹಾಸಭಾಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಪುತ್ರಿ ನೇಮಕವಾಗಿದ್ದು, ಗುರುವಾರ ಅಧಿಕಾರ ಸ್ವೀಕರಿಸಿದರು. 

ಬೆಂಗಳೂರು, (ಸೆ.24): ಅಖಿಲ ಭಾರತ ವೀರಶೈವ ಮಹಾಸಭಾದ ಕರ್ನಾಟಕ ರಾಜ್ಯ ಮಹಿಳಾ ವಿಭಾಗದ ಅಧ್ಯಕ್ಷರಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರಿ ಅರುಣಾದೇವಿ ಉದಯಕುಮಾರ ನೇಮಕವಾಗಿದ್ದಾರೆ. 

Add Asianetnews Kannada as a Preferred SourcegooglePreferred

ಮಹಾಸಭಾದ ಕೇಂದ್ರ ಕಚೇರಿಯಲ್ಲಿ ಇಂದು (ಗುರುವಾರ) ನಡೆದ ಪದಗ್ರಹಣ ಸಮಾರಂಭದಲ್ಲಿ ಅರುಣಾದೇವಿ ಉದಯಕುಮಾರ ಅಧಿಕಾರ ಸ್ವೀಕರಿಸಿದರು.

RCBಗೆ ಕನ್ನಡಿಗರ ಚಾಲೆಂಜ್, ವಿಫಲವಾಯ್ತು ಚೀನಾ ರಿವೇಂಜ್: ಸೆ.24ರ ಟಾಪ್ 10 ಸುದ್ದಿ!

ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ, ಮಹಾಪ್ರಧಾನ ಕಾರ್ಯದರ್ಶಿ ಈಶ್ವರ್ ಖಂಡ್ರೆ ಹಾಗೂ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ನಟರಾಜ್ ಸಾಗರನಹಳ್ಳಿ ಸಮ್ಮುಖದಲ್ಲಿ ಅವರು ಅಧಿಕಾರ ವಹಿಸಿಕೊಂಡರು ಎಂದು ಮಹಾಸಭಾ ಕಾರ್ಯದರ್ಶಿ ಎಚ್.ಎಂ.ರೇಣುಕ ಪ್ರಸನ್ನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.