ಶ್ರೀರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಆಸ್ಪತ್ರೆಯಿಂದಲೇ ವಿಶೇಷ ಮನವಿಯೊಂದನ್ನು ಮಾಡಿಕೊಂಡಿದ್ದಾರೆ.

ಬೆಂಗಳೂರು, (ಆ.04): ನಾಳೆ ಅಂದ್ರೆ ಆಗಸ್ಟ್ 5ರಂದು ಶ್ರೀರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಕೆ ಹಿನ್ನೆಲೆಯಲ್ಲಿ ರಾಜ್ಯದ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸುವಂತೆ ಸಿಎಂ ಬಿಎಸ್ ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ.

Add Asianetnews Kannada as a Preferred SourcegooglePreferred

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಾಳೆ ಪ್ರಭು ಶ್ರೀರಾಮಚಂದ್ರನ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಐತಿಹಾಸಿಕ ಶ್ರೀರಾಮ ದೇಗುಲಕ್ಕೆ ಭೂಮಿಪೂಜೆ ನೆರವೇರಿಸಲಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯದ ಎಲ್ಲ ದೇವಾಲಯಗಳಲ್ಲಿ ಮತ್ತು ಪ್ರತಿ ಮನೆಗಳಲ್ಲಿ ಇಷ್ಟದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಶ್ರೀ ರಾಮ ಮಂದಿರ ನಿರ್ಮಾಣ ಕಾರ್ಯ ನಿರ್ವಿಘ್ನವಾಗಿ ನಡೆಯಬೇಕೆಂದು ರಾಜ್ಯದ ಜನತೆಯಲ್ಲಿ ಸಿಎಂ ಮನವಿ ಮಾಡಿದ್ದಾರೆ.

ಆಗಸ್ಟ್​​ 5ರಂದು ಕರ್ನಾಟಕದಾದ್ಯಂತ ಪೊಲೀಸ್ ಸರ್ಪಗಾವಲು: ಬಾಲ ಬಿಚ್ಚಿದ್ರೆ ಹುಷಾರ್

Scroll to load tweet…

ಆಯೋಧ್ಯೆಯಲ್ಲಿ ರಾಮ ಮಂದಿರ ಭೂಮಿ ಪೂಜೆ ನೆರವೇರುವ ಸಂದರ್ಭದಲ್ಲಿ ರಾಜ್ಯದ ಧಾರ್ಮಿಕದತ್ತಿ ಇಲಾಖೆ, ಖಾಸಗಿ ದೇವಸ್ಥಾನಗಳಲ್ಲಿ ಪೂಜೆ ನಡೆಸಿ ಶ್ರೀರಾಮ ಮಂದಿರ ನಿರ್ಮಾಣ ಮಂಗಳಕರವಾಗರಲಿ ಎಂಬಆಶಯವನ್ನ ಸಿಎಂ ಯಡಿಯೂರಪ್ಪ ವ್ಯಕ್ತಪಡಿಸಿದ್ದಾರೆ. ಯಡಿಯೂರಪ್ಪ ಸೂಚನೆ ಮೇರೆಗೆ ಧಾರ್ಮಿಕ ದತ್ತಿ ಇಲಾಖೆ ಸುತ್ತೋಲೆ ಹೊರಡಿಸಿದೆ.