‘ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿದಂತೆ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ, ಅವು ಶೇಕಡಾ ನೂರಕ್ಕೆ ನೂರರಷ್ಟು ಮುಂದುವರಿಯುತ್ತವೆ’ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ನಕಲಿ ಖಾತೆಗಳನ್ನು ತಡೆಯಲು ಫಲಾನುಭವಿಗಳ ದೃಢೀಕರಣಕ್ಕಾಗಿ ಮರು ಅರ್ಜಿ ಕೇಳಲಾಗಿದೆಯೇ ಹೊರತು, ಯೋಜನೆ ನಿಲ್ಲಿಸಲು ಅಲ್ಲ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರು: ‘ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿ ಕಾಂಗ್ರೆಸ್ ಸರ್ಕಾರದ ಹೆಮ್ಮೆಯ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಶೇಕಡಾ ನೂರಕ್ಕೆ ನೂರರಷ್ಟು ಮುಂದುವರಿಯುತ್ತವೆ’ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ವಿರೋಧ ಪಕ್ಷಗಳು ಹಬ್ಬಿಸುತ್ತಿರುವ ಸುಳ್ಳು ಸುದ್ದಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದೂ ಅವರು ಮನವಿ ಮಾಡಿದ್ದಾರೆ.
ದೃಢೀಕರಣಕ್ಕಾಗಿ ಮತ್ತೊಮ್ಮೆ ಅರ್ಜಿ ಸಲ್ಲಿಕೆ
ಕೆಲವರು ಸತ್ತವರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ, ಅಕೌಂಟ್ ತೆರೆದು ಗ್ಯಾರಂಟಿ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಹೀಗಾಗಿ ಗ್ಯಾರಂಟಿ ಯೋಜನೆ ಫಲಾನುಭವಿಗಳ ದೃಢೀಕರಣಕ್ಕಾಗಿ ಅವರ ಹೆಸರು, ವಿಳಾಸ, ಅಕೌಂಟ್ ನಂಬರ್ ಖಚಿತಪಡಿಸಿಕೊಳ್ಳಲು ಮತ್ತೆ ಅರ್ಜಿ ಸಲ್ಲಿಸಲು ಹೇಳಲಾಗಿದೆಯೇ ಹೊರತು ಯೋಜನೆಗಳನ್ನು ನಿಲ್ಲಿಸಲು ಅಲ್ಲ ಎಂದು ತಿಳಿಸಿದ್ದಾರೆ.
ಎಲ್ಲಾ ಐದೂ ಗ್ಯಾರಂಟಿ ಯೋಜನೆಗಳೂ ಶೇಕಡಾ ನೂರಕ್ಕೆ ನೂರು ಮುಂದುವರೆಯುತ್ತವೆ. ಹಾಗಾಗಿ ಯಾವುದೇ ಫಲಾನುಭವಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ಅವರು ಪ್ರಕಟಣೆ ಮೂಲಕ ಸ್ಪಷ್ಟವಾಗಿ ಹೇಳಿದ್ದಾರೆ.


