ನಾರಾಯಣ ಗುರುಗಳು, ಕನಕದಾಸರು ಮತ್ತು ಬಸವಾದಿ ಶರಣರು ಮಾನವೀಯ ಮೌಲ್ಯವನ್ನು ಹೇಳಿದ್ದಾರೆ. ದಲಿತರನ್ನು ದೇವಸ್ಥಾನದ ಒಳಗೆ ಬಿಡದಿದ್ದರೆ ಆ ದೇವಸ್ಥಾನಕ್ಕೆ ಹೋಗುವುದನ್ನು ನಿಲ್ಲಿಸಿ, ನೀವೇ ದೇವಸ್ಥಾನ ಕಟ್ಟಿ, ನೀವೇ ಪೂಜೆ ಮಾಡಿ ಎಂದು ನಾರಾಯಣ ಗುರುಗಳು ಸರಳವಾದ ಉಪಾಯ ತೋರಿಸಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ 

ಬೆಂಗಳೂರು(ಜ.10): 'ದೇವರಿಲ್ಲ ಎಂದು ನಾನು ಹೇಳುವುದಿಲ್ಲ. ಆದರೆ ದೇವಸ್ಥಾನದಲ್ಲಿ ಮಾತ್ರ ಇದ್ದಾನೆ ಎನ್ನುವುದನ್ನು ಒಪ್ಪಲ್ಲ. ಆತ ಎಲ್ಲರ ಮನಸಿನಲ್ಲೂ ಇದ್ದಾನೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. 

Add Asianetnews Kannada as a Preferred SourcegooglePreferred

ಮಂಗಳವಾರ ಲೇಖಕ ಡಾ. ಎಂ.ಎಸ್.ಮುತ್ತುರಾಜ್ ಅವರ 'ಮಂಗಳವಾದ್ಯ' ಕಾದಂಬರಿ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ನಾರಾಯಣ ಗುರುಗಳು, ಕನಕದಾಸರು ಮತ್ತು ಬಸವಾದಿ ಶರಣರು ಮಾನವೀಯ ಮೌಲ್ಯವನ್ನು ಹೇಳಿದ್ದಾರೆ. ದಲಿತರನ್ನು ದೇವಸ್ಥಾನದ ಒಳಗೆ ಬಿಡದಿದ್ದರೆ ಆ ದೇವಸ್ಥಾನಕ್ಕೆ ಹೋಗುವುದನ್ನು ನಿಲ್ಲಿಸಿ, ನೀವೇ ದೇವಸ್ಥಾನ ಕಟ್ಟಿ, ನೀವೇ ಪೂಜೆ ಮಾಡಿ ಎಂದು ನಾರಾಯಣ ಗುರುಗಳು ಸರಳವಾದ ಉಪಾಯ ತೋರಿಸಿದ್ದಾರೆ.

ಗಣರಾಜ್ಯೋತ್ಸವ ಪರೇಡ್‌ಗೆ ಕರ್ನಾಟಕ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ: ಕನ್ನಡಿಗ ವಿರೋಧಿ ಸರ್ಕಾರವೆಂದ ಸಿಎಂ ಸಿದ್ದರಾಮಯ್ಯ

ದೇವರಿದ್ದಾನೆ. ಆದರೆ, ದೇವಸ್ಥಾನದಲ್ಲಿ ಮಾತ್ರ ದೇವರಿದ್ದಾನೆ ಎನ್ನುವುದು ಸರಿಯಲ್ಲ ಎಂದರು.