ಸದ್ಯ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗುತ್ತಿದೆ. ಇದೇ ಸಂದರ್ಭದಲ್ಲಿ ಮುಖಂಡರೋರ್ವರು ಸರ್ಕಾರದ ಅವಧಿ ಬಗ್ಗೆ ಭವಿಷ್ಯ ನುಡಿದಿದ್ದು ಬಜೆಟ್ ಒಳಗೆ ಪತನವಾಗುತ್ತದೆ ಎಂದಿದ್ದಾರೆ.

ಬೆಳಗಾವಿ: ಸರ್ಕಾರ ಪತನವಾಗುವುದು ಖಚಿತ ಎಂದು ಪದೇ ಪದೆ ಹೇಳುತ್ತಿದ್ದ ಮಾಜಿ ಸಚಿವ, ಶಾಸಕ ಉಮೇಶ ಕತ್ತಿ ಇದೀಗ ಮತ್ತೆ ಅದೇ ಮಾತನ್ನು ಪುನರುಚ್ಚರಿಸಿದ್ದಾರೆ.

Add Asianetnews Kannada as a Preferred SourcegooglePreferred

ಸೋಮವಾರ ಹುಕ್ಕೇರಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜೆಟ್‌ ಅಧಿವೇಶನ ಪೂರ್ವದಲ್ಲಿಯೇ ರಾಜ್ಯ ಸಮ್ಮಿಶ್ರ ಸರ್ಕಾರ ಪತನವಾಗಲಿದೆ. ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರವನ್ನು ಬಿಜೆಪಿ ಕೆಡುವುದಿಲ್ಲ. 

ಬಜೆಟ್‌ ಅಧಿವೇಶನದ ಮೊದಲು ಸಮ್ಮಿಶ್ರ ಸರ್ಕಾರ ಪತನಗೊಳ್ಳಲಿದೆ ಎಂದ ಅವರು, ಸಿಎಂ ಎಚ್‌.ಡಿ.ಕುಮಾರಸ್ವಾಮಿ ರಾಜೀನಾಮೆ ನೀಡುತ್ತೇನೆ ಎನ್ನುವುದು ಇದಕ್ಕೆ ನಿರ್ದಶನವಾಗಿದೆ ಎಂದರು.