ಪ್ರವಾದಿ ಮಹಮ್ಮದ್ ಪೈಗಂಬರ್ ಅವರನ್ನು ಅವಹೇಳನಕಾರಿಯಾಗಿ ನಿಂದಿಸಿದ ಯತಿ ನರಸಿಂಗಾನಂದ, ರಾಮಗಿರಿ ವಿರುದ್ಧ ಜೆಷ್ನೆ ಈದ್ ಮೀಲಾದುನ್ನಬಿ ಕಮಿಟಿಯಿಂದ ಸಮುದಾಯದ ಮುಖಂಡರು ನಗರದಲ್ಲಿ ಶನಿವಾರ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಿ ಖಂಡಿಸಿದರು.

ಹೊಸಪೇಟೆ (ಅ.28): ಪ್ರವಾದಿ ಮಹಮ್ಮದ್ ಪೈಗಂಬರ್ ಅವರನ್ನು ಅವಹೇಳನಕಾರಿಯಾಗಿ ನಿಂದಿಸಿದ ಯತಿ ನರಸಿಂಗಾನಂದ, ರಾಮಗಿರಿ ವಿರುದ್ಧ ಜೆಷ್ನೆ ಈದ್ ಮೀಲಾದುನ್ನಬಿ ಕಮಿಟಿಯಿಂದ ಸಮುದಾಯದ ಮುಖಂಡರು ನಗರದಲ್ಲಿ ಶನಿವಾರ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಿ ಖಂಡಿಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇಲ್ಲಿನ ಈದ್ಗಾ ಮೈದಾನದಿಂದ ಆರಂಭವಾದ ಬೃಹತ್ ಪ್ರತಿಭಟನಾ ರ‍್ಯಾಲಿಯಲ್ಲಿ ಸಮಾಜದ ಸಾವಿರಾರು ಜನರು, ಅವಮಾನಿಸಿದವರ ವಿರುದ್ಧ ಘೋಷಣೆ ಕೂಗುತ್ತಾ ಪಟ್ಟಣ ಪೊಲೀಸ್ ಠಾಣೆಯ ಮಾರ್ಗದ ಮೂಲಕ ಸಾಗಿ ಡಾ.ಪುನೀತ್ ರಾಜಕುಮಾರ ವೃತ್ತದಲ್ಲಿ ಆಗಮಿಸಿ ತಹಸೀಲ್ದಾರ್ ಶ್ರುತಿ ಎಂ.ಎಂ. ಅವರಿಗೆ ಮನವಿ ಸಲ್ಲಿಸಿದರು.

ಬಾಗಲಕೋಟೆ: ಪೈಗಂಬರ್‌ ಬಗ್ಗೆ ಅವಹೇಳನಕಾರಿ ಹೇಳಿಕೆ, ಸ್ವಾಮೀಜಿ ಬಂಧಿಸುವಂತೆ ಮುಸ್ಲಿಂ ಸಮುದಾಯ ಒತ್ತಾಯ

ಪ್ರವಾದಿ ಅವರನ್ನು ನಿಂದಿಸಿರುವ ಹೇಳಿಕೆಗಳು, ಸಮಾಜದ ಶಾಂತಿ ಮತ್ತು ಸಾಮರಸ್ಯ ಭಂಗಗೊಳಿಸುತ್ತವೆ. ಇಸ್ಲಾಮೋಫೋಬಿಯ, ಮುಸ್ಲಿಮರ ಬಗ್ಗೆ ತಾರತಮ್ಯದ ಮನೋಭಾವ ಉತ್ತೇಜಿಸುತ್ತದೆ. ಯಾವುದೇ ಧಾರ್ಮಿಕ ವ್ಯಕ್ತಿಯನ್ನು ಮಾನಹಾನಿ ಮಾಡುವುದು ಗಂಭೀರ ಅಪರಾಧವಾಗಿದೆ. ಕೂಡಲೇ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಹಾಸನ: ಪ್ರವಾದಿ ಮೊಹಮದ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ; ರಾಮಗಿರಿ ಮಹಾರಾಜ್ ಬಂಧನಕ್ಕೆ ಮುಸ್ಲಿಂ ಸಮುದಾಯ ಆಗ್ರಹ

ಭಾರತ ದೇಶ ಕೇವಲ ಹಿಂದೂ, ಇತರೆ ಧರ್ಮಗಳಿಗೆ ಮಾತ್ರವಲ್ಲ. ಇದು ಎಲ್ಲ ಧರ್ಮದವರ ದೇಶ. ಇಲ್ಲಿ ನಮಗೊಂದು ಸಂವಿಧಾನವಿದೆ. ಪ್ರವಾದಿಗಳನ್ನು ನಿಂದಿಸಲು ಯಾರಿಗೂ ಹಕ್ಕಿಲ್ಲ. ಇವನಾರವ, ಇವನಾರವ ಎಂದೆನಿಸದಿರಯ್ಯ, ಇವ ನಮ್ಮವ ಇವ ನಮ್ಮವ ಎಂದೆನಿಸಯ್ಯ ಎನ್ನುವ ವಚನಗಳ ಸಾಲುಗಳನ್ನು ಎಲ್ಲರೂ ಪಾಲಿಸಬೇಕು. ಸುಂದರ ಭಾರತ ದೇಶದಲ್ಲಿ ಎಲ್ಲ ಧರ್ಮದವರಿಗೆ ಜೀವಿಸುವ ಹಕ್ಕಿದೆ. ನಿಂದಿಸಿದವರಿಗೆ ಶಿಕ್ಷೆಯಾಗಬೇಕು. ಅವರನ್ನು ಬಂಧಿಸಿ ಉಗ್ರ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದರು.
ಕಮಿಟಿ ಅಧ್ಯಕ್ಷ ಕೆ. ಬಡಾವಲಿ, ಉಪಾಧ್ಯಕ್ಷ ಅಲ್ಲಾಭಕ್ಷಿ, ಕಾರ್ಯದರ್ಶಿ ಖಾದರ್ ರಫಾಯಿ, ಜಿಲ್ಲಾ ವಖ್ಫ್ ಬೋರ್ಡ್ ಅಧ್ಯಕ್ಷ ದಾದಾಪೀರ್ ಅಂಜುಮನ್ ಕಮಿಟಿಯ ಅಧ್ಯಕ್ಷ ಎಚ್.ಎನ್.ಎಫ್ ಇಮಾಮ್ ನಿಯಾಜಿ, ಖದಿರ್, ವಕೀಲ ಸದ್ದಾಮ್ ಹುಸೇನ್, ಅನ್ಸರ್ ಬಾಷಾ, ಮೋಷಿನ್, ಮುಸ್ಲಿಂ ಧರ್ಮಗುರುಗಳು, ಮುಖಂಡರು ಇದ್ದರು