* ಕರ್ನಾಟಕದಲ್ಲಿ ಕೊರೋನಾ ಸಂಖ್ಯೆಯಲ್ಲಿ ಭಾರೀ ಇಳಿಕೆ* ಹೊಸದಾಗಿ 397 ಜನರಿಗೆ  ಸೋಂಕು, 13 ಮಂದಿ ಸಾವು* ಪಾಸಿಟಿವಿಟಿ ದರ ಶೇಕಡ 0.50 

ಬೆಂಗಳೂರು, ಅ.04): ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಇಳಿಕೆಯಾಗಿದೆ. ಇಂದು (ಅ.04) ಹೊಸದಾಗಿ 397 ಜನರಿಗೆ ಸೋಂಕು ತಗುಲಿದ್ದು, 13 ಮಂದಿ ಸಾವನ್ನಪ್ಪಿದ್ದಾರೆ.

Add Asianetnews Kannada as a Preferred SourcegooglePreferred

ರಾಜ್ಯದಲ್ಲಿ ಸೋಮವಾರ 693 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,28,433ಕ್ಕೆ ಏರಿಕೆಯಾಗಿದೆ. ಇನ್ನು11,992 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇಕಡ 0.50 ರಷ್ಟು ಇದೆ.

ಅಪ್ಪಳಿಸಲಿದೆ 3ನೇ ಅಲೆ - ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ : ಎಚ್ಚರ!

ಇನ್ನು ಸೋಂಕಿತರ ಸಂಖ್ಯೆ 2,978,286ಕ್ಕೆ ಏರಿಕೆಯಾಗಿದ್ರೆ, ಸಾವಿನ ಸಂಖ್ಯೆ 37,832ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಸಚಿವ ಡಾ.ಕೆ ಸುಧಾಖರ್ ಅವರು ಟ್ವಿಟ್ಟರ್‌ ಮೂಲಕ ಮಾಹಿತಿ ನೀಡಿದ್ದಾರೆ..

ರಾಜಧಾನಿ ಬೆಂಗಳೂರಿನಲ್ಲಿ 166 ಜನರಿಗೆ ಸೋಂಕು ತಗುಲಿದ್ದು, 121 ಜನ ಬಿಡುಗಡೆಯಾಗಿದ್ದಾರೆ. 5 ಜನ ಮೃತಪಟ್ಟಿದ್ದಾರೆ. 7640 ಸಕ್ರಿಯ ಪ್ರಕರಣಗಳು ಇವೆ.

Scroll to load tweet…