ಹಲವು ಬಾರಿ ಸಮನ್ಸ್‌ ನೀಡಿದರೂ ಹಾಜರಾಗದಿರುವುದಕ್ಕೆ ಬೇಸರ ವ್ಯಕ್ತಪಡಿಸಿ ಮುಂದಿನ ವಿಚಾರಣೆ ಹಾಜರಾಗಬೇಕು ಎಂದು ತಿಳಿಸಿದ ನ್ಯಾಯಾಲಯ. 

ಬೆಂಗಳೂರು(ಫೆ.17): ಹಲಗೆವಡೇರಹಳ್ಳಿ ಡಿನೋಟಿಫಿಕೇಷನ್‌ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಪ್ಪದೇ ಮಾ.21ರಂದು ಹಾಜರಾಗಬೇಕು ಎಂದು ಜನಪ್ರತಿನಿಧಿಗಳ ನ್ಯಾಯಾಲಯ ಸೂಚನೆ ನೀಡಿದೆ.

Add Asianetnews Kannada as a Preferred SourcegooglePreferred

ಹಲವು ಬಾರಿ ನ್ಯಾಯಾಲಯಕ್ಕೆ ಹಾಜರಾಗಲು ವಿನಾಯಿತಿ ಕೋರಿದ್ದರು. ಇದಕ್ಕೆ ನ್ಯಾಯಾಲಯವು ಅಸಮಾಧಾನ ವ್ಯಕ್ತಪಡಿಸಿ ಮುಂದಿನ ವಿಚಾರಣೆಗೆ ಹಾಜರಾಗಬೇಕು ಎಂದು ಹೇಳಿ ಮಾ.21ಕ್ಕೆ ವಿಚಾರಣೆ ಮುಂದೂಡಿದೆ.

ಹಳ್ಳಿಗಳಿಗೆ ಹೋದರೆ ಡಬಲ್‌ ಎಂಜಿನ್‌ ವೈಫಲ್ಯ ತಿಳಿಯುತ್ತೆ: ಎಚ್‌ಡಿಕೆ

ಚಾಮರಾಜನಗರದ ಎಂ.ಎಸ್‌.ಮಹಾದೇವಸ್ವಾಮಿ ಅವರು ದೂರು ದಾಖಲಿಸಿದ್ದರು. ಈ ಮೊದಲು ಲೋಕಾಯುಕ್ತ ಪೊಲೀಸರು ಪ್ರಕರಣದಲ್ಲಿ ಬಿ ರಿಪೋರ್ಟ್‌ ಸಲ್ಲಿಕೆ ಮಾಡಿದ್ದರು. ಆದರೆ, ಜನಪ್ರತಿನಿಧಿಗಳ ನ್ಯಾಯಾಲಯವು ಅದನ್ನು ತಿರಸ್ಕರಿಸಿ ವಿಚಾರಣೆ ಹಾಜರಾಗಬೇಕು ಎಂದು ತಿಳಿಸಿತ್ತು. ಹಲವು ಬಾರಿ ಸಮನ್ಸ್‌ ನೀಡಿದರೂ ಹಾಜರಾಗದಿರುವುದಕ್ಕೆ ನ್ಯಾಯಾಲಯವು ಬೇಸರ ವ್ಯಕ್ತಪಡಿಸಿ ಮುಂದಿನ ವಿಚಾರಣೆ ಹಾಜರಾಗಬೇಕು ಎಂದು ತಿಳಿಸಿದೆ.