ದಾವಣಗೆರೆ ಯುವತಿ ಶ್ರೀಷ್ಮಾ ಹೆಗ್ಡೆ ದಿಲ್ಲಿಯಲ್ಲಿ ನಡೆಯುವ ಎನ್‌ಸಿಸಿ ಪರೇಡ್ ನೇತೃತ್ವ ವಹಿಸಲು ಆಯ್ಕೆಯಾಗಿದ್ದಾರೆ. ಈ ಮೂಲಕ ರಾಷ್ಟ್ರ ರಾಜಧಾನಿಯಲ್ಲಿ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ. 

ದಾವಣಗೆರೆ [ಜ.23]: 71 ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ದಿಲ್ಲಿಯಲ್ಲಿ ನಡೆಯುವ NCC ಪರೇಡ್ಗೆ ದಾವಣಗೆರೆಯ ಯುವತಿ ಲೀಡ್ ಮಾಡಲಿದ್ದಾರೆ. 

Add Asianetnews Kannada as a Preferred SourcegooglePreferred

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಶ್ರೀಷ್ಮಾ ಹೆಗ್ಡೆ ದಿಲ್ಲಿಯಲ್ಲಿ ಜನವರಿ 26 ರಂದು ನಡೆಯುವ ಗಣರಾಜ್ಯೋತ್ಸವದ ಎನ್ ಸಿಸಿ ಪರೇಡ್ ನೇತೃತ್ವ ವಹಿಸಲಿದ್ದಾರೆ. 

ಗಣರಾಜ್ಯೋತ್ಸವಕ್ಕೆ ಹಕ್ಕಿಪಿಕ್ಕಿ ಜನಾಂಗದ ದಂಪತಿ ಆಯ್ಕೆ...

ಡಾ.ಪ್ರವೀಣ್ ಹೆಗ್ಡೆ- ಬಿಂದು ಹೆಗ್ಡೆ ದಂಪತಿ ಪುತ್ರಿ ಶ್ರೀಷ್ಮಾ ಹೆಗ್ಡೆ ಹರಿಹರ ಸಮೀಪದ ಕುಮಾರಪಟ್ಟಣದ ಆದಿತ್ಯ ಬಿರ್ಲಾ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದು, ದೆಹಲಿಯ ಗಣರಾಜ್ಯೋತ್ಸವದ ಎನ್‌ಸಿಸಿ ಪರೇಡ್‌ಗೆ ಆಯ್ಕೆಯಾಗಿದ್ದು, ರಾಷ್ಟ್ರ ರಾಜಧಾನಿಯಲ್ಲಿ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ. 

ಗಣರಾಜ್ಯೋತ್ಸವ ಪಥಸಂಚಲನ: ರಾಜ್ಯದಿಂದ ಅನುಭವ ಮಂಟಪ ಸ್ತಬ್ಧ ಚಿತ್ರ...

2017ರಲ್ಲಿ ದೆಹಲಿ ಗಣರಾಜ್ಯೋತ್ಸದ ಪರೇಡ್‌ನಲ್ಲಿ ಕೊಡಗಿನ ಐಶ್ವರ್ಯಾ ಲೀಡ್ ಮಾಡಿದ್ದರು. 3 ವರ್ಷದ ನಂತರ ಮತ್ತೆ ಕರ್ನಾಟಕದ ಎನ್‌ಸಿಸಿ ಯುವತಿಗೆ ವಿಶೇಷ ಅವಕಾಶ ದೊರಕಿದ್ದು, ರಾಜ್ಯಕ್ಕೆ ಹೆಮ್ಮೆಯ ಸಂಗತಿಯಾಗಿದೆ.