ಬಿಜೆಪಿ ಟಿಕೆಟ್‌ಗಾಗಿ ಹಿರೇಹಡಗಲಿ ಹಾಲಮಠಕ್ಕೆ ಚೈತ್ರಾ ಕುಂದಪುರ ಜೊತೆಗೆ ಉದ್ಯಮಿ ಗೋವಿಂದ ಬಾಬು ಬಂದಿದ್ದರು. ಮಠದಲ್ಲಿ ಗೋವಿಂದ ಬಾಬು ಹಾಗೂ ಚೈತ್ರಾ ಕುಂದಾಪುರ ಅವರಿಗೆ ಅಭಿನವ ಹಾಲಶ್ರೀ ಅವರು ಆಶೀರ್ವಾದ ಮಾಡಿದ್ದರು. ಹೀಗಾಗಿ ಮಠದಲ್ಲಿಯೇ ಮಾತುಕತೆ ಕೋಟಿ ಕೋಟಿ ಮಾತುಕತೆ ನಡೆದಿತ್ತು ಎನ್ನುವ ಅನುಮಾನ. 

ವಿಜಯನಗರ(ಸೆ.14): ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ರೋಚಕ ಸುದ್ದಿಯೊಂದು ಬಂದಿದೆ. ಹೌದು, ಕೋಟಿ‌ ಕೋಟಿ ವಂಚನೆಯ ಮಾತುಕತೆ ಮಠದಲ್ಲಿಯೇ ನಡೆದಿತ್ತೇ ಎಂಬ ಚರ್ಚೆ ಶುರುವಾಗಿದೆ. 

Add Asianetnews Kannada as a Preferred SourcegooglePreferred

ಹಿರೇಹಡಗಲಿಯ ಹಾಲಮಠಕ್ಕೆ ಉದ್ಯಮಿ ಗೋವಿಂದ ಬಾಬು, ಚೈತ್ರಾ ಕುಂದಾಪುರ ಭೇಟಿ ನೀಡಿದ್ದರು. ಚುನಾವಣೆಗೂ ಮುನ್ನ ಉದ್ಯಮಿ ಗೋವಿಂದಬಾಬು, ಚೈತ್ರಾ ಕುಂದಾಪುರ ಅವರು ಮಠಕ್ಕೆ ಭೇಟಿ ನೀಡಿದ ಫೋಟೋ‌ಗಳು‌ ಇದೀಗ ಬಯಲಿಗೆ ಬಂದಿವೆ. 

ಚೈತ್ರಾ ಕುಂದಾಪುರ ಬಂಧನ ಬೆನ್ನಲ್ಲೇ ಅಜ್ಞಾತ ಸ್ಥಳಕ್ಕೆ ಹಾಲಶ್ರೀ

ಕೋಟಿ ಕೋಟಿ ವಂಚನೆ ಪ್ರಕರಣದಲ್ಲಿ ಅಭಿನ‌ವ ಹಾಲಶ್ರೀ ಸ್ವಾಮೀಜಿ A3 ಆರೋಪಿ‌ಯಾಗಿದ್ದಾರೆ. A1 ಆರೋಪಿ‌ ಚೈತ್ರಾ ಕುಂದಾಪುರ ಜೊತೆಗೆ ದೂರುದಾರ ಗೋವಿಂದ ಬಾಬು ಮಠಕ್ಕೆ ಭೇಟಿ ನೀಡಿದ್ದರು. ಬಿಜೆಪಿ ಟಿಕೆಟ್‌ ಕೊಡಿಸಲು ಅಭಿನವ ಹಾಲಶ್ರೀ ಶಿಫಾರಸ್ಸು ಮುಖ್ಯ ಅಂತ ಚೈತ್ರಾ ಕುಂದಾಪುರ ಹೇಳಿದ್ದರು. ಅಭಿನವ ಹಾಲಶ್ರೀಗೆ ಉದ್ಯಮಿ ಗೋವಿಂದ ಬಾಬು ಹಣ ನೀಡಿದ್ದರು. 

ಬಿಜೆಪಿ ಟಿಕೆಟ್‌ಗಾಗಿ ಹಿರೇಹಡಗಲಿ ಹಾಲಮಠಕ್ಕೆ ಚೈತ್ರಾ ಕುಂದಪುರ ಜೊತೆಗೆ ಉದ್ಯಮಿ ಗೋವಿಂದ ಬಾಬು ಬಂದಿದ್ದರು. ಮಠದಲ್ಲಿ ಗೋವಿಂದ ಬಾಬು ಹಾಗೂ ಚೈತ್ರಾ ಕುಂದಾಪುರ ಅವರಿಗೆ ಅಭಿನವ ಹಾಲಶ್ರೀ ಅವರು ಆಶೀರ್ವಾದ ಮಾಡಿದ್ದರು. ಹೀಗಾಗಿ ಮಠದಲ್ಲಿಯೇ ಮಾತುಕತೆ ಕೋಟಿ ಕೋಟಿ ಮಾತುಕತೆ ನಡೆದಿತ್ತು ಎನ್ನುವ ಅನುಮಾನ ವ್ಯಕ್ತವಾಗಿದೆ.