ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪ ಹಿನ್ನೆಲೆ ನಮೋ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಲಬುರಗಿ ನಗರದ ಬ್ರಹ್ಮಪುರ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಕಲಬುರಗಿ (ಜ.20): ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪ ಹಿನ್ನೆಲೆ ನಮೋ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಲಬುರಗಿ ನಗರದ ಬ್ರಹ್ಮಪುರ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

Add Asianetnews Kannada as a Preferred SourcegooglePreferred

ರಾಯಚೂರು ಜಿಲ್ಲೆಯಲ್ಲಿ ನಡೆದಿದ್ದ ನಮೋ ಬ್ರಿಗೇಡ್ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಸೂಲಿಬೆಲೆ. ಈ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನ ಅಯೋಗ್ಯ ಎಂದು ನಿಂದಿಸಿದ್ದಾರೆಂದು ಆರೋಪಿಸಲಾಗಿದೆ. ಅವಹೇಳನಕಾರಿ ಹೇಳಿಕೆ ಸಂಬಂಧ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಗದೇವ್ ಗುತ್ತೇದಾರ್ ಸೂಲಿಬೆಲೆ ವಿರುದ್ಧಕ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಅನ್ವಯ ಐಪಿಸಿ 153(A), 153(B) ಮತ್ತು 3(2) SC/ST ಕಾಯ್ದೆಯಡಿ ಪ್ರಕರಣ ದಾಖಲು ಮಾಡಿಕೊಂಡಿರುವ ಬ್ರಹ್ಮಪುರ ಠಾಣೆ ಪೊಲೀಸರು.

ಕಾಂಗ್ರೆಸ್‌ ಮುಸ್ಲಿಂ ಪಾರ್ಟಿಯಾಗಿ ನಿರ್ಮಾಣಗೊಂಡಿದೆ : ಚಕ್ರವರ್ತಿ ಸೂಲಿಬೆಲೆ