ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಹುದ್ದೆಗೆ ನೇಮಕವಾದ ಎರಡು ತಿಂಗಳ ಬಳಿಕ ಮೇ 31ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರು(ಮೇ 15): ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಹುದ್ದೆಗೆ ನೇಮಕವಾದ ಎರಡು ತಿಂಗಳ ಬಳಿಕ ಮೇ 31ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

Add Asianetnews Kannada as a Preferred SourcegooglePreferred

‘ಕೆಪಿಸಿಸಿ ಕಚೇರಿಯಲ್ಲಿ ಇತ್ತೀಚೆಗೆ ನಡೆದ ಕಾಂಗ್ರೆಸ್‌ ಹಿರಿಯ ನಾಯಕರ ಸಭೆಯಲ್ಲಿ ಮೇ 22 ಅಥವಾ 27 ರಂದು ಸರಳ ಸಮಾರಂಭದ ಮೂಲಕ ಪ್ರಮಾಣವಚನ ಸ್ವೀಕಾರ ಮಾಡಬೇಕು ಎಂದು ನಿರ್ಧರಿಸಲಾಗಿತ್ತು.

81000 ಸೋಂಕಿತರು: ಚೀನಾ ಹಿಂದಿಕ್ಕುವತ್ತ ಭಾರತ! ಒಂದೇ ದಿನ 99 ಸಾವು

ಆದರೆ, ಶಿವಕುಮಾರ್‌ ಅವರು ನೊಣವಿನಕೆರೆಯ ಕಾಡು ಸಿದ್ದೇಶ್ವರ ಮಠದ ಅಜ್ಜಯ್ಯರ ಆಶೀರ್ವಾದ ಪಡೆಯಲು ಇತ್ತೀಚೆಗೆ ತೆರಳಿದ್ದು, ಈ ವೇಳೆ ಅಜ್ಜಯ್ಯ ನೀಡಿದ ಸೂಚನೆಯಂತೆ ಮೇ 31ಕ್ಕೆ ಪ್ರಮಾಣವಚನ ಸ್ವೀಕರಿಸಲು ನಿರ್ಧರಿಸಿದ್ದಾರೆ’ ಎಂದು ಮೂಲಗಳು ತಿಳಿಸಿವೆ.

ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದ ವೇಳೆ ರಾಜ್ಯಾದ್ಯಂತ ಸಾರ್ವಜನಿಕರಿಗೆ ಉಪಯೋಗವಾಗುವಂತಹ ಕಾರ್ಯಕ್ರಮವೊಂದನ್ನು ರೂಪಿಸಲು ಸಹ ಕಾಂಗ್ರೆಸ್‌ ಸಿದ್ಧತೆ ನಡೆಸಿದೆ. ಕಾರ್ಯಕ್ರಮವನ್ನು ಪ್ರತಿ ಬೂತ್‌ ಮಟ್ಟದಲ್ಲಿ ಅನುಷ್ಠಾನಗೊಳಿಸಬೇಕು. ಈ ಮೂಲಕ ನೂತನ ಅಧ್ಯಕ್ಷರ ನೇಮಕದ ಬಳಿಕ ತಳಮಟ್ಟದಲ್ಲಿ ಪಕ್ಷ ಸಂಘಟನೆಗೆ ಆದ್ಯತೆ ನೀಡಬೇಕು ಎಂದು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.