ರಾಜ್ಯದಲ್ಲಿ ಕಾಂಗ್ರೆಸ್‌ ಜಯಗಳಿಸುತ್ತದೆ ಎಂದು ಹಿಂದೆಯೇ ಹೇಳಿದ್ದೆ. ಜನರು ಬಹುಮತ ನೀಡಿದ್ದು, ನಿಸ್ವಾರ್ಥದಿಂದ ಜನಸೇವೆ ಮಾಡಲು ಕಾಂಗ್ರೆಸ್‌ ಶಾಸಕರು ಮುಂದಾಗಬೇಕು: ದ್ವಾರಕಾನಾಥ್‌ 

ಬೆಂಗಳೂರು(ಮೇ.20): ಡಿ.ಕೆ. ಶಿವಕುಮಾರ್‌ ಅವರಿಗೆ ಈ ರಾಜ್ಯದ ಮುಖ್ಯಮಂತ್ರಿಯಾಗುವ ಯೋಗವಿದೆ. ಅವರಿಗೆ ಅಧಿಕಾರ ತಪ್ಪಿ ಹೋಗುವ ಮಾತೇ ಇಲ್ಲ ಎಂದು ಜ್ಯೋತಿಷಿ ದ್ವಾರಕಾನಾಥ್‌ ಹೇಳಿದರು.

Add Asianetnews Kannada as a Preferred SourcegooglePreferred

ತಮ್ಮ ನಿವಾಸಕ್ಕೆ ಬಂದ ಎಐಸಿಸಿ ವೀಕ್ಷಕ ಸುಶೀಲ್‌ ಕುಮಾರ್‌ ಶಿಂಧೆ ಅವರನ್ನು ಭೇಟಿ ಮಾಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ‘ಡಿ.ಕೆ. ಶಿವಕುಮಾರ್‌ ಅವರಿಗೆ ಅಧಿಕಾರ ತಪ್ಪಿ ಹೋಗುವ ಮಾತೇ ಇಲ್ಲ. ಮುಂದೆ ಅವರು ಈ ರಾಜ್ಯದ ಮುಖ್ಯಮಂತ್ರಿಯಾಗುತ್ತಾರೆ. ಮುಂದಿನ 2.5 ವರ್ಷದ ನಂತರ ಡಿ.ಕೆ. ಶಿವಕುಮಾರ್‌ ಅವರಿಗೆ ಅಧಿಕಾರದ ಯೋಗವಿಲ್ಲ ಎಂದು ಕೆಲವರು ವಾದ ಮಾಡುತ್ತಾರೆ. ಅದನ್ನು ನಾನು ಒಪ್ಪುವುದಿಲ್ಲ. ರಾಜ್ಯದ ಚುಕ್ಕಾಣಿ ಹಿಡಿದು ಆಡಳಿತ ನಡೆಸುತ್ತಾರೆ’ ಎಂದರು.

ಎಲ್ಲ ಕೆಲಸಕ್ಕೂ ಈ ಅಜ್ಜಯ್ಯನ ಅಪ್ಪಣೆಗೆ ಕಾಯ್ತಾರೆ ಡಿಕೆಶಿ, ಅವರ ಮಹಾತ್ಮೆ ಏನು?

‘ರಾಜ್ಯದಲ್ಲಿ ಕಾಂಗ್ರೆಸ್‌ ಜಯಗಳಿಸುತ್ತದೆ ಎಂದು ಹಿಂದೆಯೇ ಹೇಳಿದ್ದೆ. ಜನರು ಬಹುಮತ ನೀಡಿದ್ದು, ನಿಸ್ವಾರ್ಥದಿಂದ ಜನಸೇವೆ ಮಾಡಲು ಕಾಂಗ್ರೆಸ್‌ ಶಾಸಕರು ಮುಂದಾಗಬೇಕು’ ಎಂದರು. ದ್ವಾರಕಾನಾಥ್‌ ಅವರ ಪುತ್ರ ಡಾ. ಶಂಕರ್‌ ಗುಹಾ ಇತರರಿದ್ದರು.