Asianet Suvarna News Asianet Suvarna News

ನೀರಿಲ್ಲ, ಅನ್ನವಿಲ್ಲ ಶಬರಿಮಲೆಗೆ ಬರಬೇಡಿ: ಕನ್ನಡಿಗರ ಆಕ್ರೋಶ

ಶಬಬರಿಮಲೆ ಭಕ್ತರಿಗೆ ಕನಿಷ್ಠ ಶೌಚ ವ್ಯವಸ್ಥೆಯೂ ಇಲ್ಲ, ಕೇರಳ ಸರ್ಕಾರಕ್ಕೆ ನಾಚಿಕೆಯಾಗಬೇಕು: ಛೀಮಾರಿ ಹಾಕಿದ ಕನ್ನಡಿಗರು, ಭಾನುವಾರ ದಾಖಲೆಯ 1.2 ಲಕ್ಷ ಭಕ್ತಾದಿಗಳಿಂದ ಅಯ್ಯಪ್ಪನ ದರ್ಶನ. 

Do Not Come to Sabarimala For Not Water Food Says Kannadigas grg
Author
First Published Dec 26, 2023, 6:35 AM IST

ಕೊಚ್ಚಿ(ಡಿ.26): ‘ನಮಗಿಲ್ಲಿ ಕುಡಿಯಲು ನೀರಿಲ್ಲ. ಹಸಿವಾಗುತ್ತಿದ್ದರೂ ತಿನ್ನಲು ಅನ್ನವಿಲ್ಲ. ಅಷ್ಟೇ ಏಕೆ ಕನಿಷ್ಠ ಪಕ್ಷ ನಮಗೆ ಶೌಚದ ವ್ಯವಸ್ಥೆ ಕೂಡ ಇಲ್ಲ. ಆ ಸಿಎಂ ಪಿಣರಾಯಿ ವಿಜಯನ್‌ ಇದನ್ನೆಲ್ಲ ನೋಡಲ್ವ? ಅಯ್ಯೋ ನಿಮ್ಮ ಕೈ ಮುಗಿತೀವಿ ದಯವಿಟ್ಟು ಯಾರೂ ಶಬರಿಮೆಲೆಗೆ ಬರಬೇಡಿ’ ಇದು ಕೇರಳದ ಶಬರಿಮಲೆಯಲ್ಲಿ ತೀವ್ರ ಸಂಕಷ್ಟ ಅನುಭವಿಸುತ್ತಿರುವ ಕನ್ನಡಿಗ ಭಕ್ತರ ಗೋಳು.

ಈ ಬಾರಿ ಶಬರಿಮಲೆಯಲ್ಲಿ ಭಾರೀ ಅವ್ಯವಸ್ಥೆ ಉಂಟಾಗಿದ್ದು, ಭಕ್ತರಿಗೆ ಯಾವುದೇ ಕನಿಷ್ಠ ಮೂಲಭೂತ ಸೌಕರ್ಯ ಒದಗಿಸುವಲ್ಲಿಯೂ ಕೇರಳ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಭಕ್ತಾದಿಗಳಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ. ಇದರ ಹೊರತಾಗಿಯೂ ಪರಿಸ್ಥಿತಿಯಲ್ಲಿ ಸುಧಾರಣೆಯಾಗದ ಕುರಿತು ಶಬರಿಮೆಲೆಗೆ ತೆರಳಿರುವ ಕರ್ನಾಟಕ, ತಮಿಳುನಾಡು ಸೇರಿದಂತೆ ಇತರ ಭಕ್ತಾದಿಗಳು ತಮ್ಮ ಪರಿಸ್ಥಿತಿಯ ಬಗ್ಗೆ ಹೇಳಿಕೊಂಡು ಕೇರಳ ಸರ್ಕಾರ ಹಿಡಿಶಾಪ ಹಾಕಿದ್ದಾರೆ.

ಶಬರಿಮಲೆಯಿಂದ ಬರುವವರಿಗೆ ಕೋವಿಡ್‌ ಪರೀಕ್ಷೆ: ಸಚಿವ ರಾಜಣ್ಣ

ಭಕ್ತರು ಹೇಳಿದ್ದೇನು?

ನಮಗೆ ಇಲ್ಲಿ ಕನಿಷ್ಠ ಶೌಚಾಲಯ ವ್ಯವಸ್ಥೆಯೂ ಇಲ್ಲ. ಕುಡಿಯಲು ನೀರಿಲ್ಲ, ಊಟ ಮಾಡಲು ಏನೂ ಆಹಾರವಿಲ್ಲ. ಅಯ್ಯೋ ನಿಮ್ಮ ಕೈ ಮುಗೀತಿವಿ ಇನ್ನು ಶಬರಿಮಲೆಗೆ ದಯವಿಟ್ಟು ಯಾರೂ ಬರಬೇಡಿ. ಪೊಲೀಸರು ಕೂಡ ನಮ್ಮ ಮೇಲೆ ದೌರ್ಜನ್ಯ ಮಾಡ್ತಿದ್ದಾರೆ, ದಾದಾಗಿರಿ ಮಾಡ್ತಿದ್ದಾರೆ. ಪೊಲೀಸರು ನಮಗೆ ಶೂ ತೋರಿಸುತ್ತಿದ್ದಾರೆ. ಆದರೆ ಯಾಕೆ ಅವರು ನಮಗೆ ಶೂ ತೋರಿಸಬೇಕು? ಕೇರಳ ಸಿಎಂ ಪಿಣರಾಯಿ ವಿಜಯನ್‌ ಅವರು ಇದನ್ನೆಲ್ಲ ನೋಡಲ್ವ? ಇಂಥ ಅವ್ಯವಸ್ಥೆಗೆ ಈ ಕೇರಳ ಸರ್ಕಾರಕ್ಕೆ ನಾಚಿಕೆಯಾಗಬೇಕು. ವಾಹನ ಸಂಚಾರ ವ್ಯವಸ್ಥೆಯಿಲ್ಲದೇ ಟ್ರಾಫಿಕ್‌ನಿಂದ ಇಡೀ ದಿನ ಬಿಸಿಲಿನಲ್ಲಿ ಗಾಡಿಯಲ್ಲೇ ಕಾಯ್ತಿದ್ದೇವೆ. ಕೇರಳ ಸರ್ಕಾರಕ್ಕೆ ಧಿಕ್ಕಾರ ಕೂಗ್ತೀವಿ, ಕೇರಳ ಸರ್ಕಾರಕ್ಕೆ ಶೇಮ್‌ ಶೇಮ್‌ ಎಂದಿದ್ದಾರೆ

1.2 ಲಕ್ಷ ಭಕ್ತಾದಿಗಳ ಆಗಮನ

ಇನ್ನು ಅವ್ಯವಸ್ಥೆ ಗದ್ದಲ, ಆಕ್ರೋಶಗಳ ನಡುವೆಯೇ ಭಾನುವಾರ ಬರೋಬ್ಬರಿ ದಾಖಲೆಯ 1.2 ಲಕ್ಷ ಭಕ್ತಾದಿಗಳು ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದಿದ್ದಾರೆ.

ಹೊಸ ರೂಪ ಬದಲಿಸಿ ದಾಳಿ ಮಾಡ್ತಿರುವ ಎಓ.1 ವೈರಸ್..! ಅಯ್ಯಪ್ಪ ಭಕ್ತರೇ ಕುರುನಾಡಿಗೆ ಕಂಟಕ ಆಗ್ತಾರಾ..?

ಭಕ್ತರಿಗೆ ನೀರು, ಆಹಾರ ನೀಡಿ: ಶಬರಿಮಲೆ ಮಂಡಳಿಗೆ ಹೈಕೋರ್ಟ್

ಶಬರಿಮಲೆಗೆ ಹೋಗುವ ರಸ್ತೆಗಳಲ್ಲಿ ಭಕ್ತರು ಸುಮಾರು 12 ಗಂಟೆಗಳ ಕಾಲ ಆಹಾರ ಮತ್ತು ನೀರಿಲ್ಲದೆ ಸಿಲುಕಿಕೊಂಡಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ ಭಕ್ತಾದಿಗಳಿಗೆ ಆಹಾರ ಮತ್ತು ನೀರಿನ ವ್ಯವಸ್ಥೆ ಮಾಡುವಂತೆ ಶಬರಿಮಲೆ ಅಯ್ಯಪ್ಪ ದೇಗುಲದ ಮಂಡಳಿಗೆ ಕೇರಳ ಹೈಕೋರ್ಟ್ ಸೂಚಿಸಿದೆ.

ಸೋಮವಾರ ನ್ಯಾಯಾಲಯದ ವಿಶೇಷ ಪೀಠವು ‘ವಾರ್ಷಿಕ ಶಬರಿಮಲೆ ಮಂಡಲಂ-ಮಕರವಿಳಕ್ಕು ತೀರ್ಥಯಾತ್ರೆ ಗೆ ಬರುವ ಭಕ್ತಾದಿಗಳಿಗಾಗಿ ‘ಎಡತಾವಲಮ್‌’ನಲ್ಲಿ ಅಲ್ಪಾವದಿ ತಂಗುದಾಣ, ನೀರು, ಊಟ ಮತ್ತು ಇತರ ಸೌಲಭ್ಯಗಳನ್ನು ಒದಗಿಸುವಂತೆ ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ)ಗೆ ನಿರ್ದೇಶನ ನೀಡಿದೆ. ಅಲ್ಲದೇ ಜನಸಂದಣಿ ನಿಯಂತ್ರಣ ಮತ್ತು ಇತರ ಮೇಲ್ವಿಚಾರಣೆಗೆ ಅಗತ್ಯ ಬಿದ್ದರೆ ಹೆಚ್ಚಿನ ಪೊಲೀಸರನ್ನು ನಿಯೋಜಿಸುವಂತೆ ಪೊಲೀಸ್‌ ಮುಖ್ಯಸ್ಥರಿಗೆ ಸೂಚಿಸಿದೆ.

Latest Videos
Follow Us:
Download App:
  • android
  • ios