ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಅವರು ಕನ್ನಡದಲ್ಲಿ ನಾಮಫಲಕ ಹಾಕುವಂತೆ ಮಾಡಲು ಹೋರಾಟ ಮಾಡುತ್ತಿದ್ದು, ಅವರ ವಿರುದ್ಧ ಸುಳ್ಳು ಕೇಸು ದಾಖಲಿಸದಂತೆ ಪೊಲೀಸ್‌ ಆಯುಕ್ತರಿಗೆ ಸೂಚಿಸಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ಬೆಂಗಳೂರು (ಡಿ.18): ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಅವರು ಕನ್ನಡದಲ್ಲಿ ನಾಮಫಲಕ ಹಾಕುವಂತೆ ಮಾಡಲು ಹೋರಾಟ ಮಾಡುತ್ತಿದ್ದು, ಅವರ ವಿರುದ್ಧ ಸುಳ್ಳು ಕೇಸು ದಾಖಲಿಸದಂತೆ ಪೊಲೀಸ್‌ ಆಯುಕ್ತರಿಗೆ ಸೂಚಿಸಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

Add Asianetnews Kannada as a Preferred SourcegooglePreferred

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಮ್ಮ ಹಾಗೂ ಟಿ.ಎ.ನಾರಾಯಣಗೌಡ ಅವರ ಭೇಟಿ ಕುರಿತು ಪ್ರತಿಕ್ರಿಯಿಸಿದರು.

ನಾರಾಯಣಗೌಡ ಅವರು ಹೋರಾಟಗಾರರು, ಹೋರಾಟ ಮಾಡುವುದು ಸಹಜ. ಕರ್ನಾಟಕದಲ್ಲಿ ಕನ್ನಡದಲ್ಲಿ ನಾಮಫಲಕ ಹಾಕುವಂತೆ ಆದೇಶ ಇದೆ. ಯಾರೋ ಅವರ ವಿರುದ್ಧ ದೂರು ನೀಡಿದ್ದಾರೆ. ಆ ಸಂಬಂಧ ಮಾತನಾಡಿದೆವು ಎಂದು ಹೇಳಿದರು.

'ಭಾರತ ಹಿಂದೂ ರಾಷ್ಟ್ರವಾಗಲು ಸಾಧ್ಯವಿಲ್ಲ, ಇದು ಬಹುತ್ವದ ದೇಶ' : ಸಿಎಂ

ಈ ಬಗ್ಗೆ ನಾನು ಪೊಲೀಸ್ ಆಯುಕ್ತರ ಜೊತೆ ಮಾತನಾಡಿದ್ದೇನೆ. ಹೋರಾಟಗಾರರಿಗೆ ನಾವು ಎಷ್ಟು ಗೌರವ ನೀಡಬೇಕೋ ಅದನ್ನು ನೀಡಲೇಬೇಕು. ಅವರ ಹೋರಾಟದಿಂದ ಕನ್ನಡ ಉಳಿಯುತ್ತಿದೆ. ಅವರಿಗೆ ರಾಜಕೀಯ ಬೇಡ. ಅವರ ವಿರುದ್ಧ ಸುಳ್ಳು ಕೇಸು ದಾಖಲಿಸಬಾರದು ಎಂದು ಆಯುಕ್ತರಿಗೆ ಹೇಳಿದ್ದೇನೆ ಎಂದರು.